<p><strong>ಮಾಗಡಿ</strong>: ಪಟ್ಟಣದ ಎಸ್ಬಿಐ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಬರೋಡ, ಕರ್ನಾಟಕ ಬ್ಯಾಂಕ್, ಕಾವೇರಿ ಗ್ರಾಮೀಣ ಬ್ಯಾಂಕ್ಗಳಲ್ಲಿ ಸರ್ಕಾರದ ಗ್ಯಾರಂಟಿಗಳ ಹಣ ಪಡೆಯಲು ಜನಸಾಮಾನ್ಯರಿಂದ ಇಡೀ ದಿನ ನೂಕುನುಗ್ಗಲು ಉಂಟಾಯಿತು. </p>.<p>ಬ್ಯಾಂಕ್ ಸಿಬ್ಬಂದಿ ಕರ್ತವ್ಯ ಮಾಡಲು ಆಗುತ್ತಿಲ್ಲ. ಬ್ಯಾಂಕ್ಗಳಲ್ಲಿ ಆಧಾರ್ ಲಿಂಕ್ ಮಾಡಿಸಲು, ಅನ್ನಭಾಗ್ಯದ ಹಣ ಖಾತೆಗೆ ಬಂದಿದೆಯೇ ಎಂದು ಪರೀಕ್ಷಿಸಲು, ನೂತನ ಅಕೌಂಟ್ ಮಾಡಿಸಲು ಜನ ಮುಗಿಬಿದ್ದರು.</p>.<p>ಬ್ಯಾಂಕ್ನ ಹೊರಗೆ ಕೂಡ ಸರದಿಯಲ್ಲಿ ಮುದುಕರು, ಮಹಿಳೆಯರು ನಿಂತಿದ್ದಾರೆ. ಬ್ಯಾಂಕ್ಗಳಲ್ಲಿ ಸರ್ವರ್ ಸಮಸ್ಯೆ ಸರ್ವೆ ಸಾಮಾನ್ಯವಾಗಿದೆ. ಸರದಿಯಲ್ಲಿ ನಿಂತವರ ನಡುವೆ ಜಗಳ ತಳ್ಳಾಟ ನಡೆದಿದೆ. ಗೃಹಲಕ್ಷ್ಮಿ ಹಣ ಪಡೆಯಲು ನೋಂದಣಿ ಮಾಡಿಸಲು ಇನ್ನೂ ಸಮಯವಿದೆ ಎಂದರೂ ಯಾರೂ ಕೇಳುವ ಸ್ಥಿತಿಯಲ್ಲಿ ಇಲ್ಲ. ಸರ್ಕಾರ ಘೋಷಿಸಿರುವ ಗ್ಯಾರಂಟಿ ಅನುಷ್ಠಾನಗೊಳಿಸುವಲ್ಲಿಹೈರಾಣಾಗಿದ್ದೇವೆ ಎಂದು ಬ್ಯಾಂಕ್ಗಳ ಸಿಬ್ಬಂದಿ ಅಳಲು ತೋಡಿಕೊಂಡರು.</p>.<p>ವೃದ್ಧರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಕೌಂಟರ್ ತೆರೆದು ನೋಂದಣಿ ಮಾಡಿಸಬೇಕು ಎಂದು ಜಯಮ್ಮ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ</strong>: ಪಟ್ಟಣದ ಎಸ್ಬಿಐ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಬರೋಡ, ಕರ್ನಾಟಕ ಬ್ಯಾಂಕ್, ಕಾವೇರಿ ಗ್ರಾಮೀಣ ಬ್ಯಾಂಕ್ಗಳಲ್ಲಿ ಸರ್ಕಾರದ ಗ್ಯಾರಂಟಿಗಳ ಹಣ ಪಡೆಯಲು ಜನಸಾಮಾನ್ಯರಿಂದ ಇಡೀ ದಿನ ನೂಕುನುಗ್ಗಲು ಉಂಟಾಯಿತು. </p>.<p>ಬ್ಯಾಂಕ್ ಸಿಬ್ಬಂದಿ ಕರ್ತವ್ಯ ಮಾಡಲು ಆಗುತ್ತಿಲ್ಲ. ಬ್ಯಾಂಕ್ಗಳಲ್ಲಿ ಆಧಾರ್ ಲಿಂಕ್ ಮಾಡಿಸಲು, ಅನ್ನಭಾಗ್ಯದ ಹಣ ಖಾತೆಗೆ ಬಂದಿದೆಯೇ ಎಂದು ಪರೀಕ್ಷಿಸಲು, ನೂತನ ಅಕೌಂಟ್ ಮಾಡಿಸಲು ಜನ ಮುಗಿಬಿದ್ದರು.</p>.<p>ಬ್ಯಾಂಕ್ನ ಹೊರಗೆ ಕೂಡ ಸರದಿಯಲ್ಲಿ ಮುದುಕರು, ಮಹಿಳೆಯರು ನಿಂತಿದ್ದಾರೆ. ಬ್ಯಾಂಕ್ಗಳಲ್ಲಿ ಸರ್ವರ್ ಸಮಸ್ಯೆ ಸರ್ವೆ ಸಾಮಾನ್ಯವಾಗಿದೆ. ಸರದಿಯಲ್ಲಿ ನಿಂತವರ ನಡುವೆ ಜಗಳ ತಳ್ಳಾಟ ನಡೆದಿದೆ. ಗೃಹಲಕ್ಷ್ಮಿ ಹಣ ಪಡೆಯಲು ನೋಂದಣಿ ಮಾಡಿಸಲು ಇನ್ನೂ ಸಮಯವಿದೆ ಎಂದರೂ ಯಾರೂ ಕೇಳುವ ಸ್ಥಿತಿಯಲ್ಲಿ ಇಲ್ಲ. ಸರ್ಕಾರ ಘೋಷಿಸಿರುವ ಗ್ಯಾರಂಟಿ ಅನುಷ್ಠಾನಗೊಳಿಸುವಲ್ಲಿಹೈರಾಣಾಗಿದ್ದೇವೆ ಎಂದು ಬ್ಯಾಂಕ್ಗಳ ಸಿಬ್ಬಂದಿ ಅಳಲು ತೋಡಿಕೊಂಡರು.</p>.<p>ವೃದ್ಧರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಕೌಂಟರ್ ತೆರೆದು ನೋಂದಣಿ ಮಾಡಿಸಬೇಕು ಎಂದು ಜಯಮ್ಮ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>