<p><strong>ಚನ್ನಪಟ್ಟಣ</strong>: ಭಾರತೀಯ ಜೀವವಿಮಾ ನಿಗಮ ಪ್ರತಿಯೊಬ್ಬರ ನಂಬಿಕೆಗೆ ಪಾತ್ರವಾಗಿ ಹೆಮ್ಮರವಾಗಿ ಬೆಳೆದಿದೆ ಎಂದು ಜೀವ ವಿಮಾ ನಿಗಮದ ಮಂಡ್ಯ ಶಾಖೆ ಹಿರಿಯ ಅಭಿವೃದ್ಧಿ ಅಧಿಕಾರಿ ಡಾ.ಶ್ರೀನಿವಾಸರೆಡ್ಡಿ ಅಭಿಪ್ರಾಯಪಟ್ಟರು.</p>.<p>ನಗರದ ಭಾರತೀಯ ಜೀವಿವಿಮಾ ನಿಗಮದ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಪ್ರತಿನಿಧಿಗಳ ಸಭೆ ಉದ್ಘಾಟಿಸಿ ಮಾತನಾಡಿ, ನಿಗಮದ ಪಾಲಿಸಿ ಜನರಿಗೆ ಪ್ರಾಮಾಣಿಕವಾಗಿ ತಲುಪಿಸುವ ಮುಖಾಂತರ ನಿಗಮವನ್ನು ಉನ್ನತಮಟ್ಟಕ್ಕೆ ಕೊಂಡೊಯ್ದಿದ್ದಾರೆ ಎಂದರು.</p>.<p> ಮುಂದಿನ ದಿನಗಳಲ್ಲಿಯೂ ಪ್ರತಿನಿಧಿಗಳು ಹೆಚ್ಚಿನ ಶ್ರಮ ವಹಿಸಿ ನಿಗಮದ ಯೋಜನೆಗಳನ್ನು ಪಾಲಿಸಿದಾರರಿಗೆ ತಿಳಿಸಿಕೊಡಬೇಕು ಎಂದು ಕಿವಿಮಾತು ಹೇಳಿದರು.</p>.<p>ಶಾಖೆ ಮುಖ್ಯ ವ್ಯವಸ್ಥಾಪಕ ರಮೇಶ್ ಮಾತನಾಡಿ, ನಿಗಮದಲ್ಲಿ ಸಾಕಷ್ಟು ಪಾಲಿಸಿಗಳಿವೆ. ಪ್ರತಿಯೊಂದು ಪಾಲಿಸಿಗಳಲ್ಲಿ ಗ್ರಾಹಕರನ್ನು ತೊಡಗಿಸಬೇಕು ಎಂದು ಕಿವಿಮಾತು ಹೇಳಿದರು.</p>.<p>ಕಾರ್ಯಕ್ರಮದಲ್ಲಿ 2022-23 ನೇ ಸಾಲಿನಲ್ಲಿ ಹೆಚ್ಚು ಪಾಲಿಸಿಗಳನ್ನು ಮಾಡಿಸಿದ ಪ್ರತಿನಿಧಿಗಳಿಗೆ ನಿಗಮದ ಅಭಿವೃದ್ಧಿ ಅಧಿಕಾರಿ ಎಂ.ಕೆ. ಸೋಮಶೇಖರ್ ಬಹುಮಾನ ವಿತರಿಸಿದರು.</p>.<p>ಮಂಡ್ಯ ಶಾಖೆ ಜಡ್.ಎಂ.ಪ್ರತಿನಿಧಿ ಸ್ವರ್ಣಕುಮಾರ್, ಹಿರಿಯ ಪ್ರತಿನಿಧಿಗಳಾದ ಜಗದೀಶ್, ಮುತ್ತುರಾಜು, ಸಂತೋಷ್, ರೂಪ, ಕಲಾವತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ಭಾರತೀಯ ಜೀವವಿಮಾ ನಿಗಮ ಪ್ರತಿಯೊಬ್ಬರ ನಂಬಿಕೆಗೆ ಪಾತ್ರವಾಗಿ ಹೆಮ್ಮರವಾಗಿ ಬೆಳೆದಿದೆ ಎಂದು ಜೀವ ವಿಮಾ ನಿಗಮದ ಮಂಡ್ಯ ಶಾಖೆ ಹಿರಿಯ ಅಭಿವೃದ್ಧಿ ಅಧಿಕಾರಿ ಡಾ.ಶ್ರೀನಿವಾಸರೆಡ್ಡಿ ಅಭಿಪ್ರಾಯಪಟ್ಟರು.</p>.<p>ನಗರದ ಭಾರತೀಯ ಜೀವಿವಿಮಾ ನಿಗಮದ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಪ್ರತಿನಿಧಿಗಳ ಸಭೆ ಉದ್ಘಾಟಿಸಿ ಮಾತನಾಡಿ, ನಿಗಮದ ಪಾಲಿಸಿ ಜನರಿಗೆ ಪ್ರಾಮಾಣಿಕವಾಗಿ ತಲುಪಿಸುವ ಮುಖಾಂತರ ನಿಗಮವನ್ನು ಉನ್ನತಮಟ್ಟಕ್ಕೆ ಕೊಂಡೊಯ್ದಿದ್ದಾರೆ ಎಂದರು.</p>.<p> ಮುಂದಿನ ದಿನಗಳಲ್ಲಿಯೂ ಪ್ರತಿನಿಧಿಗಳು ಹೆಚ್ಚಿನ ಶ್ರಮ ವಹಿಸಿ ನಿಗಮದ ಯೋಜನೆಗಳನ್ನು ಪಾಲಿಸಿದಾರರಿಗೆ ತಿಳಿಸಿಕೊಡಬೇಕು ಎಂದು ಕಿವಿಮಾತು ಹೇಳಿದರು.</p>.<p>ಶಾಖೆ ಮುಖ್ಯ ವ್ಯವಸ್ಥಾಪಕ ರಮೇಶ್ ಮಾತನಾಡಿ, ನಿಗಮದಲ್ಲಿ ಸಾಕಷ್ಟು ಪಾಲಿಸಿಗಳಿವೆ. ಪ್ರತಿಯೊಂದು ಪಾಲಿಸಿಗಳಲ್ಲಿ ಗ್ರಾಹಕರನ್ನು ತೊಡಗಿಸಬೇಕು ಎಂದು ಕಿವಿಮಾತು ಹೇಳಿದರು.</p>.<p>ಕಾರ್ಯಕ್ರಮದಲ್ಲಿ 2022-23 ನೇ ಸಾಲಿನಲ್ಲಿ ಹೆಚ್ಚು ಪಾಲಿಸಿಗಳನ್ನು ಮಾಡಿಸಿದ ಪ್ರತಿನಿಧಿಗಳಿಗೆ ನಿಗಮದ ಅಭಿವೃದ್ಧಿ ಅಧಿಕಾರಿ ಎಂ.ಕೆ. ಸೋಮಶೇಖರ್ ಬಹುಮಾನ ವಿತರಿಸಿದರು.</p>.<p>ಮಂಡ್ಯ ಶಾಖೆ ಜಡ್.ಎಂ.ಪ್ರತಿನಿಧಿ ಸ್ವರ್ಣಕುಮಾರ್, ಹಿರಿಯ ಪ್ರತಿನಿಧಿಗಳಾದ ಜಗದೀಶ್, ಮುತ್ತುರಾಜು, ಸಂತೋಷ್, ರೂಪ, ಕಲಾವತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>