<p><strong>ಮಾಗಡಿ</strong>: ತಾಲ್ಲೂಕಿನ ಚಂದೂರಾಯನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಿಂದ ಹೊಸ ತಳಿ ಪರಿಚಯ ಕಾರ್ಯಕ್ರಮ ಶನಿವಾರ ನಡೆಯಿತು.</p>.<p>ಬೇಸಾಯ ಶಾಸ್ತ್ರದ ವಿಜ್ಞಾನಿ ಡಾ.ದಿನೇಶ್ ಎಂ.ಎಸ್., ಮಾತಾನಾಡಿ ‘ಜಿಲ್ಲೆಯಲ್ಲಿ ಅಲಸಂದೆ ಪ್ರಮುಖ ದ್ವಿದಳ ಧಾನ್ಯದ ಬೆಳೆಯಾಗಿದ್ದು, ಅಂತರ ಬೆಳೆಯಾಗಿ ಬೆಳೆಯುವುದು ವಾಡಿಕೆ. ಪೂರ್ವ ಮುಂಗಾರಿನಲ್ಲಿ ಏಪ್ರಿಲ್- ಮೇ ಹಾಗೂ ತಡವಾದ ಮುಂಗಾರಿನಲ್ಲಿ ಅಗಸ್ಟ್-ಸೆಪ್ಟಂಬರ್ ತಿಂಗಳಿನಲ್ಲಿ ಬಿತ್ತನೆ ಮಾಡಲು ಸೂಕ್ತ. ಕೃಷಿ ವಿಜ್ಞಾನ ಕೇಂದ್ರದಿಂದ ಸುಧಾರಿತ ಅಲಸಂದೆ ತಳಿ ಕೆ.ಬಿಸಿ-9ನ್ನು ಹಕ್ಕಿನಾಳು ಗ್ರಾಮದ 20 ರೈತರಿಗೆ ಪ್ರಾತ್ಯಕ್ಷಿಕೆ ಮೂಲಕ ಪರಿಚಯಿಸಲಾಗುತ್ತಿದೆ’ ಎಂದರು.</p>.<p>ಕೆವಿಕೆ ಕೇಂದ್ರದ ಮುಖ್ಯಸ್ಥೆ ಡಾ.ಲತಾ.ಆರ್.ಕುಲಕರ್ಣಿ ಉಪನ್ಯಾಸ ನೀಡಿದರು. ವಿಜ್ಞಾನಿ ಡಾ.ಸೌಜನ್ಯಾ ದತ್ತು ಗ್ರಾಮದ ವಿಶೇಷ ಕಾರ್ಯಕ್ರಮಗಳ ಕುರಿತು ತಿಳಿಸಿದರು. ಕ್ಷೇತ್ರ ಪರಿವೀಕ್ಷಕ ಹರಿಪ್ರಸಾದ್, ರೈತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ</strong>: ತಾಲ್ಲೂಕಿನ ಚಂದೂರಾಯನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಿಂದ ಹೊಸ ತಳಿ ಪರಿಚಯ ಕಾರ್ಯಕ್ರಮ ಶನಿವಾರ ನಡೆಯಿತು.</p>.<p>ಬೇಸಾಯ ಶಾಸ್ತ್ರದ ವಿಜ್ಞಾನಿ ಡಾ.ದಿನೇಶ್ ಎಂ.ಎಸ್., ಮಾತಾನಾಡಿ ‘ಜಿಲ್ಲೆಯಲ್ಲಿ ಅಲಸಂದೆ ಪ್ರಮುಖ ದ್ವಿದಳ ಧಾನ್ಯದ ಬೆಳೆಯಾಗಿದ್ದು, ಅಂತರ ಬೆಳೆಯಾಗಿ ಬೆಳೆಯುವುದು ವಾಡಿಕೆ. ಪೂರ್ವ ಮುಂಗಾರಿನಲ್ಲಿ ಏಪ್ರಿಲ್- ಮೇ ಹಾಗೂ ತಡವಾದ ಮುಂಗಾರಿನಲ್ಲಿ ಅಗಸ್ಟ್-ಸೆಪ್ಟಂಬರ್ ತಿಂಗಳಿನಲ್ಲಿ ಬಿತ್ತನೆ ಮಾಡಲು ಸೂಕ್ತ. ಕೃಷಿ ವಿಜ್ಞಾನ ಕೇಂದ್ರದಿಂದ ಸುಧಾರಿತ ಅಲಸಂದೆ ತಳಿ ಕೆ.ಬಿಸಿ-9ನ್ನು ಹಕ್ಕಿನಾಳು ಗ್ರಾಮದ 20 ರೈತರಿಗೆ ಪ್ರಾತ್ಯಕ್ಷಿಕೆ ಮೂಲಕ ಪರಿಚಯಿಸಲಾಗುತ್ತಿದೆ’ ಎಂದರು.</p>.<p>ಕೆವಿಕೆ ಕೇಂದ್ರದ ಮುಖ್ಯಸ್ಥೆ ಡಾ.ಲತಾ.ಆರ್.ಕುಲಕರ್ಣಿ ಉಪನ್ಯಾಸ ನೀಡಿದರು. ವಿಜ್ಞಾನಿ ಡಾ.ಸೌಜನ್ಯಾ ದತ್ತು ಗ್ರಾಮದ ವಿಶೇಷ ಕಾರ್ಯಕ್ರಮಗಳ ಕುರಿತು ತಿಳಿಸಿದರು. ಕ್ಷೇತ್ರ ಪರಿವೀಕ್ಷಕ ಹರಿಪ್ರಸಾದ್, ರೈತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>