ಮಾಗಡಿ: ತಾಲ್ಲೂಕಿನ ಮಲ್ಲೂರು ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ 6 ವರ್ಷದ ಗಂಡು ಚಿರತೆ ಬಿದ್ದಿದೆ.
ಕುರಿ, ಮೇಕೆ, ದನ, ಕರುಗಳ ಮೇಲೆ ದಾಳಿ ಮಾಡುತ್ತಿತ್ತು. ಹಲವು ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿ ಬೋನು ಇಡಲಾಗಿತ್ತು. ಶನಿವಾರ ಮುಂಜಾನೆ ಚಿರತೆ ಸೆರೆಯಾಗಿದೆ ಎಂದು ವಲಯ ಅರಣ್ಯ ಅಧಿಕಾರಿ ಜಗದೀಶ್ ಗೌಡ ತಿಳಿಸಿದರು.
ಸೆರೆಯಾದ ಚಿರತೆಯನ್ನು ಕೊಳ್ಳೇಗಾಲ ಅರಣ್ಯ ಪ್ರದೇಶಕ್ಕೆ ಬಿಡುವುದಾಗಿ ಅವರು ತಿಳಿಸಿದರು.