ಬೆಂಗಳೂರಿನ ಶ್ರೀನಗರ ನಿವಾಸಿಗಳಾದ ರಾಕೇಶ್(21) ಹಾಗೂ ಐಶ್ವರ್ಯ (18) ಆತ್ಮಹತ್ಯೆಗೆ ಯತ್ನಿಸಿದವರು. ಈ ಇಬ್ಬರು ಕಳೆದೊಂದು ವರ್ಷದಿಂದ ಪ್ರೀತಿಸುತ್ತಿದ್ದು, ಅಂತರ್ಜಾತಿಯ ಕಾರಣ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಇದರಿಂದ ಮನನೊಂದು ಇಬ್ಬರೂ ಬೆಟ್ಟದಿಂದ ಕೆಳಗೆ ಜಿಗಿದಿದ್ದು, ಯುವಕನ ಕಾಲು ಮುರಿದಿದೆ. ಯುವತಿಯ ಕಾಲು ಹಾಗೂ ತಲೆಗೆ ಪೆಟ್ಟಾಗಿದೆ.