<p><strong>ಮಾಗಡಿ</strong>: ರಾಜ್ಯದಲ್ಲಿ ಮೇ 5ರಿಂದ ನಡೆಯುವ ಮೂರು ಹಂತದ ಜಾತಿ ಸಮೀಕ್ಷೆಯಲ್ಲಿ ಪರಿಶಿಷ್ಟರು ನಿರ್ದಿಷ್ಟವಾಗಿ ಹೊಲೆಯ, ಬಲಗೈ, ಛಲವಾದಿ ಎಂದು ನಮೂದಿಸಲು ಸಮುದಾಯ ಮುಖಂಡರು ಒಮ್ಮತದ ನಿರ್ಣಯ ಕೈಗೊಂಡಿದ್ದಾರೆ.</p>.<p>ಒಳ ಮೀಸಲಾತಿ ಜಾತಿಗಣತಿ ಸಂಬಂಧ ಪಟ್ಟಣದಲ್ಲಿ ಬುಧವಾರ ನಡೆದ ಹೊಲೆಯ, ಬಲಗೈ ಮುಖಂಡರ ಸಮಾಲೋಚನಾ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.</p>.<p>ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಮಾಜಿ ಸದಸ್ಯ ಶಿವಣ್ಣ ವಿಷಯ ಮಂಡಿಸಿದರು. ತಾಲ್ಲೂಕು ಮುಖಂಡರು ಆ ಬಗ್ಗೆ ಚರ್ಚೆ ನಡೆಸಿದರು.</p>.<p>ಜಾತಿ ಸಮೀಕ್ಷೆ ವೇಳೆ ತಾಲ್ಲೂಕಿನ ಜಾತಿ ಬಾಂಧವರು ನಿರ್ದಿಷ್ಟವಾಗಿ ‘ಹೊಲಯ/ಬಲಗೈ/ಛಲವಾದಿ’ ಎಂದು ನಮೂದಿಸಬೇಕು ಎಂದು ಕರೆ ನೀಡಿದರು. ಈ ಕುರಿತು ಪ್ರತಿ ಗ್ರಾಮದಲ್ಲಿ ಜಾಗೃತಿ ಮೂಡಿಸುವ ನಿರ್ಣಯ ತೆಗೆದುಕೊಳ್ಳಲಾಯಿತು.</p>.<p>ನಮ್ಮ ಜನಾಂಗದವರು ತಾಲ್ಲೂಕಿನಲ್ಲಿ ಎಷ್ಟು ಸಂಖ್ಯೆಯಲ್ಲಿ ಇದ್ದಾರೆ ಎಂಬುದು ಸ್ಪಷ್ಟವಾಗಿ ತಿಳಿಯಲಿದೆ. ಜತೆಗೆ ಸರ್ಕಾರದಿಂದ ಮೀಸಲಾತಿ ಪಡೆಯಲು ಸಾಧ್ಯ ಎಂದು ಮುಖಂಡರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ</strong>: ರಾಜ್ಯದಲ್ಲಿ ಮೇ 5ರಿಂದ ನಡೆಯುವ ಮೂರು ಹಂತದ ಜಾತಿ ಸಮೀಕ್ಷೆಯಲ್ಲಿ ಪರಿಶಿಷ್ಟರು ನಿರ್ದಿಷ್ಟವಾಗಿ ಹೊಲೆಯ, ಬಲಗೈ, ಛಲವಾದಿ ಎಂದು ನಮೂದಿಸಲು ಸಮುದಾಯ ಮುಖಂಡರು ಒಮ್ಮತದ ನಿರ್ಣಯ ಕೈಗೊಂಡಿದ್ದಾರೆ.</p>.<p>ಒಳ ಮೀಸಲಾತಿ ಜಾತಿಗಣತಿ ಸಂಬಂಧ ಪಟ್ಟಣದಲ್ಲಿ ಬುಧವಾರ ನಡೆದ ಹೊಲೆಯ, ಬಲಗೈ ಮುಖಂಡರ ಸಮಾಲೋಚನಾ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.</p>.<p>ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಮಾಜಿ ಸದಸ್ಯ ಶಿವಣ್ಣ ವಿಷಯ ಮಂಡಿಸಿದರು. ತಾಲ್ಲೂಕು ಮುಖಂಡರು ಆ ಬಗ್ಗೆ ಚರ್ಚೆ ನಡೆಸಿದರು.</p>.<p>ಜಾತಿ ಸಮೀಕ್ಷೆ ವೇಳೆ ತಾಲ್ಲೂಕಿನ ಜಾತಿ ಬಾಂಧವರು ನಿರ್ದಿಷ್ಟವಾಗಿ ‘ಹೊಲಯ/ಬಲಗೈ/ಛಲವಾದಿ’ ಎಂದು ನಮೂದಿಸಬೇಕು ಎಂದು ಕರೆ ನೀಡಿದರು. ಈ ಕುರಿತು ಪ್ರತಿ ಗ್ರಾಮದಲ್ಲಿ ಜಾಗೃತಿ ಮೂಡಿಸುವ ನಿರ್ಣಯ ತೆಗೆದುಕೊಳ್ಳಲಾಯಿತು.</p>.<p>ನಮ್ಮ ಜನಾಂಗದವರು ತಾಲ್ಲೂಕಿನಲ್ಲಿ ಎಷ್ಟು ಸಂಖ್ಯೆಯಲ್ಲಿ ಇದ್ದಾರೆ ಎಂಬುದು ಸ್ಪಷ್ಟವಾಗಿ ತಿಳಿಯಲಿದೆ. ಜತೆಗೆ ಸರ್ಕಾರದಿಂದ ಮೀಸಲಾತಿ ಪಡೆಯಲು ಸಾಧ್ಯ ಎಂದು ಮುಖಂಡರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>