ರಾಮನಗರ: ತಾಲ್ಲೂಕಿನ ಜಾಲಮಂಗಲ ಗ್ರಾಮದ ವೈದ್ಯ ಶಿವಣ್ಣ ಎಂಬುವರ ಮನೆಗೆ ಚಿರತೆ ನುಗ್ಗಿದ್ದು, ಅರಿವಳಿಕೆ ಮದ್ದು ನೀಡಿ ಅದನ್ನು ಸೆರೆ ಹಿಡಿಯಲಾಯಿತು.
ಶಿವಣ್ಣ ಹೊಸತಾಗಿ ಮನೆ ನಿರ್ಮಿಸುತ್ತಿದ್ದಾರೆ. ಶನಿವಾರ ಮಧ್ಯರಾತ್ರಿ ವೇಳೆಗೆ ಆಹಾರ ಅರಸಿ ಗ್ರಾಮಕ್ಕೆ ಬಂದ ಚಿರತೆ ಮನೆಗೆ ನುಗ್ಗಿದೆ. ಸ್ಥಳೀಯರು ಎಚ್ಚೆತ್ತು ಮನೆಯ ಬಾಗಿಲು ಹಾಕಿದ್ದರಿಂದ ಚಿರತೆಯು ಮನೆಯೊಳಗೇ ಬಂಧಿಯಾಯಿತು.
ಬನ್ನೇರುಘಟ್ಟದ ವೈದ್ಯರ ತಂಡವು ಸ್ಥಳಕ್ಕೆ ಧಾವಿಸಿದ್ದು, ಅರಿವಳಿಕೆ ಮದ್ದು ನೀಡಿ ಚಿರತೆಯನ್ನು ಸೆರೆ ಹಿಡಿಯಲಾಯಿತು.