<p><strong>ಮಾಗಡಿ</strong>: ‘ಗುಡ್ ಮಾರ್ನಿಂಗ್ ಮಾಗಡಿ’ ಕಾರ್ಯಕ್ರಮದ ಅಡಿ ಬುಧವಾರ ಬೆಳಗ್ಗೆ ಶಾಸಕ ಎಚ್.ಸಿ.ಬಾಲಕೃಷ್ಣ ಅಧಿಕಾರಿಗಳೊಂದಿಗೆ ವಿವಿಧ ವಾರ್ಡ್ಗಳಿಗೆ ಭೇಟಿ ನೀಡಿ ಜನರಿಂದ ಮಾಹಿತಿ ಪಡೆದರು. </p><p>ಪಟ್ಟಣದಲ್ಲಿ ಸ್ವಚ್ಛತೆ, ರಸ್ತೆ ಗುಂಡಿ ಬಗ್ಗೆ ಮಾಧ್ಯಮ ಹಾಗೂ ಜಾಲತಾಣಗಳಲ್ಲಿ ಬಿತ್ತರವಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ಜತೆ ವಾರ್ಡ್ಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆ ಆಲಿಸಿ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದರು.</p><p>ಪಟ್ಟಣದ ಸಾರ್ವಜನಿಕ ಸ್ಥಳಗಳಲ್ಲಿ ಜನರು ಕಸ ಎಸೆಯದೆ ಸ್ವಚ್ಛತೆಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು. ನಂತರ ಪಟ್ಟಣದ ಇಂದಿರಾ ಕ್ಯಾಂಟೀನ್ಗೆ ತೆರಳಿ ತಿಂಡಿ ಸವಿದರು.</p><p>ಮುಂದಿನ ತಿಂಗಳು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಮಾಗಡಿಗೆ ಕರೆಸಿ ₹50 ಕೋಟಿ ವೆಚ್ಚದಲ್ಲಿ ಕೋಟೆ ಅಭಿವೃದ್ಧಿ, ₹10 ಕೋಟಿ ವೆಚ್ಚದಲ್ಲಿ ಗೌರಮ್ಮನಕೆರೆ ಅಭಿವೃದ್ಧಿ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು.ಮಾಜಿ ಸಂಸದ ಡಿ.ಕೆ.ಸುರೇಶ್ ₹20 ಕೋಟಿ ಅನುದಾನದಲ್ಲಿ ಎನ್ಇಎಸ್ ವೃತ್ತದಿಂದ ಕೆಂಪೇಗೌಡ ವೃತ್ತದವರೆಗೆ, ಬೈಚಾಪುರ ಸರ್ಕಲ್ನಿಂದ ಹೊಂಬಾಳಮ್ಮ ಪೇಟೆ ಸರ್ಕಲ್ವರೆಗೆ ಎರಡು ಪಥದ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.</p><p>ತಹಶೀಲ್ದಾರ್ ಶರತ್ ಕುಮಾರ್, ಪುರಸಭೆ ಮುಖ್ಯಾಧಿಕಾರಿ ಶಿವರುದ್ರಯ್ಯ, ತಾಲ್ಲೂಕು ವೈದ್ಯಾಧಿಕಾರಿ ಚಂದ್ರಶೇಖರ್ ಇದ್ದರು.</p><p><strong>ತಿಂಡಿ ಗುಣಮಟ್ಟ ಪರಿಶೀಲನೆ</strong></p><p>ಮಂಗಳವಾರ ಸಂಜೆ ಪುರಸಭೆ ಅಧಿಕಾರಿಗಳ ಜತೆ ಇಂದಿರಾ ಕ್ಯಾಂಟೀನ್ಗೆ ತೆರಳಿ ಪರಿಶೀಲನೆ ನಡೆಸಿದರು. ಕ್ಯಾಂಟಿನ್ ನಿರ್ವಹಣೆ, ಆಹಾರದ ಗುಣಮಟ್ಟ, ವೇಳಾಪಟ್ಟಿ ಕುರಿತು ಮಾಹಿತಿ ಪಡೆದರು. ಕ್ಯಾಂಟಿನ್ ಕಟ್ಟಡ ದುರಸ್ತಿಗೆ ಅನುದಾನ ನೀಡಲಾಗುವುದು. ಗುಣಮಟ್ಟದ ತಿಂಡಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.</p><p>ನಂತರ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆ ಆವರಣದಲ್ಲಿ ಹೋಟೆಲ್ ಆರಂಭಿಸುವ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿದರು. ಶೀಘ್ರ ಯೋಜನೆ ರೂಪಿಸಿ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೋಟೆಲ್ ಆರಂಭಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ</strong>: ‘ಗುಡ್ ಮಾರ್ನಿಂಗ್ ಮಾಗಡಿ’ ಕಾರ್ಯಕ್ರಮದ ಅಡಿ ಬುಧವಾರ ಬೆಳಗ್ಗೆ ಶಾಸಕ ಎಚ್.