ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಜಾಲಮಂಗಲ ಬಳಿ ಚಿರತೆ ಸೆರೆ

Last Updated 24 ಅಕ್ಟೋಬರ್ 2021, 14:29 IST
ಅಕ್ಷರ ಗಾತ್ರ

ರಾಮನಗರ: ತಾಲ್ಲೂಕಿನ ಜಾಲಮಂಗಲ ಗ್ರಾಮದ ವೈದ್ಯ ಶಿವಣ್ಣ ಎಂಬುವರ ಮನೆಗೆ ಚಿರತೆ ನುಗ್ಗಿದ್ದು, ಅರಿವಳಿಕೆ ಮದ್ದು ನೀಡಿ ಅದನ್ನು ಸೆರೆ ಹಿಡಿಯಲಾಯಿತು.

ಶಿವಣ್ಣ ಹೊಸತಾಗಿ‌ ಮನೆ ನಿರ್ಮಿಸುತ್ತಿದ್ದಾರೆ. ಶನಿವಾರ ಮಧ್ಯರಾತ್ರಿ ವೇಳೆಗೆ ಆಹಾರ ಅರಸಿ ಗ್ರಾಮಕ್ಕೆ ಬಂದ ಚಿರತೆ ಮನೆಗೆ ನುಗ್ಗಿದೆ. ಸ್ಥಳೀಯರು ಎಚ್ಚೆತ್ತು ಮನೆಯ ಬಾಗಿಲು ಹಾಕಿದ್ದರಿಂದ ಚಿರತೆಯು ಮನೆಯೊಳಗೇ ಬಂಧಿಯಾಯಿತು.

ಬನ್ನೇರುಘಟ್ಟದ ವೈದ್ಯರ ತಂಡವು ಸ್ಥಳಕ್ಕೆ ಧಾವಿಸಿದ್ದು, ಅರಿವಳಿಕೆ ಮದ್ದು ನೀಡಿ ಚಿರತೆಯನ್ನು ಸೆರೆ ಹಿಡಿಯಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT