<p><strong>ಕುದೂರು (ಮಾಗಡಿ):</strong> ತಾಲ್ಲೂಕಿನ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ಶುಕ್ರವಾರ ಮಧ್ಯಾಹ್ನ ಬೇಕರಿ ಬಳಿ ನಿಂತಿದ್ದ ಮಹಿಳೆಯೊಬ್ಬರ ಕತ್ತಿನಲ್ಲಿದ್ದ ಚಿನ್ನದ ಸರಗಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಕಳ್ಳರನ್ನು, ಕೃತ್ಯ ನಡೆದ 24 ತಾಸಿನಲ್ಲೇ ಶನಿವಾರ ಕುದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ತುರುವೆಕೆರೆ ತಾಲ್ಲೂಕಿನ ಮೈಸಂದ್ರದ ಮುತ್ತುರಾಜು (26) ಮತ್ತು ಮಧುಗಿರಿ ತಾಲ್ಲೂಕಿನ ಕರಡಿಪುರದ ಶ್ರೀನಿವಾಸ್ (38) ಬಂಧಿತರಾಗಿದ್ದು, 41 ಗ್ರಾಂ ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಿಬ್ಬರು ಬೆಂಗಳೂರಿನ ಟಿ. ದಾಸರಹಳ್ಳಿಯಲ್ಲಿ ವಾಸವಾಗಿದ್ದರು. </p>.<p>ಆರೋಪಿಗಳು ಶುಕ್ರವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಗುಡೇಮಾರನಹಳ್ಳಿಯ ಅನ್ನಪೂರ್ಣೇಶ್ವರಿ ಬೇಕರಿಗೆ ಬೈಕ್ನಲ್ಲಿ ಬಂದು ಜ್ಯೂಸ್ ಕುಡಿಯುತ್ತಾ ನಿಂತಿದ್ದರು. ಇದೇ ಸಂದರ್ಭದಲ್ಲಿ ನೆಲಮಂಗಲಕ್ಕೆ ಹೊರಟಿದ್ದ ಅಂಬಿಕಾ ಎಂಬುವರು ಸಹ ಬೇಕರಿ ಬಳಿ ಬಂದು ನಿಂತಿದ್ದರು. ಅವರ ಕತ್ತಿನಲ್ಲಿದ್ದ ಚಿನ್ನದ ಸರ ಗಮನಿಸಿದ ಆರೋಪಿಗಳು ಕ್ಷಣಾರ್ಧದಲ್ಲೇ ಕದಿಯಲು ಯೋಜನೆ ರೂಪಿಸಿದರು ಎಂದು ಕುದೂರು ಠಾಣೆ ಪೊಲೀಸರು ತಿಳಿಸಿದರು.</p>.<p>ಒಬ್ಬ ಆರೋಪಿ ಬೈಕ್ ಏರಿ ಸ್ಟಾರ್ಟ್ ಮಾಡಿ ಪರಾರಿಯಾಗಲು ಸನ್ನದ್ದ ಸ್ಥಿತಿಯಲ್ಲಿದ್ದ. ಮತ್ತೊಬ್ಬ ಆರೋಪಿ ಮಹಿಳೆ ಬಳಿಗೆ ಹೋಗಿ ಒಮ್ಮೆಲೆ ಕುತ್ತಿಗೆಗೆ ಕೈ ಹಾಕಿ ಸರ ಕಸಿದುಕೊಂಡ. ಆ ರಭಸಕ್ಕೆ ಮಹಿಳೆ ನೆಲಕ್ಕೆ ಕುಸಿದು ಬಿದ್ದರು. ಮಹಿಳೆ ಮೇಲಕ್ಕೇದ್ದು ನೆರವಿಗೆ ಕೂಗಿಕೊಂಡು, ಅಕ್ಕಪಕ್ಕದವರು ಧಾವಿಸುವಷ್ಟರಲ್ಲಿ ಆರೋಪಿಗಳಿಬ್ಬರು ಬೈಕ್ನಲ್ಲಿ ಪರಾರಿಯಾಗಿದ್ದರು ಎಂದು ಪೊಲೀಸರು ಹೇಳಿದರು.</p>.<p><span class="bold"><strong>ವಿಡಿಯೊ ವೈರಲ್: </strong></span>ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದ ಸರಗಳ್ಳತನದ ಕೃತ್ಯದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ವಿಷಯ ತಿಳಿದು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಪೊಲೀಸರು, ಅಂಬಿಕಾರ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡರು. ಆರೋಪಿಗಳ ಬಂಧನಕ್ಕೆ ವಿಶೇಷ ಕಾರ್ಯಾಚರಣೆ ಕೈಗೊಂಡರು.</p>.<p>ಕೃತ್ಯದ ಬಳಿಕ ಬೆಂಗಳೂರಿನ ಟಿ. ದಾಸರಹಳ್ಳಿಗೆ ಬಂದಿದ್ದ ಆರೋಪಿಗಳನ್ನು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಯ ಸುಳಿವು ಸೇರಿದಂತೆ ಇತರ ಖಚಿತ ಮಾಹಿತಿ ಮೇರೆಗೆ ಇಬ್ಬರನ್ನು ಬಂಧಿಸಲಾಯಿತು. ಆರೋಪಿಗಳು ಬೇರೆಡೆ ನಡೆದಿರುವ ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.</p>.