<p><strong>ಮಾಗಡಿ:</strong> ರೋಗಿಯನ್ನು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಕರೆದುಕೊಂಡು ಹೋಗುವವನೇ ನಿಜವಾದ ರಕ್ಷಕ ಎಂದು ಸರ್ಕಾರಿ ಆಸ್ಪತ್ರೆ ವೈದ್ಯ ಡಾ.ಫಾರೂಕ್ ತಿಳಿಸಿದರು.</p>.<p>ಪಟ್ಟಣದ ರೋಟರಿ ಭವನದಲ್ಲಿ ರಾಷ್ಟ್ರೀಯ ವೈದ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿದಾಗ ಹೆಚ್ಚಿನ ರೋಗಿಗಳಿಗೆ ತಾಲೂಕು ಆಸ್ಪತ್ರೆಗಳಲ್ಲಿ ಎಲ್ಲಾ ಚಿಕಿತ್ಸೆ ಕೊಡಿಸಬಹುದು. ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆತಾಗ ಮಾತ್ರ ಅಮೂಲ್ಯವಾದ ಪ್ರಾಣ ಉಳಿಸಲು ಸಾಧ್ಯ ಎಂದು ತಿಳಿಸಿದರು.</p>.<p>ರೋಟರಿ ಮಾಗಡಿ ಸೆಂಟ್ರಲ್ ಅಧ್ಯಕ್ಷ ಡಾ.ಮಂಜುನಾಥ್ ಬೆಟಗೇರಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ವೈದ್ಯರು ಅನೇಕ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಅವಘಡದ ಪರಿಸ್ಥಿತಿಗಳಲ್ಲಿ ಕಡಿಮೆ ಮೂಲಸೌಕರ್ಯದಲ್ಲೂ ಶ್ರದ್ಧೆಯಿಂದ ಸೇವೆ ನೀಡುತ್ತಿದ್ದಾರೆ ಎಂದರು.</p>.<p>ರಾಷ್ಟ್ರೀಯ ವೈದ್ಯ ದಿನಾಚರಣೆ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಡಾ.ಎಚ್.ಯಶ್ವಂತ್, ಡಾ.ಪಿ.ಬಿ.ಮೊಹಮ್ಮದ್ ಫಾರೂಕ್ ಮತ್ತು ಡಾ.ಮಂಜುಳಾ ಅವರನ್ನು ಸನ್ಮಾನಿಸಿ, ಸ್ಮರಣಿಕೆ ನೀಡಲಾಯಿತು.</p>.<p>ರೋಟರಿ ಕಾರ್ಯದರ್ಶಿ ವಿನೋದ್, ಲೋಕೇಶ್, ಮಲ್ಲಿನಾಥ್, ಲ್ಯಾಬ್ ಲೋಕೇಶ್, ಪ್ರಭಾಕರ್ ಎಲ್, ನಾಗೇಶ್, ಶಂಕರ, ಕುಮಾರ್, ಗಂಗರಾಜು, ಎಲ್.ಎನ್.ಆರ್.ಮೂರ್ತಿ, ವೇಣು, ಸುಲ್ತಾನ್ ಬಾಬ, ಗಣೇಶ್, ದಕ್ಷಿಣಮೂರ್ತಿ, ರೂಪ್ ಲಾಲ್, ಉಮೇಶ್, ಮನು ಸೇರಿದಂತೆ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ:</strong> ರೋಗಿಯನ್ನು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಕರೆದುಕೊಂಡು ಹೋಗುವವನೇ ನಿಜವಾದ ರಕ್ಷಕ ಎಂದು ಸರ್ಕಾರಿ ಆಸ್ಪತ್ರೆ ವೈದ್ಯ ಡಾ.ಫಾರೂಕ್ ತಿಳಿಸಿದರು.</p>.<p>ಪಟ್ಟಣದ ರೋಟರಿ ಭವನದಲ್ಲಿ ರಾಷ್ಟ್ರೀಯ ವೈದ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿದಾಗ ಹೆಚ್ಚಿನ ರೋಗಿಗಳಿಗೆ ತಾಲೂಕು ಆಸ್ಪತ್ರೆಗಳಲ್ಲಿ ಎಲ್ಲಾ ಚಿಕಿತ್ಸೆ ಕೊಡಿಸಬಹುದು. ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆತಾಗ ಮಾತ್ರ ಅಮೂಲ್ಯವಾದ ಪ್ರಾಣ ಉಳಿಸಲು ಸಾಧ್ಯ ಎಂದು ತಿಳಿಸಿದರು.</p>.<p>ರೋಟರಿ ಮಾಗಡಿ ಸೆಂಟ್ರಲ್ ಅಧ್ಯಕ್ಷ ಡಾ.ಮಂಜುನಾಥ್ ಬೆಟಗೇರಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ವೈದ್ಯರು ಅನೇಕ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಅವಘಡದ ಪರಿಸ್ಥಿತಿಗಳಲ್ಲಿ ಕಡಿಮೆ ಮೂಲಸೌಕರ್ಯದಲ್ಲೂ ಶ್ರದ್ಧೆಯಿಂದ ಸೇವೆ ನೀಡುತ್ತಿದ್ದಾರೆ ಎಂದರು.</p>.<p>ರಾಷ್ಟ್ರೀಯ ವೈದ್ಯ ದಿನಾಚರಣೆ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಡಾ.ಎಚ್.ಯಶ್ವಂತ್, ಡಾ.ಪಿ.ಬಿ.ಮೊಹಮ್ಮದ್ ಫಾರೂಕ್ ಮತ್ತು ಡಾ.ಮಂಜುಳಾ ಅವರನ್ನು ಸನ್ಮಾನಿಸಿ, ಸ್ಮರಣಿಕೆ ನೀಡಲಾಯಿತು.</p>.<p>ರೋಟರಿ ಕಾರ್ಯದರ್ಶಿ ವಿನೋದ್, ಲೋಕೇಶ್, ಮಲ್ಲಿನಾಥ್, ಲ್ಯಾಬ್ ಲೋಕೇಶ್, ಪ್ರಭಾಕರ್ ಎಲ್, ನಾಗೇಶ್, ಶಂಕರ, ಕುಮಾರ್, ಗಂಗರಾಜು, ಎಲ್.ಎನ್.ಆರ್.ಮೂರ್ತಿ, ವೇಣು, ಸುಲ್ತಾನ್ ಬಾಬ, ಗಣೇಶ್, ದಕ್ಷಿಣಮೂರ್ತಿ, ರೂಪ್ ಲಾಲ್, ಉಮೇಶ್, ಮನು ಸೇರಿದಂತೆ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>