<p><strong>ಚನ್ನಪಟ್ಟಣ:</strong> ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳು. ಕೇವಲ ಕುಟುಂಬ ರಾಜಕಾರಣಕ್ಕೆ ಮಾತ್ರ ಸೀಮಿತವಾಗಿರುವ ಎರಡೂ ಪಕ್ಷಗಳನ್ನು ಜನತೆ ರಾಜಕಾರಣದಿಂದ ದೂರವಿಡಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ಮನವಿ ಮಾಡಿದರು.</p>.<p>ನಗರದಲ್ಲಿ ಸೋಮವಾರ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕೆಆರ್ಎಸ್ ಅಭ್ಯರ್ಥಿ ಮಹಮದ್ ಮುಸಾದಿಕ್ ಪಾಷಾ ಅವರ ಪರವಾಗಿ ಪ್ರಚಾರ ನಡೆಸಿ ಮಾತನಾಡಿ, ಸ್ವಚ್ಛ, ಪ್ರಾಮಾಣಿಕ, ಪಾರದರ್ಶಕ ಆಡಳಿತಕ್ಕಾಗಿ ಕೆಆರ್ಎಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.</p>.<p>ಕುಕ್ಕರ್, ನಿಕ್ಕರ್, ಲಿಕ್ಕರ್ಗಳಿಗೆ ಮತ ಹಾಕುವುದನ್ನು ನಿಲ್ಲಿಸಬೇಕು. ಸಂಸದ ಡಿ.ಕೆ. ಸುರೇಶ್ 11 ವರ್ಷಗಳ ಹಿಂದೆ ಪ್ರಥಮ ಬಾರಿಗೆ ಸಂಸದರಾದಾಗ ಅವರ ಆಸ್ತಿ ಹತ್ತಾರು ಕೋಟಿ ಇತ್ತು. ಈಗ ಅವರು ಘೋಷಿಸಿರುವ ಆಸ್ತಿಯೇ ₹ 500 ರಿಂದ ₹ 600 ಕೋಟಿ ಆಗಿದೆ. ತಿಂಗಳಿಗೆ ಮೂರರಿಂದ ನಾಲ್ಕು ಲಕ್ಷ ಸಂಬಳ ಪಡೆಯುವ ಸಂಸದವರಿಗೆ ನೂರಾರು ಕೋಟಿ ಆಸ್ತಿ ಎಲ್ಲಿಂದ ಬಂತು ಎಂದು ಮತದಾರರು ಯೋಚಿಸಬೇಕು ಎಂದರು.</p>.<p>ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಸರ್ಕಾರಿ ವೈದ್ಯರಾಗಿದ್ದವರು. ಇವರು ₹ 100 ಕೋಟಿಗಳ ಒಡೆಯ. ಇಷ್ಟು ಆಸ್ತಿಯನ್ನು ಸಂಪಾದನೆ ಮಾಡಲು ಹೇಗೆ ಸಾಧ್ಯ ಎಂಬುದನ್ನು ಜನತೆ ಅರ್ಥ ಮಾಡಿಕೊಳ್ಳಬೇಕು ಎಂದರು.</p>.<p>ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್. ಜೀವನ್, ಜಿಲ್ಲಾಧ್ಯಕ್ಷ ಸುಧಾಕರ್, ಇತರ ಪದಾಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳು. ಕೇವಲ ಕುಟುಂಬ ರಾಜಕಾರಣಕ್ಕೆ ಮಾತ್ರ ಸೀಮಿತವಾಗಿರುವ ಎರಡೂ ಪಕ್ಷಗಳನ್ನು ಜನತೆ ರಾಜಕಾರಣದಿಂದ ದೂರವಿಡಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ಮನವಿ ಮಾಡಿದರು.</p>.<p>ನಗರದಲ್ಲಿ ಸೋಮವಾರ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕೆಆರ್ಎಸ್ ಅಭ್ಯರ್ಥಿ ಮಹಮದ್ ಮುಸಾದಿಕ್ ಪಾಷಾ ಅವರ ಪರವಾಗಿ ಪ್ರಚಾರ ನಡೆಸಿ ಮಾತನಾಡಿ, ಸ್ವಚ್ಛ, ಪ್ರಾಮಾಣಿಕ, ಪಾರದರ್ಶಕ ಆಡಳಿತಕ್ಕಾಗಿ ಕೆಆರ್ಎಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.</p>.<p>ಕುಕ್ಕರ್, ನಿಕ್ಕರ್, ಲಿಕ್ಕರ್ಗಳಿಗೆ ಮತ ಹಾಕುವುದನ್ನು ನಿಲ್ಲಿಸಬೇಕು. ಸಂಸದ ಡಿ.ಕೆ. ಸುರೇಶ್ 11 ವರ್ಷಗಳ ಹಿಂದೆ ಪ್ರಥಮ ಬಾರಿಗೆ ಸಂಸದರಾದಾಗ ಅವರ ಆಸ್ತಿ ಹತ್ತಾರು ಕೋಟಿ ಇತ್ತು. ಈಗ ಅವರು ಘೋಷಿಸಿರುವ ಆಸ್ತಿಯೇ ₹ 500 ರಿಂದ ₹ 600 ಕೋಟಿ ಆಗಿದೆ. ತಿಂಗಳಿಗೆ ಮೂರರಿಂದ ನಾಲ್ಕು ಲಕ್ಷ ಸಂಬಳ ಪಡೆಯುವ ಸಂಸದವರಿಗೆ ನೂರಾರು ಕೋಟಿ ಆಸ್ತಿ ಎಲ್ಲಿಂದ ಬಂತು ಎಂದು ಮತದಾರರು ಯೋಚಿಸಬೇಕು ಎಂದರು.</p>.<p>ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಸರ್ಕಾರಿ ವೈದ್ಯರಾಗಿದ್ದವರು. ಇವರು ₹ 100 ಕೋಟಿಗಳ ಒಡೆಯ. ಇಷ್ಟು ಆಸ್ತಿಯನ್ನು ಸಂಪಾದನೆ ಮಾಡಲು ಹೇಗೆ ಸಾಧ್ಯ ಎಂಬುದನ್ನು ಜನತೆ ಅರ್ಥ ಮಾಡಿಕೊಳ್ಳಬೇಕು ಎಂದರು.</p>.<p>ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್. ಜೀವನ್, ಜಿಲ್ಲಾಧ್ಯಕ್ಷ ಸುಧಾಕರ್, ಇತರ ಪದಾಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>