ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಪಟ್ಟಣ: ಕೆಐಎಡಿಬಿ ಎಂಜಿನಿಯರ್ ಶಶಿಕುಮಾರ್ ಮಾವನ ಮನೆಯಲ್ಲಿ ಲೋಕಾಯುಕ್ತ ಶೋಧ

Published 30 ಅಕ್ಟೋಬರ್ 2023, 11:28 IST
Last Updated 30 ಅಕ್ಟೋಬರ್ 2023, 11:28 IST
ಅಕ್ಷರ ಗಾತ್ರ

ಚನ್ನಪಟ್ಟಣ (ರಾಮನಗರ): ನಗರದ ವಿವೇಕಾನಂದ ನಗರದಲ್ಲಿರುವ ಮಂಡ್ಯದ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಎಂಜಿನಿಯರ್ ಶಶಿಕುಮಾರ್ ಅವರ ಮಾವ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಸೋಮವಾರ ದಾಳಿ ನಡೆಸಿದ್ದಾರೆ.

ಶಶಿಕುಮಾರ್ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ, ಇನ್‌ಸ್ಪೆಕ್ಟರ್ ಕೃಷ್ಣಯ್ಯ ಎಂಬುವರ ನೇತೃತ್ವದ ತಂಡವು ಶಶಿಕುಮಾರ್ ಅವರ ಮಾವ ರಾಮಲಿಂಗಯ್ಯ ಅವರ ಮನೆಗೆ ಬೆಳಿಗ್ಗೆ ದಾಳಿ ನಡೆಸಿತು. ಮನೆಯಲ್ಲಿದ್ದ ಕುಟುಂಬದ ಸದಸ್ಯರನ್ನು ವಿಚಾರಣೆ ನಡೆಸಿದ ತಂಡ, ದಾಖಲೆಗಳಿಗಾಗಿ ಹುಡುಕಾಟ ನಡೆಸಿದೆ. ಬಳಿಕ, ಕೆಲ ದಾಖಲೆಗಳನ್ನು ತಮ್ಮ ವಶಕ್ಕೆ ಪಡೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ಶಶಿಕುಮಾರ್ ಅವರು ಮದ್ದೂರು ತಾಲೂಕಿನ‌ ಬೆಳ್ಳೂರು ಗ್ರಾಮದವರಾಗಿದ್ದು, ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಮನೆಯಲ್ಲಿ ವಾಸವಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT