ಶಾಸಕ ಎಚ್.ಡಿ.ಕುಮಾರಸ್ವಾಮಿ ಮನವಿಗೆ ಸ್ಪಂದಿಸಿದ ಪಟ್ಟಣದ ವರ್ತಕರ ಸಂಘದ ಪದಾಧಿಕಾರಿಗಳು, ಜೂನ್25ರಿಂದ ಜುಲೈ10ವರೆಗೂ ಮಧ್ಯಾಹ್ನ 12ರವರೆಗೂ ಲಾಕ್ ಡೌನ್ ಮಾಡಲು ನಿರ್ಧರಿಸಿದ್ದರು.ಆದರೆ, ಶೇ60ರಷ್ಟು ವ್ಯಾಪಾರಿಗಳು ಎಂದಿನಂತೆ ವ್ಯಾಪಾರ ನಡೆಸಿದರು. ವರ್ತಕರ ಸಂಘದ ಪದಾಧಿಕಾರಿಗಳು ಶುಕ್ರವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಆಟೊ ಮೂಲಕ ಮಧ್ಯಾಹ್ನ ದ ನಂತರ ಅಂಗಡಿಗಳನ್ನು ಮುಚ್ಚುವ ಮೂಲಕ ಲಾಕ್ ಡೌನ್ ಮಾಡಿ ಕೊರೊನಾ ತೊಲಗಿಸಲು ಕೈಜೋಡಿಸಬೇಕು ಎಂದು ಕರಪತ್ರ ನೀಡಿ ಮನವಿ ಮಾಡಿದ್ದರು.