‘ಕಾಂಗ್ರೆಸ್ ಕುತಂತ್ರದಿಂದ ಸೋತೆವು’
2019ರಲ್ಲಿ ಜೆಡಿಎಸ್–ಕಾಂಗ್ರೆಸ್ ಮೈತ್ರಿ ಧರ್ಮ ಹೇಗೆ ಪಾಲನೆಯಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ. ಮಾಜಿ ಪ್ರಧಾನಿಯಾದ ನನ್ನ ತಾತ ತುಮಕೂರಿನಲ್ಲಿ ಮತ್ತು ಏನು ಅರಿಯದ ಯುವಕನಾದ ನಾನು ಮಂಡ್ಯದಲ್ಲಿ ಸೋಲಲು ಕಾಂಗ್ರೆಸ್ನವರ ಕುತಂತ್ರವೇ ಕಾರಣ. ಜೆಡಿಎಸ್ ಕುಟುಂಬ ರಾಜಕಾರಣದ ಬಗ್ಗೆ ಮಾತಾಡುವ ಕಾಂಗ್ರೆಸ್ನವರು ಈ ಸಲ ಚುನಾವಣೆಯಲ್ಲಿ ಯಾರ್ಯಾರಿಗೆ ಟಿಕೆಟ್ ಕೊಟ್ಟಿದೆ ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ. ಸಚಿವರು, ಶಾಸಕರ ಮಕ್ಕಳು, ಪತ್ನಿಗೆ ಟಿಕೆಟ್ ಕೊಟ್ಟಿರುವ ಅವರಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ’ ಎಂದು ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.