ಎರಡು ದಿನದ ಹಿಂದೆಯೇ ಈ ಘಟನೆ ನಡೆದಿದ್ದು, ಹೊಲದಲ್ಲಿ ಕೆಲಸ ಮಾಡಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಚಿರತೆ ದಾಳಿ ನಡೆಸಿ ಶಿವರಾಮಯ್ಯ ಅವರನ್ನು ಎಳೆದೊಯ್ದಿತ್ತು. ಅವರಿಗಾಗಿ ಕುಟುಂಬದವರು ಹುಡುಕಾಟ ನಡೆಸಿದ್ದರು. ಬುಧವಾರ ಮಧ್ಯಾಹ್ನ ಹೊಲದ ಸಮೀಪದ ಬೇಲಿಯಲ್ಲಿ ಅವರ ಶವ ಪತ್ತೆ ಆಯಿತು. ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು.