<p><strong>ಕನಕಪುರ:</strong>ತಾಲ್ಲೂಕಿನ ಕೆರಳಾಳುಸಂದ್ರ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಕಾಡುಪ್ರಾಣಿಯೊಂದು ಕುರಿ ಹಿಂಡಿನ ಮೇಲೆ ದಾಳಿ ನಡೆಸಿದ್ದು, ಕೊಪ್ಪಲಿನಲ್ಲಿದ್ದ 40ಕ್ಕೂ ಹೆಚ್ಚು ಕುರಿಗಳನ್ನು ಸಾಯಿಸಿದೆ.</p>.<p>ದಾಳಿಯಲ್ಲಿ ಸಾವನ್ನಪ್ಪಿದ ಕುರಿಗಳು ಭೋಜೇಗೌಡ ಎಂಬುವರಿಗೆ ಸೇರಿದ್ದು, ₹ 3 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.</p>.<p>ಮನೆ ಹಿಂಭಾಗ ನಿರ್ಮಿಸಲಾಗಿದ್ದ ಕೊಪ್ಪಲಿನಲ್ಲಿಯೇ ಪ್ರತಿ ರಾತ್ರಿ ಕುರಿಗಳನ್ನು ಕೂಡಿ ಹಾಕಲಾಗುತ್ತಿತ್ತು. ಮುಂಜಾನೆ ಕೊಪ್ಪಲಿನಿಂದ ಕುರಿಗಳನ್ನುಹೊರ ಬಿಡಲು ಹೋದಾಗ ಅವುಗಳು ಸಾವನ್ನಪ್ಪಿರುವ ವಿಷಯ ಬೆಳಕಿಗೆ ಬಂದಿದೆ.</p>.<p>ಕುರಿ ಹಿಂಡಿನ ಮೇಲೆ ಚಿರತೆ ದಾಳಿಮಾಡಿರಬಹುದು. ಕುರಿಗಳ ಮರಣೋತ್ತರ ಪರೀಕ್ಷೆ ವರದಿ ಕೈಸೇರಿದ ನಂತರ ಸತ್ಯಾಂಶ ತಿಳಿಯಲಿದೆ ಎಂದುಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ವಲಯ ಅರಣ್ಯ ಅಧಿಕಾರಿ ದಾಳೇಶ್ ಮತ್ತು ಉಪ ವಲಯ ಅರಣ್ಯ ಅಧಿಕಾರಿ ದೇವರಾಜು ಶಂಕೆ ವ್ಯಕ್ತಪಡಿಸಿದ್ದಾರೆ.</p>.<p>ಇದಕ್ಕೂ ಮೊದಲು ಚಿರತೆಗಳು ಗ್ರಾಮಗಳಿಗೆ ನುಗ್ಗಿ ಬೀದಿನಾಯಿಗಳನ್ನು ಬೇಟೆಯಾಡುತ್ತಿದ್ದವು. ಆದರೆ, ಇದೇ ಮೊದಲ ಬಾರಿಗೆ ಕೊಪ್ಪಲಿಗೆ ನುಗ್ಗಿ ಕುರಿಗಳನ್ನು ಸಾಯಿಸಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong>ತಾಲ್ಲೂಕಿನ ಕೆರಳಾಳುಸಂದ್ರ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಕಾಡುಪ್ರಾಣಿಯೊಂದು ಕುರಿ ಹಿಂಡಿನ ಮೇಲೆ ದಾಳಿ ನಡೆಸಿದ್ದು, ಕೊಪ್ಪಲಿನಲ್ಲಿದ್ದ 40ಕ್ಕೂ ಹೆಚ್ಚು ಕುರಿಗಳನ್ನು ಸಾಯಿಸಿದೆ.</p>.<p>ದಾಳಿಯಲ್ಲಿ ಸಾವನ್ನಪ್ಪಿದ ಕುರಿಗಳು ಭೋಜೇಗೌಡ ಎಂಬುವರಿಗೆ ಸೇರಿದ್ದು, ₹ 3 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.</p>.<p>ಮನೆ ಹಿಂಭಾಗ ನಿರ್ಮಿಸಲಾಗಿದ್ದ ಕೊಪ್ಪಲಿನಲ್ಲಿಯೇ ಪ್ರತಿ ರಾತ್ರಿ ಕುರಿಗಳನ್ನು ಕೂಡಿ ಹಾಕಲಾಗುತ್ತಿತ್ತು. ಮುಂಜಾನೆ ಕೊಪ್ಪಲಿನಿಂದ ಕುರಿಗಳನ್ನುಹೊರ ಬಿಡಲು ಹೋದಾಗ ಅವುಗಳು ಸಾವನ್ನಪ್ಪಿರುವ ವಿಷಯ ಬೆಳಕಿಗೆ ಬಂದಿದೆ.</p>.<p>ಕುರಿ ಹಿಂಡಿನ ಮೇಲೆ ಚಿರತೆ ದಾಳಿಮಾಡಿರಬಹುದು. ಕುರಿಗಳ ಮರಣೋತ್ತರ ಪರೀಕ್ಷೆ ವರದಿ ಕೈಸೇರಿದ ನಂತರ ಸತ್ಯಾಂಶ ತಿಳಿಯಲಿದೆ ಎಂದುಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ವಲಯ ಅರಣ್ಯ ಅಧಿಕಾರಿ ದಾಳೇಶ್ ಮತ್ತು ಉಪ ವಲಯ ಅರಣ್ಯ ಅಧಿಕಾರಿ ದೇವರಾಜು ಶಂಕೆ ವ್ಯಕ್ತಪಡಿಸಿದ್ದಾರೆ.</p>.<p>ಇದಕ್ಕೂ ಮೊದಲು ಚಿರತೆಗಳು ಗ್ರಾಮಗಳಿಗೆ ನುಗ್ಗಿ ಬೀದಿನಾಯಿಗಳನ್ನು ಬೇಟೆಯಾಡುತ್ತಿದ್ದವು. ಆದರೆ, ಇದೇ ಮೊದಲ ಬಾರಿಗೆ ಕೊಪ್ಪಲಿಗೆ ನುಗ್ಗಿ ಕುರಿಗಳನ್ನು ಸಾಯಿಸಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>