<p><strong>ಬಿಡದಿ (ರಾಮನಗರ</strong>): ಕೇಬಲ್ ಅಳವಡಿಕೆಗೆ ಅನುಮತಿ ನೀಡಲು ವಿದ್ಯುತ್ ಗುತ್ತಿಗೆದಾರನಿಂದ ಕಚೇರಿಯಲ್ಲಿ ₹30 ಸಾವಿರ ಲಂಚ ಪಡೆಯುತ್ತಿದ್ದ ಬೆಸ್ಕಾಂನ ಬಿಡದಿ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪುಟ್ಟಸ್ವಾಮಿಯನ್ನು ಲೋಕಾಯುಕ್ತ ಪೊಲೀಸರು ಬುಧವಾರ ಹಣದ ಸಮೇತ ಬಂಧಿಸಿದ್ದಾರೆ.</p><p>ವಿದ್ಯುತ್ ಗುತ್ತಿಗೆದಾರ ಅನಂತರಾಜ್ ಎಂಬುವರು ಬಿಡದಿ ಭಾಗದಲ್ಲಿ ಕೇಬಲ್ ಅಳವಡಿಸಲು ಗುತ್ತಿಗೆ ಪಡೆದಿದ್ದರು. ಗುತ್ತಿಗೆ ಮಂಜೂರಾತಿಯ ಪತ್ರಕ್ಕೆ ಸಹಿ ಮಾಡಲು ₹ 1.50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪುಟ್ಟಸ್ವಾಮಿ, ಮುಂಗಡವಾಗಿ ₹ 30 ಸಾವಿರ ತಂದು ಕೊಡುವಂತೆ ಹೇಳಿದ್ದ. ಈ ಕುರಿತು, ಅನಂತರಾಜ್ ಲೋಕಾಯುಕ್ತಕ್ಕೆ ದೂರು ಕೊಟ್ಟಿದ್ದರು.</p><p>ಬೆಳಿಗ್ಗೆ ಅನಂತರಾಜ್ಗೆ ಕರೆ ಮಾಡಿದ್ದ ಪುಟ್ಟಸ್ವಾಮಿ, ಛತ್ರ ಗ್ರಾಮದಲ್ಲಿರುವ ತನ್ನ ಕಚೇರಿಗೆ ಹಣ ತಲುಪಿಸುವಂತೆ ಸೂಚಿಸಿದ್ದ. ಈ ಕುರಿತು ಮಾಹಿತಿ ಪಡೆದಿದ್ದ ನಮ್ಮ ತಂಡ ಮುಂಚೆಯೇ ಕಚೇರಿಗೆ ತೆರಳಿತ್ತು. ಕಚೇರಿಗೆ ಬಂದ ಪುಟ್ಟಸ್ವಾಮಿ, ಅನಂತರಾಜ್ ಅವರಿಂದ ₹ 30 ಸಾವಿರ ಲಂಚ ಪಡೆಯುತ್ತಿದ್ದಾಗ ಬಂಧಿಸಲಾಯಿತು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಡದಿ (ರಾಮನಗರ</strong>): ಕೇಬಲ್ ಅಳವಡಿಕೆಗೆ ಅನುಮತಿ ನೀಡಲು ವಿದ್ಯುತ್ ಗುತ್ತಿಗೆದಾರನಿಂದ ಕಚೇರಿಯಲ್ಲಿ ₹30 ಸಾವಿರ ಲಂಚ ಪಡೆಯುತ್ತಿದ್ದ ಬೆಸ್ಕಾಂನ ಬಿಡದಿ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪುಟ್ಟಸ್ವಾಮಿಯನ್ನು ಲೋಕಾಯುಕ್ತ ಪೊಲೀಸರು ಬುಧವಾರ ಹಣದ ಸಮೇತ ಬಂಧಿಸಿದ್ದಾರೆ.</p><p>ವಿದ್ಯುತ್ ಗುತ್ತಿಗೆದಾರ ಅನಂತರಾಜ್ ಎಂಬುವರು ಬಿಡದಿ ಭಾಗದಲ್ಲಿ ಕೇಬಲ್ ಅಳವಡಿಸಲು ಗುತ್ತಿಗೆ ಪಡೆದಿದ್ದರು. ಗುತ್ತಿಗೆ ಮಂಜೂರಾತಿಯ ಪತ್ರಕ್ಕೆ ಸಹಿ ಮಾಡಲು ₹ 1.50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪುಟ್ಟಸ್ವಾಮಿ, ಮುಂಗಡವಾಗಿ ₹ 30 ಸಾವಿರ ತಂದು ಕೊಡುವಂತೆ ಹೇಳಿದ್ದ. ಈ ಕುರಿತು, ಅನಂತರಾಜ್ ಲೋಕಾಯುಕ್ತಕ್ಕೆ ದೂರು ಕೊಟ್ಟಿದ್ದರು.</p><p>ಬೆಳಿಗ್ಗೆ ಅನಂತರಾಜ್ಗೆ ಕರೆ ಮಾಡಿದ್ದ ಪುಟ್ಟಸ್ವಾಮಿ, ಛತ್ರ ಗ್ರಾಮದಲ್ಲಿರುವ ತನ್ನ ಕಚೇರಿಗೆ ಹಣ ತಲುಪಿಸುವಂತೆ ಸೂಚಿಸಿದ್ದ. ಈ ಕುರಿತು ಮಾಹಿತಿ ಪಡೆದಿದ್ದ ನಮ್ಮ ತಂಡ ಮುಂಚೆಯೇ ಕಚೇರಿಗೆ ತೆರಳಿತ್ತು. ಕಚೇರಿಗೆ ಬಂದ ಪುಟ್ಟಸ್ವಾಮಿ, ಅನಂತರಾಜ್ ಅವರಿಂದ ₹ 30 ಸಾವಿರ ಲಂಚ ಪಡೆಯುತ್ತಿದ್ದಾಗ ಬಂಧಿಸಲಾಯಿತು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>