<p><strong>ಮಾಗಡಿ:</strong> ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ತಾಲ್ಲೂಕು ಪಂಚಾಯಿತಿ ಇ.ಒ ಕೃಷ್ಣ.ಸಿ ಮತದಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು.</p>.<p>ನಂತರ ಮಾತನಾಡಿ, ಪ್ರಜಾಪ್ರಭುತ್ವದ ಆಧಾರ ಸ್ತಂಭ ಮತದಾನವನ್ನು ಕಡ್ಡಾಯವಾಗಿ ಚಲಾಯಿಸಿ ಸಂವಿಧಾನ ಪ್ರಕಾರ ಪ್ರಜೆಗಳೇ ಪ್ರಭುಗಳು ಎಂದು ನಿರೂಪಿಸಬೇಕೆಂದು ಹೇಳಿದರು. ಮತದಾನ ಮೂಲಕ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಸ್ವಾತಂತ್ರ್ಯ ಪ್ರಜೆಗಳಿಗೆ ನೀಡಲಾಗಿದೆ ಎಂದರು.</p>.<p>ಏ.26ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ 18ವರ್ಷ ತುಂಬಿರುವ ಮತದಾರರು ಮತಗಟ್ಟೆಗೆ ತೆರಳಿ ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಹಕ್ಕು ಚಲಾಯಿಸಬೇಕು ಎಂದರು.</p>.<p>ತಹಶೀಲ್ದಾರ್ ಶರತ್ ಕುಮಾರ್ ಮಾತನಾಡಿ, ದೇಶದ ಪ್ರಜೆಗಳೆಲ್ಲರೂ ಕಡ್ಡಾಯವಾಗಿ ಸಂವಿಧಾನ ಓದಿಕೊಳ್ಳಬೇಕು. ಮೂಲಭೂತ ಹಕ್ಕು ಮತ್ತು ಕರ್ತವ್ಯ ಓದಿ ಕರಗತ ಮಾಡಿಕೊಳ್ಳಬೇಕು. ಚುನಾವಣೆಯಲ್ಲಿ ಮತ ಮಾರಿಕೊಳ್ಳಬಾರದು ಎಂದರು.</p>.<p>ಮತಗಟ್ಟೆಗೆ ತೆರಳಿ ನಿರ್ಭೀತಿಯಿಂದ ಮತಚಲಾಯಿಸಿ ಪ್ರಜಾಪ್ರಭುತ್ವಕ್ಕೆ ಮೆರುಗು ತರಬೇಕು. 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮನೆಯಲ್ಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು. </p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ.ಚಂದ್ರಶೇಖರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಪಿ.ರಾಜಣ್ಣ, ಅಕ್ಷರ ದಾಸೋಹ ಅಧಿಕಾರಿ ಗಂಗಾಧರ್, ಐಇಸಿ ಸಂಯೋಜಕ ರವಿ ಅತ್ನಿ ಮತದಾನ ಕುರಿತು ಮಾತನಾಡಿದರು.</p>.<p>ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಸಹಾಯಕ ಪ್ರಾಧ್ಯಾಪಕರು, ತಾಲ್ಲೂಕು ಪಂಚಾಯಿತಿ ಕಚೇರಿ ಸಿಬ್ಬಂದಿಯು ಕೆಂಪೇಗೌಡ ಸರ್ಕಲ್, ಕೋಟೆ ಬಯಲಿನಲ್ಲಿ ಜಾಗೃತಿ ಜಾಥಾ ನಡೆಸಿದರು.</p>.<p>ಕೋಟೆ ಬಯಲಿನಲ್ಲಿ ಮಾನವ ಸರಪಳಿ ನಿರ್ಮಿಸಿ ಮತದಾನ ಮಾಡುವ ಬಗ್ಗೆ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಜಾಗೃತಿ ಜಾಥಾದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ:</strong> ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ತಾಲ್ಲೂಕು ಪಂಚಾಯಿತಿ ಇ.ಒ ಕೃಷ್ಣ.ಸಿ ಮತದಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು.</p>.<p>ನಂತರ ಮಾತನಾಡಿ, ಪ್ರಜಾಪ್ರಭುತ್ವದ ಆಧಾರ ಸ್ತಂಭ ಮತದಾನವನ್ನು ಕಡ್ಡಾಯವಾಗಿ ಚಲಾಯಿಸಿ ಸಂವಿಧಾನ ಪ್ರಕಾರ ಪ್ರಜೆಗಳೇ ಪ್ರಭುಗಳು ಎಂದು ನಿರೂಪಿಸಬೇಕೆಂದು ಹೇಳಿದರು. ಮತದಾನ ಮೂಲಕ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಸ್ವಾತಂತ್ರ್ಯ ಪ್ರಜೆಗಳಿಗೆ ನೀಡಲಾಗಿದೆ ಎಂದರು.</p>.<p>ಏ.26ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ 18ವರ್ಷ ತುಂಬಿರುವ ಮತದಾರರು ಮತಗಟ್ಟೆಗೆ ತೆರಳಿ ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಹಕ್ಕು ಚಲಾಯಿಸಬೇಕು ಎಂದರು.</p>.<p>ತಹಶೀಲ್ದಾರ್ ಶರತ್ ಕುಮಾರ್ ಮಾತನಾಡಿ, ದೇಶದ ಪ್ರಜೆಗಳೆಲ್ಲರೂ ಕಡ್ಡಾಯವಾಗಿ ಸಂವಿಧಾನ ಓದಿಕೊಳ್ಳಬೇಕು. ಮೂಲಭೂತ ಹಕ್ಕು ಮತ್ತು ಕರ್ತವ್ಯ ಓದಿ ಕರಗತ ಮಾಡಿಕೊಳ್ಳಬೇಕು. ಚುನಾವಣೆಯಲ್ಲಿ ಮತ ಮಾರಿಕೊಳ್ಳಬಾರದು ಎಂದರು.</p>.<p>ಮತಗಟ್ಟೆಗೆ ತೆರಳಿ ನಿರ್ಭೀತಿಯಿಂದ ಮತಚಲಾಯಿಸಿ ಪ್ರಜಾಪ್ರಭುತ್ವಕ್ಕೆ ಮೆರುಗು ತರಬೇಕು. 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮನೆಯಲ್ಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು. </p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ.ಚಂದ್ರಶೇಖರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಪಿ.ರಾಜಣ್ಣ, ಅಕ್ಷರ ದಾಸೋಹ ಅಧಿಕಾರಿ ಗಂಗಾಧರ್, ಐಇಸಿ ಸಂಯೋಜಕ ರವಿ ಅತ್ನಿ ಮತದಾನ ಕುರಿತು ಮಾತನಾಡಿದರು.</p>.<p>ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಸಹಾಯಕ ಪ್ರಾಧ್ಯಾಪಕರು, ತಾಲ್ಲೂಕು ಪಂಚಾಯಿತಿ ಕಚೇರಿ ಸಿಬ್ಬಂದಿಯು ಕೆಂಪೇಗೌಡ ಸರ್ಕಲ್, ಕೋಟೆ ಬಯಲಿನಲ್ಲಿ ಜಾಗೃತಿ ಜಾಥಾ ನಡೆಸಿದರು.</p>.<p>ಕೋಟೆ ಬಯಲಿನಲ್ಲಿ ಮಾನವ ಸರಪಳಿ ನಿರ್ಮಿಸಿ ಮತದಾನ ಮಾಡುವ ಬಗ್ಗೆ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಜಾಗೃತಿ ಜಾಥಾದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>