<p><strong>ಕನಕಪುರ (ರಾಮನಗರ):</strong> ನಗರದಲ್ಲಿ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ, ಇತ್ತೀಚೆಗೆ ಉಪ ಲೋಕಾಯುಕ್ತ ಅವರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಹಿನ್ನೆಲೆಯಲ್ಲಿ, ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಪಿ.ವಿ. ಸ್ನೇಹ ಅವರು ನಗರದ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಇನ್ಸ್ಪೆಕ್ಟರ್ ಸಂದೀಪ್ ಕುಮಾರ್ ಮತ್ತು ಸಿಬ್ಬಂದಿಯೊಂದಗೆ ಘಟಕಕ್ಕೆ ಭೇಟಿ ನೀಡಿದ ಸ್ನೇಹ ಅವರು, ನಗರಸಭೆಯ ಅಧಿಕಾರಿಗಳಿಂದ ವಿಲೇವಾರಿ ಕುರಿತು ಮಾಹಿತಿ ಪಡೆದರು. ಈ ವೇಳೆ, ವಿಲೇವಾರಿಯಲ್ಲಿ ಹೇಳಿಕೊಳ್ಳುವಂತಹ ಪ್ರಗತಿ ಕಾಣದಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ನಗರಸಭೆಯಲ್ಲಿ ಪರಿಸರ ಎಂಜಿನಿಯರ್ ಇಲ್ಲದಿರುವುದು ಅವರ ಗಮನಕ್ಕೆ ಬಂತು.</p>.<p>ಈ ವೇಳೆ, ನಗರಸಭೆ ಅಧಿಕಾರಿಗಳು ನಗರದ ತ್ಯಾಜ್ಯ ಸಂಗ್ರಹ ಹಾಗೂ ವಿಲೇವಾರಿ ವಿಲೇವಾರಿ ಕುರಿತು ಮಾಹಿತಿ ನೀಡಿದರು. ಅದಕ್ಕೆ ಪ್ರತಿಕ್ರಿಯಿಸಿದ ಸ್ನೇಹ ಅವರು, ತ್ಯಾಜ್ಯ ಸಮಸ್ಯೆಯನ್ನು ಆದಷ್ಟು ಬೇಗ ಪರಿಹರಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಮುಂದೆಯೂ ದಿಢೀರ್ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p><strong>ಎಡಿಎಲ್ಆರ್ ಕಚೇರಿಗೆ ಭೇಟಿ: </strong>ನಗರದ ಭೂ ದಾಖಲೆಗಳ ಸಹಾಯಕ ನಿರ್ದೇಶಕರ (ಎಡಿಎಲ್ಆರ್) ಕಚೇರಿಗೆ ಸ್ನೇಹ ಅವರು ದಿಢೀರ್ ಭೇಟಿ ನೀಡಿದರು. ವಿವಿಧ ದಾಖಲೆಗಳನ್ನು ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಕಾಲದಲ್ಲಿ ಬಂದಿರುವ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡುವಂತೆ ಸೂಚನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ (ರಾಮನಗರ):</strong> ನಗರದಲ್ಲಿ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ, ಇತ್ತೀಚೆಗೆ ಉಪ ಲೋಕಾಯುಕ್ತ ಅವರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಹಿನ್ನೆಲೆಯಲ್ಲಿ, ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಪಿ.ವಿ. ಸ್ನೇಹ ಅವರು ನಗರದ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಇನ್ಸ್ಪೆಕ್ಟರ್ ಸಂದೀಪ್ ಕುಮಾರ್ ಮತ್ತು ಸಿಬ್ಬಂದಿಯೊಂದಗೆ ಘಟಕಕ್ಕೆ ಭೇಟಿ ನೀಡಿದ ಸ್ನೇಹ ಅವರು, ನಗರಸಭೆಯ ಅಧಿಕಾರಿಗಳಿಂದ ವಿಲೇವಾರಿ ಕುರಿತು ಮಾಹಿತಿ ಪಡೆದರು. ಈ ವೇಳೆ, ವಿಲೇವಾರಿಯಲ್ಲಿ ಹೇಳಿಕೊಳ್ಳುವಂತಹ ಪ್ರಗತಿ ಕಾಣದಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ನಗರಸಭೆಯಲ್ಲಿ ಪರಿಸರ ಎಂಜಿನಿಯರ್ ಇಲ್ಲದಿರುವುದು ಅವರ ಗಮನಕ್ಕೆ ಬಂತು.</p>.<p>ಈ ವೇಳೆ, ನಗರಸಭೆ ಅಧಿಕಾರಿಗಳು ನಗರದ ತ್ಯಾಜ್ಯ ಸಂಗ್ರಹ ಹಾಗೂ ವಿಲೇವಾರಿ ವಿಲೇವಾರಿ ಕುರಿತು ಮಾಹಿತಿ ನೀಡಿದರು. ಅದಕ್ಕೆ ಪ್ರತಿಕ್ರಿಯಿಸಿದ ಸ್ನೇಹ ಅವರು, ತ್ಯಾಜ್ಯ ಸಮಸ್ಯೆಯನ್ನು ಆದಷ್ಟು ಬೇಗ ಪರಿಹರಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಮುಂದೆಯೂ ದಿಢೀರ್ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p><strong>ಎಡಿಎಲ್ಆರ್ ಕಚೇರಿಗೆ ಭೇಟಿ: </strong>ನಗರದ ಭೂ ದಾಖಲೆಗಳ ಸಹಾಯಕ ನಿರ್ದೇಶಕರ (ಎಡಿಎಲ್ಆರ್) ಕಚೇರಿಗೆ ಸ್ನೇಹ ಅವರು ದಿಢೀರ್ ಭೇಟಿ ನೀಡಿದರು. ವಿವಿಧ ದಾಖಲೆಗಳನ್ನು ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಕಾಲದಲ್ಲಿ ಬಂದಿರುವ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡುವಂತೆ ಸೂಚನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>