<p><strong>ಮಾಗಡಿ:</strong> ಸರ್ಕಾರಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರು ಸುಧಾರಣೆ ಆಗಬೇಕಿದ್ದು ಶ್ರದ್ಧೆ, ಪ್ರಾಮಾಣಿಕತೆಯಿಂದ ಕರ್ತವ್ಯವನ್ನು ನಿರ್ವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ಹೇಳಿದರು.</p>.<p>ಪಟ್ಟಣದ ಹೊಂಬಾಳಮ್ಮನಪೇಟೆ ಸರ್ಕಾರಿ ಶಾಲಾ ಆವರಣದಲ್ಲಿ ಈಚೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ 150ಕ್ಕೂ ಹೆಚ್ಚು ಸರ್ಕಾರಿ ಶಾಲೆಯ ಮಕ್ಕಳಿ ಉಚಿತವಾಗಿ ಶಾಲಾ ಕಿಟ್ ವಿತರಿಸಿ ಅವರು ಮಾತನಾಡಿದರು.</p>.<p>ಸರ್ಕಾರಿ ಶಾಲೆಗಳು ಉತ್ತಮ ವಿದ್ಯಾರ್ಥಿಗಳನ್ನು ತಯಾರಿಸುವ ಕೇಂದ್ರಗಳಾಗಿವೆ, ಇಲ್ಲಿ ವಿದ್ಯಾರ್ಥಿಗಳನ್ನು ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢಗೊಳಿಸಲಾಗುತ್ತದೆ. ಶಿಕ್ಷಕರು ಮಕ್ಕಳಲ್ಲಿ ಕಲಿಕೆಯ ವಿಷಯದಲ್ಲಿ ಕುತೂಹಲ, ಸ್ಫೂರ್ತಿ, ಓದುವ ಚೈತನ್ಯವನ್ನು ತುಂಬುವ ಮೂಲಕ ಮೌಲ್ಯಾಧರಿತ ಶಿಕ್ಷಣ ನೀಡಬೇಕು ಎಂದು ತಿಳಿಸಿದರು.</p>.<p>ಯುವ ಬೆಂಗಳೂರು ಟ್ರಸ್ಟ್ ಸಂಸ್ಥಾಪ ಅಧ್ಯಕ್ಷ ಕಿರಣ್ ಸಾಗರ್ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ನಡೆಸುತ್ತಿರುವ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಶಾಲಾ ಕಿಟ್ಗಳನ್ನು ವಿತರಿಸಲಾಗುತ್ತಿದೆ ಎಂದು ತಿಳಿಸಿದರು.</p>.<p>ಯುವ ಬೆಂಗಳೂರು ಟ್ರಸ್ಟ್ ಉಪಾಧ್ಯಕ್ಷ ಸುನೀಲ್, ಕಾರ್ಯದರ್ಶಿ ಶ್ವೇತಾ, ದಾನಿ ಚಂದ್ರಶೇಖರ್, ಸದಸ್ಯರಾದ ಅಶೋಕ್, ಮುಖ್ಯ ಶಿಕ್ಷಕ ವೆಂಕಟಾಚಲಯ್ಯ, ಶಿಕ್ಷಕರಾದ ಬಿ.ಎನ್. ಜಯರಾಮ್, ಉಮೇಶ್, ಬಸವರಾಜು, ಪತಿಗೌಡ, ಸಿಆರ್ಪಿ ಶಿವಕುಮಾರ್, ಎಸ್ಡಿಎಂಸಿ ಅಧ್ಯಕ್ಷೆ ಮಂಗಳಗೌರಮ್ಮ ಸೇರಿದಂತೆ ವಿವಿಧ ಶಾಲೆಯ ಶಿಕ್ಷಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ:</strong> ಸರ್ಕಾರಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರು ಸುಧಾರಣೆ ಆಗಬೇಕಿದ್ದು ಶ್ರದ್ಧೆ, ಪ್ರಾಮಾಣಿಕತೆಯಿಂದ ಕರ್ತವ್ಯವನ್ನು ನಿರ್ವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ಹೇಳಿದರು.</p>.<p>ಪಟ್ಟಣದ ಹೊಂಬಾಳಮ್ಮನಪೇಟೆ ಸರ್ಕಾರಿ ಶಾಲಾ ಆವರಣದಲ್ಲಿ ಈಚೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ 150ಕ್ಕೂ ಹೆಚ್ಚು ಸರ್ಕಾರಿ ಶಾಲೆಯ ಮಕ್ಕಳಿ ಉಚಿತವಾಗಿ ಶಾಲಾ ಕಿಟ್ ವಿತರಿಸಿ ಅವರು ಮಾತನಾಡಿದರು.</p>.<p>ಸರ್ಕಾರಿ ಶಾಲೆಗಳು ಉತ್ತಮ ವಿದ್ಯಾರ್ಥಿಗಳನ್ನು ತಯಾರಿಸುವ ಕೇಂದ್ರಗಳಾಗಿವೆ, ಇಲ್ಲಿ ವಿದ್ಯಾರ್ಥಿಗಳನ್ನು ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢಗೊಳಿಸಲಾಗುತ್ತದೆ. ಶಿಕ್ಷಕರು ಮಕ್ಕಳಲ್ಲಿ ಕಲಿಕೆಯ ವಿಷಯದಲ್ಲಿ ಕುತೂಹಲ, ಸ್ಫೂರ್ತಿ, ಓದುವ ಚೈತನ್ಯವನ್ನು ತುಂಬುವ ಮೂಲಕ ಮೌಲ್ಯಾಧರಿತ ಶಿಕ್ಷಣ ನೀಡಬೇಕು ಎಂದು ತಿಳಿಸಿದರು.</p>.<p>ಯುವ ಬೆಂಗಳೂರು ಟ್ರಸ್ಟ್ ಸಂಸ್ಥಾಪ ಅಧ್ಯಕ್ಷ ಕಿರಣ್ ಸಾಗರ್ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ನಡೆಸುತ್ತಿರುವ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಶಾಲಾ ಕಿಟ್ಗಳನ್ನು ವಿತರಿಸಲಾಗುತ್ತಿದೆ ಎಂದು ತಿಳಿಸಿದರು.</p>.<p>ಯುವ ಬೆಂಗಳೂರು ಟ್ರಸ್ಟ್ ಉಪಾಧ್ಯಕ್ಷ ಸುನೀಲ್, ಕಾರ್ಯದರ್ಶಿ ಶ್ವೇತಾ, ದಾನಿ ಚಂದ್ರಶೇಖರ್, ಸದಸ್ಯರಾದ ಅಶೋಕ್, ಮುಖ್ಯ ಶಿಕ್ಷಕ ವೆಂಕಟಾಚಲಯ್ಯ, ಶಿಕ್ಷಕರಾದ ಬಿ.ಎನ್. ಜಯರಾಮ್, ಉಮೇಶ್, ಬಸವರಾಜು, ಪತಿಗೌಡ, ಸಿಆರ್ಪಿ ಶಿವಕುಮಾರ್, ಎಸ್ಡಿಎಂಸಿ ಅಧ್ಯಕ್ಷೆ ಮಂಗಳಗೌರಮ್ಮ ಸೇರಿದಂತೆ ವಿವಿಧ ಶಾಲೆಯ ಶಿಕ್ಷಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>