ಸಿ.ಬಾಲಕೃಷ್ಣ ಅಧಿಕಾರಿಗಳೊಂದಿಗೆ ವಿವಿಧ ವಾರ್ಡ್ಗಳಿಗೆ ಭೇಟಿ ನೀಡಿ ಜನರಿಂದ ಮಾಹಿತಿ ಪಡೆದರು. </p><p>ಪಟ್ಟಣದಲ್ಲಿ ಸ್ವಚ್ಛತೆ, ರಸ್ತೆ ಗುಂಡಿ ಬಗ್ಗೆ ಮಾಧ್ಯಮ ಹಾಗೂ ಜಾಲತಾಣಗಳಲ್ಲಿ ಬಿತ್ತರವಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ಜತೆ ವಾರ್ಡ್ಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆ ಆಲಿಸಿ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದರು.</p><p>ಪಟ್ಟಣದ ಸಾರ್ವಜನಿಕ ಸ್ಥಳಗಳಲ್ಲಿ ಜನರು ಕಸ ಎಸೆಯದೆ ಸ್ವಚ್ಛತೆಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು. ನಂತರ ಪಟ್ಟಣದ ಇಂದಿರಾ ಕ್ಯಾಂಟೀನ್ಗೆ ತೆರಳಿ ತಿಂಡಿ ಸವಿದರು.</p><p>ಮುಂದಿನ ತಿಂಗಳು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಮಾಗಡಿಗೆ ಕರೆಸಿ ₹50 ಕೋಟಿ ವೆಚ್ಚದಲ್ಲಿ ಕೋಟೆ ಅಭಿವೃದ್ಧಿ, ₹10 ಕೋಟಿ ವೆಚ್ಚದಲ್ಲಿ ಗೌರಮ್ಮನಕೆರೆ ಅಭಿವೃದ್ಧಿ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು.ಮಾಜಿ ಸಂಸದ ಡಿ.ಕೆ.ಸುರೇಶ್ ₹20 ಕೋಟಿ ಅನುದಾನದಲ್ಲಿ ಎನ್ಇಎಸ್ ವೃತ್ತದಿಂದ ಕೆಂಪೇಗೌಡ ವೃತ್ತದವರೆಗೆ, ಬೈಚಾಪುರ ಸರ್ಕಲ್ನಿಂದ ಹೊಂಬಾಳಮ್ಮ ಪೇಟೆ ಸರ್ಕಲ್ವರೆಗೆ ಎರಡು ಪಥದ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.</p><p>ತಹಶೀಲ್ದಾರ್ ಶರತ್ ಕುಮಾರ್, ಪುರಸಭೆ ಮುಖ್ಯಾಧಿಕಾರಿ ಶಿವರುದ್ರಯ್ಯ, ತಾಲ್ಲೂಕು ವೈದ್ಯಾಧಿಕಾರಿ ಚಂದ್ರಶೇಖರ್ ಇದ್ದರು.</p><p><strong>ತಿಂಡಿ ಗುಣಮಟ್ಟ ಪರಿಶೀಲನೆ</strong></p><p>ಮಂಗಳವಾರ ಸಂಜೆ ಪುರಸಭೆ ಅಧಿಕಾರಿಗಳ ಜತೆ ಇಂದಿರಾ ಕ್ಯಾಂಟೀನ್ಗೆ ತೆರಳಿ ಪರಿಶೀಲನೆ ನಡೆಸಿದರು. ಕ್ಯಾಂಟಿನ್ ನಿರ್ವಹಣೆ, ಆಹಾರದ ಗುಣಮಟ್ಟ, ವೇಳಾಪಟ್ಟಿ ಕುರಿತು ಮಾಹಿತಿ ಪಡೆದರು. ಕ್ಯಾಂಟಿನ್ ಕಟ್ಟಡ ದುರಸ್ತಿಗೆ ಅನುದಾನ ನೀಡಲಾಗುವುದು. ಗುಣಮಟ್ಟದ ತಿಂಡಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.</p><p>ನಂತರ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆ ಆವರಣದಲ್ಲಿ ಹೋಟೆಲ್ ಆರಂಭಿಸುವ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿದರು. ಶೀಘ್ರ ಯೋಜನೆ ರೂಪಿಸಿ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೋಟೆಲ್ ಆರಂಭಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>