<p><strong>ಮಾಗಡಿ:</strong> 12ನೇ ಶತಮಾನದಲ್ಲಿ ಶರಣ ಮಡಿವಾಳ ಮಾಚಿದೇವ ಸಮಾಜದ ಅಭಿವೃದ್ಧಿ, ಅಸ್ಪೃಶ್ಯತೆ ನಿವಾರಣೆ ಮತ್ತು ಸಮತಾವಾದಿ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಮಹಾನ್ ವ್ಯಕ್ತಿ ಎಂದು ತಹಶೀಲ್ದಾರ್ ಡಾ.ಪ್ರತಿಭಾ ಆರ್.ಅಭಿಪ್ರಾಯಪಟ್ಟರು.</p>.<p>ತಾಲ್ಲೂಕು ಆಡಳಿತ ಮತ್ತು ಮಾಚಿದೇವ ಮಡಿವಾಳರ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು. ‘ಅರಸು ಮೇಲಲ್ಲ. ಅಗಸ ಕೀಳಲ್ಲ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಎಂಬ ತತ್ವವನ್ನು ಮಾಚಿದೇವ 12ನೇ ಶತಮಾನದಲ್ಲೇ ಸಾರಿದ್ದರು. ಈ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಯಂತಿಗೆ ಅರ್ಥವಿದೆ’ ಎಂದರು.</p>.<p>ಮಾಚಿದೇವ ಕೇವಲ ಒಂದು ಸಮುದಾಯಕ್ಕೆ ಸೀಮಿತರಲ್ಲ. ಎಲ್ಲ ಸಮುದಾಯಕ್ಕೂ ಸೇರಿದವರು. ಅಸ್ಪೃಶ್ಯತೆ ಮತ್ತು ತಾರತಮ್ಯದಿಂದ ಬಳಲುತ್ತಿದ್ದ ದುರ್ಬಲರಿಗೆ ಸಮಪಾಲು ಮತ್ತು ಸಮಬಾಳು ಒದಗಿಸಲು ಶ್ರಮಿಸಿದ ಅವರ ಸಂದೇಶವನ್ನು ಅರ್ಥಮಾಡಿಕೊಳ್ಳಬೇಕು ಎಂದರು. </p>.<p>ನಿಸರ್ಗ ಪರಿಚರಣ ಟ್ರಸ್ಟ್ ಅಧ್ಯಕ್ಷ ಎಚ್.ಎನ್.ಶಿವಲಿಂಗಯ್ಯ, ಮಡಿವಾಳ ಮಾಚಿದೇವ ಕ್ರಿ.ಶ.1120-30ರ ಸುಮಾರಿಗೆ ವಿಜಯಪುರ ಜಿಲ್ಲೆ ದೇವರ ಹಿಪ್ಪರಗಿಯಲ್ಲಿ ಜನಿಸಿದರು. ನೂರಾರು ವಚನಗಳನ್ನು ಸಂರಕ್ಷಿಸಿದ ಕೀರ್ತಿಗೆ ಅವರು ಪಾತ್ರರು ಎಂದು ತಿಳಿಸಿದರು.</p>.<p>ಸಂಘದ ಅಧ್ಯಕ್ಷ ಟಿ.ಎಂ.ಶ್ರೀನಿವಾಸ್, ಅನುಭವ ಮಂಟಪದಲ್ಲಿ ಶಿವಶರಣರ ವಸ್ತ್ರಗಳನ್ನು ಶುದ್ಧಿ ಮಾಡುವ ಮಹತ್ವದ ಕಾರ್ಯ ಮಾತ್ರವಲ್ಲದೆ, ವಚನ ಸಾಹಿತ್ಯದ ಸಂರಕ್ಷಣೆ ಜವಾಬ್ದಾರಿ ಹೊತ್ತಿದ್ದರು ಎಂದು ಹೇಳಿದರು.</p>.<p>ಬೆಂಗಳೂರು ದಕ್ಷಿಣ ಜಿಲ್ಲಾ ಮಡಿವಾಳರ ಸಂಘದ ಅಧ್ಯಕ್ಷ ಮಂಟೆದಯ್ಯ, ಸಂಘಕ್ಕೆ ಎರಡು ಎಕರೆ ಜಮೀನು ಮಂಜೂರಾಗಲು ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಶ್ರಮಿಸಲಿದ್ದಾರೆ ಭರವಸೆ ವ್ಯಕ್ತಪಡಿಸಿದರು.</p>.