ಜಿಲ್ಲಾ ಗ್ರಾಹಕರ ಪರಿಹಾರ ವೇದಿಕೆ ದೂರಿನ ವಿಚಾರಣೆ ನಡೆಸಿತು. ಬೆಳೆ ನಷ್ಟದ ಪರಿಹಾರವಾಗಿ ₨78,219, ಮಾನಸಿಕ ಹಾಗೂ ದೈಹಿಕ ತೊಂದರೆಗೆ ಪರಿಹಾರವಾಗಿ ₨10 ಸಾವಿರ ಹಾಗೂ ವ್ಯಾಜ್ಯದ ಖರ್ಚು ₨5 ಸಾವಿರ ಅನ್ನು ಆರು ವಾರದ ಒಳಗೆ ನೀಡುವಂತೆ ವೇದಿಕೆಯು ಆದೇಶ ನೀಡಿತು. ಪರಿಹಾರ ನೀಡಲು ತಡವಾದಲ್ಲಿ ದೂರು ಸಲ್ಲಿಸಿದ ದಿನದಿಂದ ಪರಿಹಾರ ವಿತರಣೆ ದಿನದವರೆಗೂ ಶೇ 6ರ ಬಡ್ಡಿ ನೀಡುವಂತೆಯೂ ಜಿಲ್ಲಾ ಗ್ರಾಹಕರ ಪರಿಹಾರ ವೇದಿಕೆ ಅಧ್ಯಕ್ಷ ಎಸ್. ಎಲ್. ಪಾಟೀಲ್, ಸದಸ್ಯ ಪಿ.ಕೆ ಶಾಂತ ಆದೇಶಿಸಿದರು.