ಭಾನುವಾರ ಜಿಲ್ಲೆ ಸಂಪೂರ್ಣ ಲಾಕ್ಡೌನ್ಗೆ ಜಿಲ್ಲಾಡಳಿತ ಕ್ರಮ ಕೈಗೊಂಡಿದ್ದು, ರೇಷ್ಮೆಗೂಡು ಮಾರುಕಟ್ಟೆ, ಎಪಿಎಂಸಿ ಸಹಿತ ಪ್ರತಿಯೊಂದು ಸೇವೆ ಹಾಗೂ ವಹಿವಾಟು ಬಂದ್ ಆಗಲಿದೆ. ಬಸ್ ಸಂಚಾರ ಸಹ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ತುರ್ತು ಹಾಗೂ ಆರೋಗ್ಯ ಸೇವೆಗಳಿಗೆ ಮಾತ್ರ ಜನರು ಮನೆಯಿಂದ ಹೊರಬರುವಂತೆ ಪೊಲೀಸರು ಮನವಿ ಮಾಡಿದ್ದು, ಸುಮ್ಮನೆ ಓಡಾಡಿದರೆ ಪ್ರಕರಣ ದಾಖಲಿಸುವ ಎಚ್ಚರಿಕೆಯನ್ನೂ ನೀಡಿದ್ದಾರೆ.