<p><strong>ಕನಕಪುರ:</strong> ಕೆಂಪೇಗೌಡರ ಜಯಂತಿಯನ್ನು ಕಾಟಾಚಾರಕ್ಕೆ ಆಯೋಜನೆ ಮಾಡಿ ಆಚರಣೆ ಮಾಡಬೇಡಿ. ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಬೇಕೆಂದು ಸಂಘ–ಸಂಸ್ಥೆ ಮುಖಂಡರು ತಾಲ್ಲೂಕು ಆಡಳಿತವನ್ನು ಮನವಿ ಮಾಡಿದರು.</p>.<p>ತಾಲ್ಲೂಕು ಕಚೇರಿ ತಹಶೀಲ್ದಾರ್ ಸಭಾಂಗಣದಲ್ಲಿ ನಡೆದ ಕೆಂಪೇಗೌಡ ಜಯಂತಿ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ವಿವಿಧ ಸಂಘಟನೆಗಳ ಮುಖಂಡರು ಸಭೆಯಲ್ಲಿ ಮಾತನಾಡಿ, ನಾಡಪ್ರಭು ಕೆಂಪೇಗೌಡರು ಬೆಂಗಳೂರು ಸೇರಿದಂತೆ ಈ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಜಯಂತಿಯನ್ನು ಗೌರವ ತರುವಂತೆ ಅರ್ಥಪೂರ್ಣವಾಗಿ ಆಚರಿಸಬೇಕೆಂದು ಒತ್ತಾಯಿಸಿದರು.</p>.<p>ತಹಶೀಲ್ದಾರ್ ಮಂಜುನಾಥ್ ಮಾತನಾಡಿ, ಜೂನ್ 27ರಂದು ನಡೆಯುವ ಕೆಂಪೇಗೌಡರ ಜಯಂತಿಯನ್ನು ಯಾವ ರೀತಿ ಆಯೋಜನೆ ಮಾಡಬೇಕು ಎಂದು ಹೋರಾಟಗಾರರು, ಸಂಘ–ಸಂಸ್ಥೆ ಮುಖಂಡರು, ಸಾರ್ವಜನಿಕರು ಸಲಹೆ ನೀಡಿದ್ದಾರೆ. ಎಲ್ಲರ ಸಹಕಾರೊಂದಿಗೆ ಆಚರಿಸಲಾಗುವುದು ಎಂದರು. </p>.<p>ತಾಲ್ಲೂಕು ಪಂಚಾಯಿತಿ ಇಒ ಅವಿನಾಶ್, ಅರಣ್ಯ ಇಲಾಖೆ ಆರ್ಎಫ್ಒ ರವಿ, ಪಶು ಇಲಾಖೆ ಡಾ.ಯು.ಸಿ ಕುಮಾರ್, ಶಿಕ್ಷಣ ಇಲಾಖೆ ಸತೀಶ್, ಕೃಷಿ ಇಲಾಖೆ ರಾಧಾಕೃಷ್ಣ , ಸಾಹಿತಿ ಕೂ.ಗಿ.ಗಿರಿಯಪ್ಪ, ಗಬ್ಬಾಡಿ ಕಾಡೇಗೌಡ, ಗ್ರಾಮ ಪಂಚಾಯಿತಿ ಸದಸ್ಯ ಕುಮಾರಸ್ವಾಮಿ, ಡಿ.ಕೆ.ರಾಮಕೃಷ್ಣ, ಪ್ರಶಾಂತ್ ಹೊಸದುರ್ಗ, ನಟರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ಕೆಂಪೇಗೌಡರ ಜಯಂತಿಯನ್ನು ಕಾಟಾಚಾರಕ್ಕೆ ಆಯೋಜನೆ ಮಾಡಿ ಆಚರಣೆ ಮಾಡಬೇಡಿ. ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಬೇಕೆಂದು ಸಂಘ–ಸಂಸ್ಥೆ ಮುಖಂಡರು ತಾಲ್ಲೂಕು ಆಡಳಿತವನ್ನು ಮನವಿ ಮಾಡಿದರು.</p>.<p>ತಾಲ್ಲೂಕು ಕಚೇರಿ ತಹಶೀಲ್ದಾರ್ ಸಭಾಂಗಣದಲ್ಲಿ ನಡೆದ ಕೆಂಪೇಗೌಡ ಜಯಂತಿ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ವಿವಿಧ ಸಂಘಟನೆಗಳ ಮುಖಂಡರು ಸಭೆಯಲ್ಲಿ ಮಾತನಾಡಿ, ನಾಡಪ್ರಭು ಕೆಂಪೇಗೌಡರು ಬೆಂಗಳೂರು ಸೇರಿದಂತೆ ಈ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಜಯಂತಿಯನ್ನು ಗೌರವ ತರುವಂತೆ ಅರ್ಥಪೂರ್ಣವಾಗಿ ಆಚರಿಸಬೇಕೆಂದು ಒತ್ತಾಯಿಸಿದರು.</p>.<p>ತಹಶೀಲ್ದಾರ್ ಮಂಜುನಾಥ್ ಮಾತನಾಡಿ, ಜೂನ್ 27ರಂದು ನಡೆಯುವ ಕೆಂಪೇಗೌಡರ ಜಯಂತಿಯನ್ನು ಯಾವ ರೀತಿ ಆಯೋಜನೆ ಮಾಡಬೇಕು ಎಂದು ಹೋರಾಟಗಾರರು, ಸಂಘ–ಸಂಸ್ಥೆ ಮುಖಂಡರು, ಸಾರ್ವಜನಿಕರು ಸಲಹೆ ನೀಡಿದ್ದಾರೆ. ಎಲ್ಲರ ಸಹಕಾರೊಂದಿಗೆ ಆಚರಿಸಲಾಗುವುದು ಎಂದರು. </p>.<p>ತಾಲ್ಲೂಕು ಪಂಚಾಯಿತಿ ಇಒ ಅವಿನಾಶ್, ಅರಣ್ಯ ಇಲಾಖೆ ಆರ್ಎಫ್ಒ ರವಿ, ಪಶು ಇಲಾಖೆ ಡಾ.ಯು.ಸಿ ಕುಮಾರ್, ಶಿಕ್ಷಣ ಇಲಾಖೆ ಸತೀಶ್, ಕೃಷಿ ಇಲಾಖೆ ರಾಧಾಕೃಷ್ಣ , ಸಾಹಿತಿ ಕೂ.ಗಿ.ಗಿರಿಯಪ್ಪ, ಗಬ್ಬಾಡಿ ಕಾಡೇಗೌಡ, ಗ್ರಾಮ ಪಂಚಾಯಿತಿ ಸದಸ್ಯ ಕುಮಾರಸ್ವಾಮಿ, ಡಿ.ಕೆ.ರಾಮಕೃಷ್ಣ, ಪ್ರಶಾಂತ್ ಹೊಸದುರ್ಗ, ನಟರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>