ಕರ್ನಾಟಕ ಜಾನಪದ ಪರಿಷತ್ತಿನ ಚನ್ನಪಟ್ಟಣ ತಾಲ್ಲೂಕು ಘಟಕದ ಅಧ್ಯಕ್ಷ ವಿಜಯ ರಾಂಪುರ ಮಾತನಾಡಿ ಅಭಿಜಾತ, ತಳಮಟ್ಟದ ಕಲಾವಿದ ಮಂಟೇಯಪ್ಪನನ್ನು ಜಾನಪದ ಪರಿಷತ್ತು ಗುರುತಿಸಿರುವುದು ಅಭಿನಂದನಾರ್ಹ ವಿಷಯ. ಜನಪದ ಎನ್ನುವುದು ವಿಜ್ಞಾನ, ನಾವೆಲ್ಲ ಜಾನಪದವನ್ನು ಅಪ್ಪಿಕೊಳ್ಳಬೇಕಿದೆ. ಸಂದೇಶಗಳನ್ನು ಹೊತ್ತು ಒಂದೂರಿನಿಂದ ಮತ್ತೊಂದೂರಿಗೆ ಕಲಾವಿದರು ಹೋಗುವುದರ ಜೊತೆಗೆ ಕಲೆಯನ್ನು ಪಸರಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದರು.