ತಾಲ್ಲೂಕಿನಲ್ಲಿ ಲಾಕ್ಡೌನ್ ಮಾಡಿರುವುದರಿಂದ ಬೀದಿಯಲ್ಲಿ ಭಿಕ್ಷೆ ಬೇಡುತ್ತಿದ್ದವರು, ಅನಾಥರು ಮೂರು ದಿನಗಳಿಂದ ಊಟದ ವ್ಯವಸ್ಥೆಯಿಲ್ಲದೆ ಪರದಾಡುತ್ತಿದ್ದರು. ಇದನ್ನು ಗಮನಿಸಿ ಸರ್ಕಲ್ ಇನ್ಸ್ಪೆಕ್ಟರ್ ಟಿ.ಟಿ.ಕೃಷ್ಣ ಅವರು ಅನ್ನ ಸಾಂಬಾರು ಪೊಟ್ಟಣ ಕಟ್ಟಿಸಿ ನಿರಾಶ್ರಿತರು ಎಲ್ಲಿದ್ದಾರೋ ಅಲ್ಲಿಗೆ ಹುಡುಕಿಕೊಂಡು ಹೋಗಿ ಅನ್ನದ ಪೊಟ್ಟಣ ವಿತರಣೆ ಮಾಡಿದರು.