ಕನಕಪುರ: ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಅವರ ಪರವಾಗಿ ಸಾಹಿತಿ ಬಿ.ಟಿ. ಲಲಿತಾ ನಾಯಕ್ ಅವರು ಪ್ರಚಾರ ಆರಂಭಿಸಿದ್ದಾರೆ. ಸುರೇಶ್ ಪರ ವಿಡಿಯೊ ಹರಿಬಿಟ್ಟಿರುವ ಅವರು, ‘ಯಾವುದೇ ಹಮ್ಮುಬಿಮ್ಮಿಲ್ಲದೇ ಸಾರ್ವಜನಿಕ ಸೇವೆಯನ್ನೇ ಬದುಕಾಗಿಸಿಕೊಂಡಿರುವ ಸುರೇಶ್ ಅವರಿಗೆ ಜನ ಮತ ನೀಡಬೇಕು’ ಎಂದು ಮನವಿ ಮಾಡಿದ್ದಾರೆ.