<p><strong>ಮಾಗಡಿ</strong>: ತಾಲ್ಲೂಕಿನಲ್ಲಿ ಕಾಯಿ ಬಿಡುವ ಹಂತದಲ್ಲಿರುವ ಮಾವಿನ ಕಾಯಿ ಗೊಂಚಲಿಗೆ ಬೂದಿರೋಗ ಹಾಗೂ ಜಿಗಿಹುಳು ಭಾದೆ ಶುರುವಾಗಿದೆ. ಥ್ರಿಪ್ಸ್ ಕೀಟಗಳಿಂದ ಮಾವಿನ ಪೀಚುಗಳು ಉದುರಲು ಶುರುವಾಗಿವೆ.</p>.<p>ಚಂದುರಾಯನಹಳ್ಳಿ ಕೆ.ವಿ.ಕೆ ವಿಜ್ಞಾನಿಗಳು ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ತಾಂತ್ರಿಕ ಸಮಿತಿ ತಾಲ್ಲೂಕಿನ ವಿವಿಧ ತೋಟಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. </p>.<p>ಶೀಘ್ರ ಮತ್ತು ಪರಿಣಾಮಕಾರಿ ಸಸ್ಯ ಸಂರಕ್ಷಣಾ ಕ್ರಮ ಕೈಗೊಳ್ಳದಿದ್ದರೆ ಹಾನಿ ಪ್ರಮಾಣ ಹೆಚ್ಚಾಗುವ ಲಕ್ಷಣಗಳಿವೆ ಎಂದು ಕೃಷಿ ವಿಜ್ಞಾನಿಗಳು ತಿಳಿಸಿದ್ದಾರೆ.</p>.<p>ಶಿಲೀಂಧ್ರ ರೋಗ, ಜಿಗಿ ಹುಳು, ಮತ್ತು ಥ್ರಿಪ್ಸ್ ಕೀಟ ಸಾಕಷ್ಟು ಸಂಖ್ಯೆಯಲ್ಲಿ ಕಾಣಬರುತ್ತಿದೆ. ಪ್ರಸ್ತುತ ಈ ಕೀಟ/ರೋಗಗಳಿಗೆ ಅನುಕೂಲಕರ ವಾತಾವರಣವಿದ್ದು, ಇದನ್ನು ನಿಯಂತ್ರಿಸುವುದು ಅಗತ್ಯವಿರುತ್ತದೆ. ಸಸ್ಯ ಸಂರಕ್ಷಣಾ ಕ್ರಮ ಕೈಗೊಳ್ಳಲು ತಾಂತ್ರಿಕ ಸಮಿತಿ ಸೂಚಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ</strong>: ತಾಲ್ಲೂಕಿನಲ್ಲಿ ಕಾಯಿ ಬಿಡುವ ಹಂತದಲ್ಲಿರುವ ಮಾವಿನ ಕಾಯಿ ಗೊಂಚಲಿಗೆ ಬೂದಿರೋಗ ಹಾಗೂ ಜಿಗಿಹುಳು ಭಾದೆ ಶುರುವಾಗಿದೆ. ಥ್ರಿಪ್ಸ್ ಕೀಟಗಳಿಂದ ಮಾವಿನ ಪೀಚುಗಳು ಉದುರಲು ಶುರುವಾಗಿವೆ.</p>.<p>ಚಂದುರಾಯನಹಳ್ಳಿ ಕೆ.ವಿ.ಕೆ ವಿಜ್ಞಾನಿಗಳು ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ತಾಂತ್ರಿಕ ಸಮಿತಿ ತಾಲ್ಲೂಕಿನ ವಿವಿಧ ತೋಟಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. </p>.<p>ಶೀಘ್ರ ಮತ್ತು ಪರಿಣಾಮಕಾರಿ ಸಸ್ಯ ಸಂರಕ್ಷಣಾ ಕ್ರಮ ಕೈಗೊಳ್ಳದಿದ್ದರೆ ಹಾನಿ ಪ್ರಮಾಣ ಹೆಚ್ಚಾಗುವ ಲಕ್ಷಣಗಳಿವೆ ಎಂದು ಕೃಷಿ ವಿಜ್ಞಾನಿಗಳು ತಿಳಿಸಿದ್ದಾರೆ.</p>.<p>ಶಿಲೀಂಧ್ರ ರೋಗ, ಜಿಗಿ ಹುಳು, ಮತ್ತು ಥ್ರಿಪ್ಸ್ ಕೀಟ ಸಾಕಷ್ಟು ಸಂಖ್ಯೆಯಲ್ಲಿ ಕಾಣಬರುತ್ತಿದೆ. ಪ್ರಸ್ತುತ ಈ ಕೀಟ/ರೋಗಗಳಿಗೆ ಅನುಕೂಲಕರ ವಾತಾವರಣವಿದ್ದು, ಇದನ್ನು ನಿಯಂತ್ರಿಸುವುದು ಅಗತ್ಯವಿರುತ್ತದೆ. ಸಸ್ಯ ಸಂರಕ್ಷಣಾ ಕ್ರಮ ಕೈಗೊಳ್ಳಲು ತಾಂತ್ರಿಕ ಸಮಿತಿ ಸೂಚಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>