ಈ ಘಟನೆಗೆ ಸಂಬಂಧಿಸಿದಂತೆ ವಸಂತಾರ ತಾಯಿ ಮಾಯಮ್ಮ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಬಿಡದಿ ಪೊಲೀಸರು ತನಿಖೆ ಕೈಗೊಂಡು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಆರೋಪ ಸಾಬೀತಾದ ಹಿನ್ನಲೆಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಎಂ.ಜಿ. ಉಮಾ ಶಿಕ್ಷೆ ಪ್ರಮಾಣ ಪ್ರಕಟಿಸಿದರು. ಸರ್ಕಾರಿ ಅಭಿಯೋಜಕ ಎಲ್. ನಾಗರಾಜ್ ವಾದ ಮಂಡಿಸಿದರು.