<p>ಮಾಗಡಿ: ಮಾರ್ಚ್ 29 ಭಾನುವಾರ ತಾಲ್ಲೂಕಿನ ಬೆಳಗುಂಬ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರ್ತಿಗೇಟ್ ಬಳಿ ಉಚಿತ ಮೇಘ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪೂಜಾರಿ ಪಾಳ್ಯ ಕೃಷ್ಣಮೂರ್ತಿ ತಿಳಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿ, ಎಂ.ಎಸ್. ರಾಮಯ್ಯ ಆಸ್ಪತ್ರೆ, ಮಹಾನಾಡು ಕಟ್ಟೆಮನೆ ಹಾಗೂ ಡಿ.ಕೆ. ಚಾರಿಟಬಲ್ ಟ್ರಸ್ಟ್ ಸಹಯೋಗದೊಂದಿಗೆ ಆರೋಗ್ಯ ಶಿಬಿರ ಆಯೋಜಿಸಲಾಗಿದೆ. ಸ್ತ್ರೀ ರೋಗ, ಕ್ಯಾನ್ಸರ್ ತಪಾಸಣೆ, ದಂತ ಚಿಕಿತ್ಸೆ, ಇಸಿಜಿ, ಕಣ್ಣಿನ ತಪಾಸಣೆ ನಡೆಯಲಿದೆ ಎಂದರು.</p>.<p>ಅವಶ್ಯಕತೆ ಇರುವವರಿಗೆ ಸ್ಥಳದಲ್ಲೇ ಕನ್ನಡಕ ವಿತರಣೆ ಹಾಗೂ ಶಸ್ತ್ರಚಿಕಿತ್ಸೆಯನ್ನು ಉಚಿತವಾಗಿ ಮಾಡಿಸಲಾಗುವುದು. ಶಿಬಿರಕ್ಕೆ ಬರುವ ಸಾರ್ವಜನಿಕರಿಗೆ ಆಟೊ ವ್ಯವಸ್ಥೆ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.</p>.<p>ಅಭಿವೃದ್ಧಿ ಕಾಮಗಾರಿಗಳಿಗೆ ತಡೆ- ಕಳವಳ: ಮಾಗಡಿ ಪಟ್ಟಣದಲ್ಲಿ ಸುಮಾರು ₹ 40 ಕೋಟಿ ವೆಚ್ಚದಲ್ಲಿ ಹೈಟೆಕ್ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಬಾಲಕೃಷ್ಣ ಮುಂದಾಗಿದ್ದಾರೆ. ಆದರೆ ಕೆಲವರು ನ್ಯಾಯಾಲಯದಿಂದ ತಡೆಯಾಜ್ಞೆ ತರುತ್ತಿರುವುದು ಬೇಸರದ ಸಂಗತಿ ಎಂದರು.</p>.<p>ಪಟ್ಟಣದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು ಚರಂಡಿ ಪಕ್ಕದಲ್ಲಿ ಪಾದಚಾರಿ ಮಾರ್ಗ ಅಭಿವೃದ್ಧಿಗಾಗಿ ರಸ್ತೆಯ ಎರಡೂ ಬದಿಯಲ್ಲಿ ತಲಾ 1.5 ಮೀಟರ್ ಜಾಗ ವಶಪಡಿಸಿಕೊಳ್ಳಲಾಗುತ್ತಿದೆ. ಅಂಗಡಿ ಮತ್ತು ಮನೆ ಕಟ್ಟುಕೊಳ್ಳುವವರು ಚರಂಡಿಯಿಂದ ಒಂದುವರೆ ಮೀಟರ್ ದೂರ ಕಟ್ಟಿಕೊಳ್ಳಬೇಕು ಎಂದರು.</p>.<p>ಏ. 26 ರಂದು ನೂತನ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗುವುದು ಎಂದು ತಿಳಿಸಿದರು. ನಾಗರಾಜು, ನರಸಿಂಹಯ್ಯ, ರಾಮಣ್ಣ, ಚಿಕ್ಕಣ್ಣ, ರಾಮಕೃಷ್ಣಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-14-552151413</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾಗಡಿ: ಮಾರ್ಚ್ 29 ಭಾನುವಾರ ತಾಲ್ಲೂಕಿನ ಬೆಳಗುಂಬ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರ್ತಿಗೇಟ್ ಬಳಿ ಉಚಿತ ಮೇಘ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪೂಜಾರಿ ಪಾಳ್ಯ ಕೃಷ್ಣಮೂರ್ತಿ ತಿಳಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿ, ಎಂ.ಎಸ್. ರಾಮಯ್ಯ ಆಸ್ಪತ್ರೆ, ಮಹಾನಾಡು ಕಟ್ಟೆಮನೆ ಹಾಗೂ ಡಿ.ಕೆ. ಚಾರಿಟಬಲ್ ಟ್ರಸ್ಟ್ ಸಹಯೋಗದೊಂದಿಗೆ ಆರೋಗ್ಯ ಶಿಬಿರ ಆಯೋಜಿಸಲಾಗಿದೆ. ಸ್ತ್ರೀ ರೋಗ, ಕ್ಯಾನ್ಸರ್ ತಪಾಸಣೆ, ದಂತ ಚಿಕಿತ್ಸೆ, ಇಸಿಜಿ, ಕಣ್ಣಿನ ತಪಾಸಣೆ ನಡೆಯಲಿದೆ ಎಂದರು.</p>.<p>ಅವಶ್ಯಕತೆ ಇರುವವರಿಗೆ ಸ್ಥಳದಲ್ಲೇ ಕನ್ನಡಕ ವಿತರಣೆ ಹಾಗೂ ಶಸ್ತ್ರಚಿಕಿತ್ಸೆಯನ್ನು ಉಚಿತವಾಗಿ ಮಾಡಿಸಲಾಗುವುದು. ಶಿಬಿರಕ್ಕೆ ಬರುವ ಸಾರ್ವಜನಿಕರಿಗೆ ಆಟೊ ವ್ಯವಸ್ಥೆ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.</p>.<p>ಅಭಿವೃದ್ಧಿ ಕಾಮಗಾರಿಗಳಿಗೆ ತಡೆ- ಕಳವಳ: ಮಾಗಡಿ ಪಟ್ಟಣದಲ್ಲಿ ಸುಮಾರು ₹ 40 ಕೋಟಿ ವೆಚ್ಚದಲ್ಲಿ ಹೈಟೆಕ್ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಬಾಲಕೃಷ್ಣ ಮುಂದಾಗಿದ್ದಾರೆ. ಆದರೆ ಕೆಲವರು ನ್ಯಾಯಾಲಯದಿಂದ ತಡೆಯಾಜ್ಞೆ ತರುತ್ತಿರುವುದು ಬೇಸರದ ಸಂಗತಿ ಎಂದರು.</p>.<p>ಪಟ್ಟಣದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು ಚರಂಡಿ ಪಕ್ಕದಲ್ಲಿ ಪಾದಚಾರಿ ಮಾರ್ಗ ಅಭಿವೃದ್ಧಿಗಾಗಿ ರಸ್ತೆಯ ಎರಡೂ ಬದಿಯಲ್ಲಿ ತಲಾ 1.5 ಮೀಟರ್ ಜಾಗ ವಶಪಡಿಸಿಕೊಳ್ಳಲಾಗುತ್ತಿದೆ. ಅಂಗಡಿ ಮತ್ತು ಮನೆ ಕಟ್ಟುಕೊಳ್ಳುವವರು ಚರಂಡಿಯಿಂದ ಒಂದುವರೆ ಮೀಟರ್ ದೂರ ಕಟ್ಟಿಕೊಳ್ಳಬೇಕು ಎಂದರು.</p>.<p>ಏ. 26 ರಂದು ನೂತನ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗುವುದು ಎಂದು ತಿಳಿಸಿದರು. ನಾಗರಾಜು, ನರಸಿಂಹಯ್ಯ, ರಾಮಣ್ಣ, ಚಿಕ್ಕಣ್ಣ, ರಾಮಕೃಷ್ಣಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-14-552151413</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>