ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾರಿ ಡಿಕ್ಕಿ: ಧರೆಗೆ ಉರುಳಿದ ವಿದ್ಯುತ್‌ ಕಂಬಗಳು

Last Updated 8 ಜುಲೈ 2019, 13:21 IST
ಅಕ್ಷರ ಗಾತ್ರ

ರಾಮನಗರ: ನಗರದ ಹೊರವಲಯದಲ್ಲಿ ಇರುವ ಕುಂಬಾಪುರ ಗೇಟ್ ಬಳಿ ಹೆದ್ದಾರಿಯಲ್ಲಿ ಸೋಮವಾರ ಬೆಳಗ್ಗೆ ಸರಕು ಸಾಗಣೆ ಲಾರಿಯೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ನಾಲ್ಕು ಕಂಬಗಳು ನೆಲಕ್ಕೆ ಉರುಳಿ ಬಿದ್ದವು.

ಮುಂಜಾನೆ ಐದರ ವೇಳೆಗೆ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸರಕು ಹೊತ್ತು ಸಾಗುತ್ತಿದ್ದ ಲಾರಿ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಯಿತು. ಅಪಘಾತದ ರಭಸಕ್ಕೆ ಅಕ್ಕಪಕ್ಕದ ಮೂರು ಕಂಬಗಳು ಧರೆಗೆ ಉರುಳಿದವು. ಸ್ಥಳೀಯರು ಹಾಗೂ ಈ ಮಾರ್ಗವಾಗಿ ಸಂಚರಿಸುತ್ತಿದ್ದ ಇತರೆ ವಾಹನಗಳ ಸವಾರರು ಈ ಬಗ್ಗೆ ಮಾಹಿತಿ ನೀಡಿ ಉಳಿದ ವಾಹನಗಳ ಸಂಚಾರ ತಡೆದರು. ಇದರಿಂದಾಗಿ ಅನಾಹುತ ತಪ್ಪಿತು. ಘಟನೆಯಿಂದಾಗಿ ಕೆಲವು ಕಾಲ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆಯಾಯಿತು.

ಸಾರ್ವಜನಿಕರು ಬೆಸ್ಕಾಂ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಅವರು ಈ ಮಾರ್ಗದಲ್ಲಿ ವಿದ್ಯುತ್‌ ಪೂರೈಕೆ ಸ್ಥಗಿತಗೊಳಿಸಿದರು. ಬೆಳಿಗ್ಗೆ 10ರ ನಂತರ ಕಂಬಗಳ ದುರಸ್ತಿ ಕಾರ್ಯಾಚರಣೆಯು ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT