<p>ಮಾಗಡಿ:ಇಲ್ಲಿನ ನಾಯಕನ ಪಾಳ್ಯಗೇಟ್ ಬಳಿ ಮುತ್ತಯ್ಯಸ್ವಾಮಿ ದೇವಸ್ಥಾನ ಸಮೀಪ ₹ 60 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಎಚ್.ಸಿ.ಬಾಲಕೃಷ್ಣ ಬುಧವಾರ ಭೂಮಿ ಪೂಜೆ ನೆರವೇರಿಸಿದರು.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಭಾಗದ ಬಡವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ. ಶುಭ ಸಮಾರಂಭಗಳನ್ನು ಕಡಿಮೆ ವೆಚ್ಚದಲ್ಲಿ ಮಾಡುವ ನಿಟ್ಟಿನಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್ ನೀಡಿದ ಅನುದಾನ ಅಡಿಯಲ್ಲಿ ಭವನ ನಿರ್ಮಿಸಲಾಗುತ್ತಿದೆ. ನಾಯಕನ ಪಾಳ್ಯಗೇಟ್ ಬಳಿ ಇರುವ ದಳವಾಯಿ ಕೆರೆಗೆ ಅಭಿವೃದ್ಧಿಗೆ ₹ 2ಕೋಟಿ ಅನುದಾನ ನೀಡಲಾಗಿದೆ. ವರ್ಷದ 365 ದಿನವೂ ನೀರು ಉಳಿಯುವ ರೀತಿ ಅಭಿವೃದ್ಧಿ ಮಾಡಲಾಗುತ್ತದೆ ಎಂದು ತಿಳಿಸಿದರು.</p>.<p>ವೀರೇಗೌಡನ ದೊಡ್ಡಿಯಿಂದ ಮಂಚನಬೆಲೆ ವರೆಗೂ ರಸ್ತೆ ಅಭಿವೃದ್ಧಿಗೆ ₹8 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದ್ದು ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ನಾವು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇವೆ ಎಂದರು.</p>.<p>ಹೇಮಾವತಿ ಎಕ್ಸ್ಪ್ರೆಸ್ ಕೆನಾಲ್ ವಿಚಾರವಾಗಿ ಈಗ ಗೆದ್ದಿರುವ ಸಂಸದರು ಆ ಭಾಗದ ಜನಗಳ ಮನವೊಲಿಸಿ ಕಾಮಗಾರಿ ಆರಂಭಿಸಬೇಕು. ಮಾಗಡಿ ತಾಲೂಕಿನಲ್ಲಿ 29 ಸಾವಿರ ಹೆಚ್ಚುವರಿ ಮತಗಳು ಬಿದ್ದಿದ್ದು ಅವರೆಲ್ಲರೂ ಪ್ರತಿಭಟನೆಯಲ್ಲಿ ಭಾಗವಹಿಸಿ ಕೆನಾಲ್ ಮುಂದುವರಿಸಲು ಕ್ರಮ ವಹಿಸಬೇಕು ಎಂದು ಬಾಲಕೃಷ್ಣ ಹೇಳಿದರು.</p>.<p>ಪೂಜಾರಿ ಪಾಳ್ಯ ಕೆ. ಕೃಷ್ಣಮೂರ್ತಿ, ಗ್ರಾ.ಪಂ.ಸದಸ್ಯ ರಂಗನಾಥ್, ಮುಖಂಡರಾದ ಕೃಷ್ಣಪ್ಪ, ಪಂಚಾಕ್ಷರಿ, ಹನುಮಂತರಾಜು, ರಾಮಣ್ಣ ಗುಡ್ಡಹಳ್ಳಿ ರವಿ, ದೊಡ್ಡಿ ವಿಶ್ವನಾಥ್, ರಂಗಸ್ವಾಮಿ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾಗಡಿ:ಇಲ್ಲಿನ ನಾಯಕನ ಪಾಳ್ಯಗೇಟ್ ಬಳಿ ಮುತ್ತಯ್ಯಸ್ವಾಮಿ ದೇವಸ್ಥಾನ ಸಮೀಪ ₹ 60 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಎಚ್.ಸಿ.ಬಾಲಕೃಷ್ಣ ಬುಧವಾರ ಭೂಮಿ ಪೂಜೆ ನೆರವೇರಿಸಿದರು.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಭಾಗದ ಬಡವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ. ಶುಭ ಸಮಾರಂಭಗಳನ್ನು ಕಡಿಮೆ ವೆಚ್ಚದಲ್ಲಿ ಮಾಡುವ ನಿಟ್ಟಿನಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್ ನೀಡಿದ ಅನುದಾನ ಅಡಿಯಲ್ಲಿ ಭವನ ನಿರ್ಮಿಸಲಾಗುತ್ತಿದೆ. ನಾಯಕನ ಪಾಳ್ಯಗೇಟ್ ಬಳಿ ಇರುವ ದಳವಾಯಿ ಕೆರೆಗೆ ಅಭಿವೃದ್ಧಿಗೆ ₹ 2ಕೋಟಿ ಅನುದಾನ ನೀಡಲಾಗಿದೆ. ವರ್ಷದ 365 ದಿನವೂ ನೀರು ಉಳಿಯುವ ರೀತಿ ಅಭಿವೃದ್ಧಿ ಮಾಡಲಾಗುತ್ತದೆ ಎಂದು ತಿಳಿಸಿದರು.</p>.<p>ವೀರೇಗೌಡನ ದೊಡ್ಡಿಯಿಂದ ಮಂಚನಬೆಲೆ ವರೆಗೂ ರಸ್ತೆ ಅಭಿವೃದ್ಧಿಗೆ ₹8 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದ್ದು ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ನಾವು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇವೆ ಎಂದರು.</p>.<p>ಹೇಮಾವತಿ ಎಕ್ಸ್ಪ್ರೆಸ್ ಕೆನಾಲ್ ವಿಚಾರವಾಗಿ ಈಗ ಗೆದ್ದಿರುವ ಸಂಸದರು ಆ ಭಾಗದ ಜನಗಳ ಮನವೊಲಿಸಿ ಕಾಮಗಾರಿ ಆರಂಭಿಸಬೇಕು. ಮಾಗಡಿ ತಾಲೂಕಿನಲ್ಲಿ 29 ಸಾವಿರ ಹೆಚ್ಚುವರಿ ಮತಗಳು ಬಿದ್ದಿದ್ದು ಅವರೆಲ್ಲರೂ ಪ್ರತಿಭಟನೆಯಲ್ಲಿ ಭಾಗವಹಿಸಿ ಕೆನಾಲ್ ಮುಂದುವರಿಸಲು ಕ್ರಮ ವಹಿಸಬೇಕು ಎಂದು ಬಾಲಕೃಷ್ಣ ಹೇಳಿದರು.</p>.<p>ಪೂಜಾರಿ ಪಾಳ್ಯ ಕೆ. ಕೃಷ್ಣಮೂರ್ತಿ, ಗ್ರಾ.ಪಂ.ಸದಸ್ಯ ರಂಗನಾಥ್, ಮುಖಂಡರಾದ ಕೃಷ್ಣಪ್ಪ, ಪಂಚಾಕ್ಷರಿ, ಹನುಮಂತರಾಜು, ರಾಮಣ್ಣ ಗುಡ್ಡಹಳ್ಳಿ ರವಿ, ದೊಡ್ಡಿ ವಿಶ್ವನಾಥ್, ರಂಗಸ್ವಾಮಿ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>