<p><strong>ರಾಮನಗರ</strong>: ಮೈತ್ರಿ ಕುರಿತು ನಮ್ಮ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ಹಿಂದೆ ಕಾಂಗ್ರೆಸ್ ಜೊತೆ ಆಕಸ್ಮಿಕವಾಗಿ ಮೈತ್ರಿ ಆಗಿತ್ತು. ಈಗ ಬದಲಾದ ಪರಿಸ್ಥಿತಿಯಲ್ಲಿ ಬಿಜೆಪಿ ಜೊತೆ ಮೈತ್ರಿ ಅನಿವಾರ್ಯವಾಗಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.</p><p>ಬಿಜೆಪಿ- ಜೆಡಿಎಸ್ ಮೈತ್ರಿ ಬೆನ್ನಲ್ಲೇ ಬಿಡದಿಯಲ್ಲಿರುವ ಎಚ್.ಡಿ. ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ, ಎಚ್.ಡಿ. ದೇವೇಗೌಡ ಅವರ ನೇತೃತ್ವದಲ್ಲಿ ಭಾನುವಾರ ನಡೆದ ಪಕ್ಷದ ಶಾಸಕರು, ಪದಾಧಿಕಾರಿಗಳು ಹಾಗೂ ಮುಖಂಡರ ಸಭೆ ವೇಳೆ ಸುದ್ದಿಗಾರರ ಜೊತೆ ಅವರು ಮಾತನಾಡಿದರು.</p><p>ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮೈತ್ರಿ ಬಗ್ಗೆ ತೀರ್ಮಾನ ಮಾಡಿದ್ದಾರೆ. ದೇವೇಗೌಡ ಅವರು ನಮ್ಮ ಜೊತೆ ಇರಬೇಕು ಎಂಬುದು ಮೋದಿ ಅವರ ಅಪೇಕ್ಷೆಯಾಗಿದ್ದು, ನಮ್ಮನ್ನು ಅತ್ಯಂತ ಗೌರವಯುತವಾಗಿ ನಡೆಸಿಕೊಂಡಿದ್ದಾರೆ ಎಂದರು.</p><p>ದುರದೃಷ್ಟಕರ ವಿಷಯವೇನೆಂದರೆ ರಾಜ್ಯದಲ್ಲಿ ಆಮಿಷದ ಕಾರಣಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ.</p><p>ನಮ್ಮ ರಾಮನೊ ಸಹ ಗಿಫ್ಟ್ ಕಾರ್ಡ್ ಹಂಚಿದ್ದರು. ರಾಜ್ಯದಲ್ಲಿ ಹಾಗೂ ದೇಶದಲ್ಲಿ ಕಾಂಗ್ರೆಸ್ ಸೋಲಿಸಲು ಬಿಜೆಪಿ-ಜೆಡಿಎಸ್ ಒಂದಾಗಿದೆ ಎಂದು ತಿಳಿಸಿದರು.</p><p>ಮೈತ್ರಿಗೆ ಅಸಮಾಧಾನ ವ್ಯಕ್ತಪಡಿಸಿದ್ದ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರ ಜೊತೆ ಈಗಾಗಲೇ ಮಾತನಾಡಿದ್ದೇನೆ. ಅವರು ಸಹ ಒಂದಿಷ್ಟು ಸಲಹೆ- ಸೂಚನೆ ನೀಡಿದ್ದಾರೆ. ಸ್ಥಳೀಯವಾಗಿ ಇರುವ ಸಮಸ್ಯೆಗಳ ಬಗ್ಗೆ ಹೇಳಿದ್ದಾರೆ. ಅದರ ಹೊರತಾಗಿ ಅವರಿಗೆ ಬೇರಾವುದೇ ಅಸಮಾಧಾನ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p><p>ಇಂದಿನ ಸಭೆಯಲ್ಲ ಪಕ್ಷದ ವರಿಷ್ಠರ ಜೊತೆ ನಾಯಕರು ತಮ್ಮ ಭಾವನೆಗಳನ್ನ ವ್ಯಕ್ತಪಡಿಸಿದ್ದಾರೆ. ಅವರ ಅಭಿಪ್ರಾಯಗಳಿಗೆ ಮನ್ನಣೆ ನೀಡಲಾಗುವುದು ಎಂದರು.</p>.ಬಿಜೆಪಿ-ಜೆಡಿಎಸ್ ಮೈತ್ರಿ: ದೇವೇಗೌಡರ ನಿರ್ಧಾರಕ್ಕೆ ಬದ್ಧ ಎಂದ ಜಿ.