<p><strong>ಕನಕಪುರ</strong>: ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ತಾಲ್ಲೂಕು ಕಚೇರಿ ಮತ್ತು ನಗರಸಭೆ ಸಹಯೋಗದಲ್ಲಿ ಇಲ್ಲಿನ ಬಿಜಿಎಸ್ ಬಡಾವಣೆಯಲ್ಲಿ ಸ್ವಚ್ಚತೆ ಹಾಗೂ ಪರಿಸರ ಸಂರಕ್ಷಣೆ ಕುರಿತು ಕಾನೂನು ಅರಿವು ಮತ್ತು ಜಾಗೃತಿ ಕಾರ್ಯಕ್ರಮ ಶನಿವಾರ ನಡೆಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಕನಕಪುರ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶರಾದ ಬಿ.ವಿ. ಲತಾಶ್ರೀ, ‘ನಮ್ಮ ಮನೆಯನ್ನು ಯಾವ ರೀತಿ ಅಚ್ಚುಕಟ್ಟಾಗಿ ಇಟ್ಟಿಕೊಂಡಿರುತ್ತೇವೆ. ಹಾಗೆ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ’ ಎಂದರು.</p>.<p>‘ನಾವು ವಾಸಿಸುವ ಪರಿಸರ ಸ್ವಚ್ಛವಾಗಿದ್ದರೆ ರೋಗರುಜಿನಗಳು ಹರಡುವುದಿಲ್ಲ, ನಾವು ಇರುವ ಜಾಗ ನಮ್ಮ ಸುತ್ತಮುತ್ತಲ ಪರಿಸರ ಸಂರಕ್ಷಣೆಯು ಪ್ರತಿಯೊಬ್ಬ ನಾಗರೀಕನ ಕರ್ತವ್ಯವಾಗಿದೆ’ ಎಂದರು.</p>.<p>ವಕೀಲ ಕೆ.ಸಿ.ಗೋಪಾಲಗೌಡ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆ ಹಾಗೂ ಪರಿಸರ ಮಾಲಿನ್ಯ ಮತ್ತು ನಿಯಂತ್ರಣ ಕಾಯ್ದೆಯ ಕುರಿತು ಮಾತನಾಡಿದರು.</p>.<p>ಗ್ರೇಡ್ 2 ತಹಶೀಲ್ದಾರ್ ಮನೋಹರ್, ನಗರಸಭೆ ಆಯುಕ್ತ ಶ್ರೀನಿವಾಸ್, ವಕೀಲ ಕಾಮೇಶ್ , ಬಿ.ಜಿ.ಎಸ್ ಬಡಾವಣೆಯ ನಾಗರೀಕರು, ನಗರಸಭೆಯ ಪೌರ ಕಾರ್ಮಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ತಾಲ್ಲೂಕು ಕಚೇರಿ ಮತ್ತು ನಗರಸಭೆ ಸಹಯೋಗದಲ್ಲಿ ಇಲ್ಲಿನ ಬಿಜಿಎಸ್ ಬಡಾವಣೆಯಲ್ಲಿ ಸ್ವಚ್ಚತೆ ಹಾಗೂ ಪರಿಸರ ಸಂರಕ್ಷಣೆ ಕುರಿತು ಕಾನೂನು ಅರಿವು ಮತ್ತು ಜಾಗೃತಿ ಕಾರ್ಯಕ್ರಮ ಶನಿವಾರ ನಡೆಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಕನಕಪುರ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶರಾದ ಬಿ.ವಿ. ಲತಾಶ್ರೀ, ‘ನಮ್ಮ ಮನೆಯನ್ನು ಯಾವ ರೀತಿ ಅಚ್ಚುಕಟ್ಟಾಗಿ ಇಟ್ಟಿಕೊಂಡಿರುತ್ತೇವೆ. ಹಾಗೆ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ’ ಎಂದರು.</p>.<p>‘ನಾವು ವಾಸಿಸುವ ಪರಿಸರ ಸ್ವಚ್ಛವಾಗಿದ್ದರೆ ರೋಗರುಜಿನಗಳು ಹರಡುವುದಿಲ್ಲ, ನಾವು ಇರುವ ಜಾಗ ನಮ್ಮ ಸುತ್ತಮುತ್ತಲ ಪರಿಸರ ಸಂರಕ್ಷಣೆಯು ಪ್ರತಿಯೊಬ್ಬ ನಾಗರೀಕನ ಕರ್ತವ್ಯವಾಗಿದೆ’ ಎಂದರು.</p>.<p>ವಕೀಲ ಕೆ.ಸಿ.ಗೋಪಾಲಗೌಡ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆ ಹಾಗೂ ಪರಿಸರ ಮಾಲಿನ್ಯ ಮತ್ತು ನಿಯಂತ್ರಣ ಕಾಯ್ದೆಯ ಕುರಿತು ಮಾತನಾಡಿದರು.</p>.<p>ಗ್ರೇಡ್ 2 ತಹಶೀಲ್ದಾರ್ ಮನೋಹರ್, ನಗರಸಭೆ ಆಯುಕ್ತ ಶ್ರೀನಿವಾಸ್, ವಕೀಲ ಕಾಮೇಶ್ , ಬಿ.ಜಿ.ಎಸ್ ಬಡಾವಣೆಯ ನಾಗರೀಕರು, ನಗರಸಭೆಯ ಪೌರ ಕಾರ್ಮಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>