<p><strong>ಹಾರೋಹಳ್ಳಿ:</strong> ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಎಂಜಿನಿಯರ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಯಾನಂದ ಸಾಗರ್ ಕಾಲೇಜು ಬಳಿ ನಡೆದಿದೆ. </p>.<p>ಕೋಲಾರ ಜಿಲ್ಲೆ ಬೇತಮಂಗಲ ಗ್ರಾಮದ ಹರ್ಷಿತ್ (19), ನೆಲಮಂಗಲದ ದರ್ಶನ್ (19) ಮೃತರು. ಹಾರೋಹಳ್ಳಿ ಬಳಿಯ ದಯಾನಂದ ಸಾಗರ್ ಕಾಲೇಜಿನಲ್ಲಿ ಎರಡನೇ ವರ್ಷದ ಎಂಜಿನಿಯರ್ ವಿದ್ಯಾಭ್ಯಾಸ ಮಾಡುತ್ತಿದ್ದರು.</p>.<p>ಸೋಮವಾರ ಸಂಜೆ ಹರ್ಷಿತ್ ತನ್ನಿಬ್ಬರ ಸ್ನೇಹಿತರೊಂದಿಗೆ ದ್ವಿಚಕ್ರ ವಾಹನದಲ್ಲಿ ತ್ರಿಬಲ್ ರೈಡಿಂಗ್ ಹೋಗುತ್ತಿದ್ದಾಗ ತಾಮಸಂದ್ರ ಬೈಪಾಸ್ ಜಂಕ್ಷನ್ನಲ್ಲಿ ಬೆಂಗಳೂರು ಕಡೆಯಿಂದ ಕನಕಪುರ ಕಡೆಗೆ ಬರುತ್ತಿದ್ದ ಲಾರಿಗೆ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ಹೊಡೆದಿದೆ.</p>.<p>ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹರ್ಷಿತ್ ಮತ್ತು ದರ್ಶನ್ ಸ್ಥಳದಲ್ಲೇ ಮೃತಪಟ್ಟರೆ, ಹಿಂಬದಿಯಲ್ಲಿ ಕುಳಿತಿದ್ದ ಗವಿ ಸಿದ್ದೇಶ (19) ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. </p>.<p>ಹಾರೋಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾರೋಹಳ್ಳಿ:</strong> ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಎಂಜಿನಿಯರ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಯಾನಂದ ಸಾಗರ್ ಕಾಲೇಜು ಬಳಿ ನಡೆದಿದೆ. </p>.<p>ಕೋಲಾರ ಜಿಲ್ಲೆ ಬೇತಮಂಗಲ ಗ್ರಾಮದ ಹರ್ಷಿತ್ (19), ನೆಲಮಂಗಲದ ದರ್ಶನ್ (19) ಮೃತರು. ಹಾರೋಹಳ್ಳಿ ಬಳಿಯ ದಯಾನಂದ ಸಾಗರ್ ಕಾಲೇಜಿನಲ್ಲಿ ಎರಡನೇ ವರ್ಷದ ಎಂಜಿನಿಯರ್ ವಿದ್ಯಾಭ್ಯಾಸ ಮಾಡುತ್ತಿದ್ದರು.</p>.<p>ಸೋಮವಾರ ಸಂಜೆ ಹರ್ಷಿತ್ ತನ್ನಿಬ್ಬರ ಸ್ನೇಹಿತರೊಂದಿಗೆ ದ್ವಿಚಕ್ರ ವಾಹನದಲ್ಲಿ ತ್ರಿಬಲ್ ರೈಡಿಂಗ್ ಹೋಗುತ್ತಿದ್ದಾಗ ತಾಮಸಂದ್ರ ಬೈಪಾಸ್ ಜಂಕ್ಷನ್ನಲ್ಲಿ ಬೆಂಗಳೂರು ಕಡೆಯಿಂದ ಕನಕಪುರ ಕಡೆಗೆ ಬರುತ್ತಿದ್ದ ಲಾರಿಗೆ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ಹೊಡೆದಿದೆ.</p>.<p>ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹರ್ಷಿತ್ ಮತ್ತು ದರ್ಶನ್ ಸ್ಥಳದಲ್ಲೇ ಮೃತಪಟ್ಟರೆ, ಹಿಂಬದಿಯಲ್ಲಿ ಕುಳಿತಿದ್ದ ಗವಿ ಸಿದ್ದೇಶ (19) ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. </p>.<p>ಹಾರೋಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>