ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದೆ. ಆದರೆ ಆಡಳಿತ ನಡೆಸುತ್ತಿರುವವರು ಮಾತ್ರ ದಳದವರು. ದೊಡ್ಡಗೌಡರಿಂದ ಹಿಡಿದು ಚಿಕ್ಕಗೌಡರವರೆಗೆ, ದೊಡ್ಡಗೌಡತಿಯಿಂದ ಹಿಡಿದು ಚಿಕ್ಕಗೌಡತಿಯವರೆಗೆ ರಾಜ್ಯದಲ್ಲಿ ಸಂಪೂರ್ಣವಾಗಿ ಅವರದ್ದೇ ಆಡಳಿತ ನಡೆಯುತ್ತಿದೆ’ ಎಂದು ಪರೋಕ್ಷವಾಗಿ ಎಚ್.ಡಿ. ದೇವೇಗೌಡರ ಕುಟುಂಬದವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.