ಮಂಗಳವಾರ, ಮಾರ್ಚ್ 21, 2023
20 °C

ಉರುಳಿಗೆ ಸಿಲುಕಿ ಚಿರತೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ತಾಲ್ಲೂಕಿನ ಕೂನಗಲ್‌ ಗ್ರಾಮದ ಜಮೀನಿನಲ್ಲಿ ಬೇಟೆಗಾರರು ಹಾಕಿದ್ದ ಉರುಳಿಗೆ ಸಿಲುಕಿ ಮಂಗಳವಾರ ಚಿರತೆಯೊಂದು ಮೃತಪಟ್ಟಿತು.

ಎರಡು ವರ್ಷ ಪ್ರಾಯದ ಗಂಡು ಚಿರತೆ ಆಹಾರ ಅರಸಿ ಜಮೀನಿಗೆ ಬಂದಿದ್ದು, ಈ ವೇಳೆ ಉರುಳಿಗೆ ಸಿಲುಕಿತು. ಅದರ ಚೀರಾಟ ಕೇಳಿ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಆ ಸಂದರ್ಭ ಚಿರತೆ ಜೀವಂತ ಇತ್ತು.

ಸ್ಥಳೀಯವಾಗಿ ಅರವಳಿಕೆ ತಜ್ಞರು ಲಭ್ಯರಿಲ್ಲದ ಕಾರಣ ಬನ್ನೇರುಘಟ್ಟದಿಂದ ತಜ್ಞರನ್ನು ಕರೆಯಿಸುವುದು ತಡವಾಯಿತು. ಹೊಟ್ಟೆ ಭಾಗದಲ್ಲಿ ಉರುಳಿನ ಹಿಡಿತ ಬಿಗಿಯಾಗಿ ಚಿರತೆಯು ವೈದ್ಯರು ಬರುವ ವೇಳೆಗೆ ಸಾವನ್ನಪ್ಪಿತು.

ಪಶು ವೈದ್ಯಾಧಿಕಾರಿಗಳು ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದರು. ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಅಂತ್ಯಕ್ರಿಯೆ ನೆರವೇರಿಸಿದರು. ಸ್ಥಳೀಯವಾಗಿ ಅರವಳಿಕೆ ತಜ್ಞರು ಲಭ್ಯರಿದ್ದರೆ ಚಿರತೆಯನ್ನು ರಕ್ಷಿಸಬಹುದಿತ್ತು. ಮುಂದಾದರೂ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು