ರಾಮನಗರ: ಮಾಗಡಿ ತಾಲ್ಲೂಕಿನ ಕದರಯ್ಯನಪಾಳ್ಯದಲ್ಲಿ ಮೂರು ವರ್ಷದ ಬಾಲಕನನ್ನು ಕೊಂದ ಚಿರತೆ ಸೆರೆಗೆ ಭಾನುವಾರದಿಂದಲೇ ಕಾರ್ಯಾಚರಣೆ ಆರಂಭಿಸುವುದಾಗಿ ಅರಣ್ಯ ಸಚಿವ ಆನಂದ ಸಿಂಗ್ ತಿಳಿಸಿದರು.
ಮೃತ ಬಾಲಕ ಹೇಮಂತ್ ಮನೆಗೆ ಭೇಟಿ ನೀಡಿದ ಅವರು ಕುಟುಂಬದವರಿಗೆ ಸಾಂತ್ವನ ಹೇಳಿದರು. ಅಲ್ಲದೆ 7.5 ಲಕ್ಷ ರೂಪಾಯಿ ಪರಿಹಾರವನ್ನೂ ಘೋಷಿಸಿದರು.
ಇದೊಂದು ದುಃಖದ ಸಂಗತಿ. ವನ್ಯಜೀವಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೂ ಕ್ರಮ ಜರುಗಿಸಲಾಗುವುದು ಎಂದರು.