<p>ಸರಗಳ್ಳತನದ ಆರೋಪಿಗಳನ್ನು ಘಟನೆ ನಡೆದ 24 ಗಂಟೆಯೊಳಗೆ ಬಂಧಿಸಿದ ಕುದೂರು ಠಾಣೆ ಪೊಲೀಸರ ಕಾರ್ಯವೈಖರಿಗೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುದೂರು (ಮಾಗಡಿ):</strong> ತಾಲ್ಲೂಕಿನ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ಶುಕ್ರವಾರ ಮಧ್ಯಾಹ್ನ ಬೇಕರಿ ಬಳಿ ನಿಂತಿದ್ದ ಮಹಿಳೆಯೊಬ್ಬರ ಕತ್ತಿನಲ್ಲಿದ್ದ ಚಿನ್ನದ ಸರಗಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಕಳ್ಳರನ್ನು, ಕೃತ್ಯ ನಡೆದ 24 ತಾಸಿನಲ್ಲೇ ಶನಿವಾರ ಕುದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ತುರುವೆಕೆರೆ ತಾಲ್ಲೂಕಿನ ಮೈಸಂದ್ರದ ಮುತ್ತುರಾಜು (26) ಮತ್ತು ಮಧುಗಿರಿ ತಾಲ್ಲೂಕಿನ ಕರಡಿಪುರದ ಶ್ರೀನಿವಾಸ್ (38) ಬಂಧಿತರಾಗಿದ್ದು, 41 ಗ್ರಾಂ ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಿಬ್ಬರು ಬೆಂಗಳೂರಿನ ಟಿ. ದಾಸರಹಳ್ಳಿಯಲ್ಲಿ ವಾಸವಾಗಿದ್ದರು. </p>.<p>ಆರೋಪಿಗಳು ಶುಕ್ರವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಗುಡೇಮಾರನಹಳ್ಳಿಯ ಅನ್ನಪೂರ್ಣೇಶ್ವರಿ ಬೇಕರಿಗೆ ಬೈಕ್ನಲ್ಲಿ ಬಂದು ಜ್ಯೂಸ್ ಕುಡಿಯುತ್ತಾ ನಿಂತಿದ್ದರು. ಇದೇ ಸಂದರ್ಭದಲ್ಲಿ ನೆಲಮಂಗಲಕ್ಕೆ ಹೊರಟಿದ್ದ ಅಂಬಿಕಾ ಎಂಬುವರು ಸಹ ಬೇಕರಿ ಬಳಿ ಬಂದು ನಿಂತಿದ್ದರು. ಅವರ ಕತ್ತಿನಲ್ಲಿದ್ದ ಚಿನ್ನದ ಸರ ಗಮನಿಸಿದ ಆರೋಪಿಗಳು ಕ್ಷಣಾರ್ಧದಲ್ಲೇ ಕದಿಯಲು ಯೋಜನೆ ರೂಪಿಸಿದರು ಎಂದು ಕುದೂರು ಠಾಣೆ ಪೊಲೀಸರು ತಿಳಿಸಿದರು.</p>.<p>ಒಬ್ಬ ಆರೋಪಿ ಬೈಕ್ ಏರಿ ಸ್ಟಾರ್ಟ್ ಮಾಡಿ ಪರಾರಿಯಾಗಲು ಸನ್ನದ್ದ ಸ್ಥಿತಿಯಲ್ಲಿದ್ದ. ಮತ್ತೊಬ್ಬ ಆರೋಪಿ ಮಹಿಳೆ ಬಳಿಗೆ ಹೋಗಿ ಒಮ್ಮೆಲೆ ಕುತ್ತಿಗೆಗೆ ಕೈ ಹಾಕಿ ಸರ ಕಸಿದುಕೊಂಡ. ಆ ರಭಸಕ್ಕೆ ಮಹಿಳೆ ನೆಲಕ್ಕೆ ಕುಸಿದು ಬಿದ್ದರು. ಮಹಿಳೆ ಮೇಲಕ್ಕೇದ್ದು ನೆರವಿಗೆ ಕೂಗಿಕೊಂಡು, ಅಕ್ಕಪಕ್ಕದವರು ಧಾವಿಸುವಷ್ಟರಲ್ಲಿ ಆರೋಪಿಗಳಿಬ್ಬರು ಬೈಕ್ನಲ್ಲಿ ಪರಾರಿಯಾಗಿದ್ದರು ಎಂದು ಪೊಲೀಸರು ಹೇಳಿದರು.</p>.<p><span class="bold"><strong>ವಿಡಿಯೊ ವೈರಲ್: </strong></span>ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದ ಸರಗಳ್ಳತನದ ಕೃತ್ಯದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ವಿಷಯ ತಿಳಿದು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಪೊಲೀಸರು, ಅಂಬಿಕಾರ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡರು. ಆರೋಪಿಗಳ ಬಂಧನಕ್ಕೆ ವಿಶೇಷ ಕಾರ್ಯಾಚರಣೆ ಕೈಗೊಂಡರು.</p>.<p>ಕೃತ್ಯದ ಬಳಿಕ ಬೆಂಗಳೂರಿನ ಟಿ. ದಾಸರಹಳ್ಳಿಗೆ ಬಂದಿದ್ದ ಆರೋಪಿಗಳನ್ನು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಯ ಸುಳಿವು ಸೇರಿದಂತೆ ಇತರ ಖಚಿತ ಮಾಹಿತಿ ಮೇರೆಗೆ ಇಬ್ಬರನ್ನು ಬಂಧಿಸಲಾಯಿತು. ಆರೋಪಿಗಳು ಬೇರೆಡೆ ನಡೆದಿರುವ ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.</p>.<p>ಸರಗಳ್ಳತನದ ಆರೋಪಿಗಳನ್ನು ಘಟನೆ ನಡೆದ 24 ಗಂಟೆಯೊಳಗೆ ಬಂಧಿಸಿದ ಕುದೂರು ಠಾಣೆ ಪೊಲೀಸರ ಕಾರ್ಯವೈಖರಿಗೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>