ಈ ಸಂಬಂಧ ಚಾಲಕ ಪೈರೋಜ್ ಖಾನ್ ಹಾಗೂ ಕ್ಲೀನರ್ ಫರ್ಮನ್ ಎಂಬುವರನ್ನು ಬಂಧಿಸಲಾಗಿದೆ. ಇವರು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕಿರುಗಾವಲಿನವರು. ಪಟ್ಟಣದ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಕ್ಷಣೆ ಮಾಡಿರುವ 18 ಜಾನುವಾರುಗಳನ್ನು ಮೈಸೂರಿನ ಗೋಶಾಲೆಗೆ ಸಾಗಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.