ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಗಡಿ| ಬಂಡೆ ಮೇಲೆ ಚಿರತೆ ಪ್ರತ್ಯಕ್ಷ

Last Updated 28 ಜನವರಿ 2023, 19:46 IST
ಅಕ್ಷರ ಗಾತ್ರ

ಮಾಗಡಿ: ತಾಲ್ಲೂಕಿನ ಬಂಟರಕುಪ್ಪೆ ಗುಡ್ಡದ ಬಂಡೆಯ ಮೇಲೆ ಶುಕ್ರವಾರ ಹಗಲು ಹೊತ್ತಿನಲ್ಲಿ ಎರಡು ಚಿರತೆ ಪ್ರತ್ಯಕ್ಷವಾಗಿದ್ದು, ಅವುಗಳನ್ನು ಗಮನಿಸಿದ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಆಗಮಿಸಿದ ವಲಯ ಅರಣ್ಯ ಅಧಿಕಾರಿ ಜಗದೀಶ್‌ ಗೌಡ ಪಟಾಕಿ ಸಿಡಿಸಿ ಚಿರತೆಗಳನ್ನು ಓಡಿಸಿದರು.

ಬಂಟರಕುಪ್ಪೆ, ಮಲ್ಲೂರು ಹಾಗೂ ಸಾವನದುರ್ಗ ಅರಣ್ಯದ ಅಂಚಿನ ಗ್ರಾಮಗಳಲ್ಲಿ ಆಗಾಗ ಪ್ರತ್ಯಕ್ಷವಾಗುವ ಚಿರತೆಗಳು ಮೇಕೆ, ಕುರಿ, ನಾಯಿ, ಹಸುವಿನ ಕರುಗಳನ್ನು ಎತ್ತಿಕೊಂಡು ಹೋಗುತ್ತವೆ.

ಸಾವನದುರ್ಗ, ಸಿದ್ದೇದೇವರ ಬೆಟ್ಟ, ಬಂಟರಕುಪ್ಪೆ ಬೆಟ್ಟದ ಮಾರ್ಗವಾಗಿ ಶಿವಗಂಗೆಯ ತನಕ ಚಿರತೆಗಳು ಸಂಚರಿಸುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT