<p><strong>ಮಾಗಡಿ</strong>: ತಾಲ್ಲೂಕಿನಲ್ಲಿ ನಿರಂತರ ವಿದ್ಯುತ್ ಕಡಿತವಾಗುತ್ತಿದ್ದು ಇದರಿಂದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಾಲ್ಲೂಕು ರೈತ ಸಂಘದ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.</p>.<p>ತಾಲ್ಲೂಕು ರೈತ ಸಂಘದ ಅಧ್ಯಕ್ಷ ಲೋಕೇಶ್ ಮಾತನಾಡಿ, ವಿದ್ಯುತ್ ತೊಂದರೆಯ ಬಗ್ಗೆ ಬೆಸ್ಕಾಂ ಅಧಿಕಾರಿಗಳಿಗೆ ತಿಳಿಸಲಾಗಿದೆ. ಆದರೂ ಅಧಿಕಾರಿಗಳು ಈ ವಿಷಯದ ಕುರಿತು ಮಾತನಾಡಲು ಸಭೆಗೆ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಸರ್ಕಾರ ನೀಡುತ್ತಿರುವ ವಿದ್ಯುತ್ನಲ್ಲಿ ರೈತರಿಗೆ 180 ವೋಲ್ಟೇಜ್ ಮಾತ್ರ ಸಿಗುತ್ತಿದೆ. ಇಷ್ಟು ಕಡಿಮೆ ಪ್ರಮಾಣದ ವಿದ್ಯುತ್ನಿಂದ 800 ಅಡಿ ಕೊಳವೆಬಾವಿಯಿಂದ ನೀರು ತೆಗೆಯಲು ಕಷ್ಟವಾಗುತ್ತಿದೆ. ಪ್ರತಿನಿತ್ಯವೂ ಇದೇ ತೊಂದರೆಯಿಂದಾಗಿ ಮೋಟಾರ್ಗಳು ಹಾಳಾಗುತ್ತಿವೆ. ಇದಕ್ಕೆ ಅಧಿಕಾರಿಗಳೇ ಹೊಣೆ ಎಂದು ದೂರಿದರು.</p>.<p>ಬೆಳಗಿನ ಜಾವ 5ರಿಂದ 6 ಗಂಟೆಯವರೆಗೂ ಹಾಗೂ ಸಂಜೆ 5 ರಿಂದ ರಾತ್ರಿ 11ರವರೆಗೂ ವಿದ್ಯುತ್ ನೀಡಬೇಕೆಂದು ಸೂಚಿಸಲಾಗಿದೆ. ಅಲ್ಲದೇ, ಕೆಇಬಿ ಅಡಿಯಲ್ಲಿ ಬರುವ 15 ಕಿಲೋಮೀಟರ್ ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ಸರಬರಾಜು ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಪ್ರತಿಭಟನೆಯಲ್ಲಿ ರೈತ ಸಂಘದ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ</strong>: ತಾಲ್ಲೂಕಿನಲ್ಲಿ ನಿರಂತರ ವಿದ್ಯುತ್ ಕಡಿತವಾಗುತ್ತಿದ್ದು ಇದರಿಂದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಾಲ್ಲೂಕು ರೈತ ಸಂಘದ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.</p>.<p>ತಾಲ್ಲೂಕು ರೈತ ಸಂಘದ ಅಧ್ಯಕ್ಷ ಲೋಕೇಶ್ ಮಾತನಾಡಿ, ವಿದ್ಯುತ್ ತೊಂದರೆಯ ಬಗ್ಗೆ ಬೆಸ್ಕಾಂ ಅಧಿಕಾರಿಗಳಿಗೆ ತಿಳಿಸಲಾಗಿದೆ. ಆದರೂ ಅಧಿಕಾರಿಗಳು ಈ ವಿಷಯದ ಕುರಿತು ಮಾತನಾಡಲು ಸಭೆಗೆ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಸರ್ಕಾರ ನೀಡುತ್ತಿರುವ ವಿದ್ಯುತ್ನಲ್ಲಿ ರೈತರಿಗೆ 180 ವೋಲ್ಟೇಜ್ ಮಾತ್ರ ಸಿಗುತ್ತಿದೆ. ಇಷ್ಟು ಕಡಿಮೆ ಪ್ರಮಾಣದ ವಿದ್ಯುತ್ನಿಂದ 800 ಅಡಿ ಕೊಳವೆಬಾವಿಯಿಂದ ನೀರು ತೆಗೆಯಲು ಕಷ್ಟವಾಗುತ್ತಿದೆ. ಪ್ರತಿನಿತ್ಯವೂ ಇದೇ ತೊಂದರೆಯಿಂದಾಗಿ ಮೋಟಾರ್ಗಳು ಹಾಳಾಗುತ್ತಿವೆ. ಇದಕ್ಕೆ ಅಧಿಕಾರಿಗಳೇ ಹೊಣೆ ಎಂದು ದೂರಿದರು.</p>.<p>ಬೆಳಗಿನ ಜಾವ 5ರಿಂದ 6 ಗಂಟೆಯವರೆಗೂ ಹಾಗೂ ಸಂಜೆ 5 ರಿಂದ ರಾತ್ರಿ 11ರವರೆಗೂ ವಿದ್ಯುತ್ ನೀಡಬೇಕೆಂದು ಸೂಚಿಸಲಾಗಿದೆ. ಅಲ್ಲದೇ, ಕೆಇಬಿ ಅಡಿಯಲ್ಲಿ ಬರುವ 15 ಕಿಲೋಮೀಟರ್ ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ಸರಬರಾಜು ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಪ್ರತಿಭಟನೆಯಲ್ಲಿ ರೈತ ಸಂಘದ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>