<p>ಜಿಲ್ಲಾ ಕಾರ್ಯದರ್ಶಿ ಲೋಕೇಶ್, ಕಲ್ಕೆರೆ ಶಿವಣ್ಣ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ:</strong> 12ನೇ ಶತಮಾನದಲ್ಲಿ ಶರಣ ಮಡಿವಾಳ ಮಾಚಿದೇವ ಸಮಾಜದ ಅಭಿವೃದ್ಧಿ, ಅಸ್ಪೃಶ್ಯತೆ ನಿವಾರಣೆ ಮತ್ತು ಸಮತಾವಾದಿ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಮಹಾನ್ ವ್ಯಕ್ತಿ ಎಂದು ತಹಶೀಲ್ದಾರ್ ಡಾ.ಪ್ರತಿಭಾ ಆರ್.ಅಭಿಪ್ರಾಯಪಟ್ಟರು.</p>.<p>ತಾಲ್ಲೂಕು ಆಡಳಿತ ಮತ್ತು ಮಾಚಿದೇವ ಮಡಿವಾಳರ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು. ‘ಅರಸು ಮೇಲಲ್ಲ. ಅಗಸ ಕೀಳಲ್ಲ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಎಂಬ ತತ್ವವನ್ನು ಮಾಚಿದೇವ 12ನೇ ಶತಮಾನದಲ್ಲೇ ಸಾರಿದ್ದರು. ಈ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಯಂತಿಗೆ ಅರ್ಥವಿದೆ’ ಎಂದರು.</p>.<p>ಮಾಚಿದೇವ ಕೇವಲ ಒಂದು ಸಮುದಾಯಕ್ಕೆ ಸೀಮಿತರಲ್ಲ. ಎಲ್ಲ ಸಮುದಾಯಕ್ಕೂ ಸೇರಿದವರು. ಅಸ್ಪೃಶ್ಯತೆ ಮತ್ತು ತಾರತಮ್ಯದಿಂದ ಬಳಲುತ್ತಿದ್ದ ದುರ್ಬಲರಿಗೆ ಸಮಪಾಲು ಮತ್ತು ಸಮಬಾಳು ಒದಗಿಸಲು ಶ್ರಮಿಸಿದ ಅವರ ಸಂದೇಶವನ್ನು ಅರ್ಥಮಾಡಿಕೊಳ್ಳಬೇಕು ಎಂದರು. </p>.<p>ನಿಸರ್ಗ ಪರಿಚರಣ ಟ್ರಸ್ಟ್ ಅಧ್ಯಕ್ಷ ಎಚ್.ಎನ್.ಶಿವಲಿಂಗಯ್ಯ, ಮಡಿವಾಳ ಮಾಚಿದೇವ ಕ್ರಿ.ಶ.1120-30ರ ಸುಮಾರಿಗೆ ವಿಜಯಪುರ ಜಿಲ್ಲೆ ದೇವರ ಹಿಪ್ಪರಗಿಯಲ್ಲಿ ಜನಿಸಿದರು. ನೂರಾರು ವಚನಗಳನ್ನು ಸಂರಕ್ಷಿಸಿದ ಕೀರ್ತಿಗೆ ಅವರು ಪಾತ್ರರು ಎಂದು ತಿಳಿಸಿದರು.</p>.<p>ಸಂಘದ ಅಧ್ಯಕ್ಷ ಟಿ.ಎಂ.ಶ್ರೀನಿವಾಸ್, ಅನುಭವ ಮಂಟಪದಲ್ಲಿ ಶಿವಶರಣರ ವಸ್ತ್ರಗಳನ್ನು ಶುದ್ಧಿ ಮಾಡುವ ಮಹತ್ವದ ಕಾರ್ಯ ಮಾತ್ರವಲ್ಲದೆ, ವಚನ ಸಾಹಿತ್ಯದ ಸಂರಕ್ಷಣೆ ಜವಾಬ್ದಾರಿ ಹೊತ್ತಿದ್ದರು ಎಂದು ಹೇಳಿದರು.</p>.<p>ಬೆಂಗಳೂರು ದಕ್ಷಿಣ ಜಿಲ್ಲಾ ಮಡಿವಾಳರ ಸಂಘದ ಅಧ್ಯಕ್ಷ ಮಂಟೆದಯ್ಯ, ಸಂಘಕ್ಕೆ ಎರಡು ಎಕರೆ ಜಮೀನು ಮಂಜೂರಾಗಲು ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಶ್ರಮಿಸಲಿದ್ದಾರೆ ಭರವಸೆ ವ್ಯಕ್ತಪಡಿಸಿದರು.</p>.<p>ಜಿಲ್ಲಾ ಕಾರ್ಯದರ್ಶಿ ಲೋಕೇಶ್, ಕಲ್ಕೆರೆ ಶಿವಣ್ಣ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>