ಟಿ. ದೇವೇಗೌಡ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ಮೈತ್ರಿ ಕುರಿತು ನಮ್ಮ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ಹಿಂದೆ ಕಾಂಗ್ರೆಸ್ ಜೊತೆ ಆಕಸ್ಮಿಕವಾಗಿ ಮೈತ್ರಿ ಆಗಿತ್ತು. ಈಗ ಬದಲಾದ ಪರಿಸ್ಥಿತಿಯಲ್ಲಿ ಬಿಜೆಪಿ ಜೊತೆ ಮೈತ್ರಿ ಅನಿವಾರ್ಯವಾಗಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.</p><p>ಬಿಜೆಪಿ- ಜೆಡಿಎಸ್ ಮೈತ್ರಿ ಬೆನ್ನಲ್ಲೇ ಬಿಡದಿಯಲ್ಲಿರುವ ಎಚ್.ಡಿ. ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ, ಎಚ್.ಡಿ. ದೇವೇಗೌಡ ಅವರ ನೇತೃತ್ವದಲ್ಲಿ ಭಾನುವಾರ ನಡೆದ ಪಕ್ಷದ ಶಾಸಕರು, ಪದಾಧಿಕಾರಿಗಳು ಹಾಗೂ ಮುಖಂಡರ ಸಭೆ ವೇಳೆ ಸುದ್ದಿಗಾರರ ಜೊತೆ ಅವರು ಮಾತನಾಡಿದರು.</p><p>ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮೈತ್ರಿ ಬಗ್ಗೆ ತೀರ್ಮಾನ ಮಾಡಿದ್ದಾರೆ. ದೇವೇಗೌಡ ಅವರು ನಮ್ಮ ಜೊತೆ ಇರಬೇಕು ಎಂಬುದು ಮೋದಿ ಅವರ ಅಪೇಕ್ಷೆಯಾಗಿದ್ದು, ನಮ್ಮನ್ನು ಅತ್ಯಂತ ಗೌರವಯುತವಾಗಿ ನಡೆಸಿಕೊಂಡಿದ್ದಾರೆ ಎಂದರು.</p><p>ದುರದೃಷ್ಟಕರ ವಿಷಯವೇನೆಂದರೆ ರಾಜ್ಯದಲ್ಲಿ ಆಮಿಷದ ಕಾರಣಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ.</p><p>ನಮ್ಮ ರಾಮನೊ ಸಹ ಗಿಫ್ಟ್ ಕಾರ್ಡ್ ಹಂಚಿದ್ದರು. ರಾಜ್ಯದಲ್ಲಿ ಹಾಗೂ ದೇಶದಲ್ಲಿ ಕಾಂಗ್ರೆಸ್ ಸೋಲಿಸಲು ಬಿಜೆಪಿ-ಜೆಡಿಎಸ್ ಒಂದಾಗಿದೆ ಎಂದು ತಿಳಿಸಿದರು.</p><p>ಮೈತ್ರಿಗೆ ಅಸಮಾಧಾನ ವ್ಯಕ್ತಪಡಿಸಿದ್ದ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರ ಜೊತೆ ಈಗಾಗಲೇ ಮಾತನಾಡಿದ್ದೇನೆ. ಅವರು ಸಹ ಒಂದಿಷ್ಟು ಸಲಹೆ- ಸೂಚನೆ ನೀಡಿದ್ದಾರೆ. ಸ್ಥಳೀಯವಾಗಿ ಇರುವ ಸಮಸ್ಯೆಗಳ ಬಗ್ಗೆ ಹೇಳಿದ್ದಾರೆ. ಅದರ ಹೊರತಾಗಿ ಅವರಿಗೆ ಬೇರಾವುದೇ ಅಸಮಾಧಾನ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p><p>ಇಂದಿನ ಸಭೆಯಲ್ಲ ಪಕ್ಷದ ವರಿಷ್ಠರ ಜೊತೆ ನಾಯಕರು ತಮ್ಮ ಭಾವನೆಗಳನ್ನ ವ್ಯಕ್ತಪಡಿಸಿದ್ದಾರೆ. ಅವರ ಅಭಿಪ್ರಾಯಗಳಿಗೆ ಮನ್ನಣೆ ನೀಡಲಾಗುವುದು ಎಂದರು.</p>.ಬಿಜೆಪಿ-ಜೆಡಿಎಸ್ ಮೈತ್ರಿ: ದೇವೇಗೌಡರ ನಿರ್ಧಾರಕ್ಕೆ ಬದ್ಧ ಎಂದ ಜಿ.ಟಿ. ದೇವೇಗೌಡ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>