<p><strong>ಮಾಗಡಿ:</strong> ಸಾರ್ವಜನಿಕ ಆಸ್ಪತ್ರೆಯಲ್ಲಿ ಮಂಗಳವಾರ ಶಾಸಕ ಎಚ್.ಸಿ.ಬಾಲಕೃಷ್ಣ ಅಧ್ಯಕ್ಷತೆಯಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆ ನಡೆಯಿತು.</p>.<p>ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಜ್ಞಾನಪ್ರಕಾಶ್ ಮಾತನಾಡಿ, ಆಸ್ಪತ್ರೆಯಲ್ಲಿ ಸರ್ಜನ್ ಮತ್ತು ಮಕ್ಕಳ ತಜ್ಞ ವೈದ್ಯರಿಲ್ಲದೆ ತೊಂದರೆಯಾಗಿದೆ. 27 ‘ಡಿ’ ಗ್ರೂಪ್ ನೌಕರರ ಹುದ್ದೆಗಳು ಖಾಲಿ ಇವೆ. ‘ಸಿ’ ಗ್ರೂಪ್ 6 ಹುದ್ದೆಗಳು ಖಾಲಿ ಇವೆ ಎಂದರು.</p>.<p>ಆಸ್ಪತ್ರೆಯಲ್ಲಿ ಒಳಚರಂಡಿ ಸಮಸ್ಯೆ ತಲೆನೋವಾಗಿದೆ. ಶುದ್ಧ ಕುಡಿಯುವ ನೀರಿನ ಘಟಕವಿಲ್ಲದೆ ರೋಗಿಗಳು ಮತ್ತು ಆಸ್ಪತ್ರೆ ಸಿಬ್ಬಂದಿಗೆ ಕುಡಿಯುವ ನೀರನ ಸಮಸ್ಯೆ ಹೇಳತೀರದಾಗಿದೆ. ಆಸ್ಪತ್ರೆ ಎಕ್ಸರೇ ಘಟಕದಲ್ಲಿ ವಿದ್ಯುತ್ ಸಂಪರ್ಕ ಸರಿಪಡಿಸಬೇಕು ಎಂದು ಮನವಿ ಮಾಡಿದರು.</p>.<p>ಆಢಳಿತಾಧಿಕಾರಿ ಮನವಿ ಆಲಿಸಿದ ಶಾಸಕ ಎಚ್.ಸಿ.ಬಾಲಕೃಷ್ಣ, ಶೀಘ್ರದಲ್ಲಿಯೇ ಶುದ್ಧ ಕುಡಿಯುವ ನೀರು ಒದಗಿಸಿ, ಒಳಚರಂಡಿ ವ್ಯವಸ್ಥೆ ಸರಿಪಡಿಸಿಕೊಡಲಾಗುವುದು. ಖಾಲಿ ಇರುವ ವೈದ್ಯರು ಮತ್ತು ಸಿಬ್ಬಂದಿ ಹುದ್ದೆ ಭರ್ತಿಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು. </p>.<p>ತಾಲ್ಲೂಕು ಪಂಚಾಯಿತಿ ಇಒ ಚಂದ್ರ, ವೈದ್ಯರಾದ ಡಾ.ಆಶಾದೇವಿ, ಡಾ.ಯಶವಂತ್ಕುಮಾರ್, ಡಾ.ಮಂಜುಳಾ, ಡಾ.ನಾಗನಾಥ್, ಡಾ.ಫಾರೂಕ್ ಅಹಮದ್, ಡಾ.ಮುದಾಳೆ, ಡಾ.ಚಂದ್ರಿಕಾ, ಡಾ.ವಿಶ್ವನಾಥ್, ಆಂಜಿನಮ್ಮ, ಫಾರ್ಮಾಸಿಸ್ಟ್ ಗುಣಶೇಖರ್, ನರ್ಸಿಂಗ್ ಸೂಪರಿಂಟೆಂಡೆಟ್ ಪದ್ಮಾ ಹಾಗೂ ಆಸ್ಪತ್ರೆ ಸಿಬ್ಬಂದಿ, ಶುಶ್ರೂಷಕಿಯರು, ಪರೀಕ್ಷಕರು ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ:</strong> ಸಾರ್ವಜನಿಕ ಆಸ್ಪತ್ರೆಯಲ್ಲಿ ಮಂಗಳವಾರ ಶಾಸಕ ಎಚ್.ಸಿ.ಬಾಲಕೃಷ್ಣ ಅಧ್ಯಕ್ಷತೆಯಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆ ನಡೆಯಿತು.</p>.<p>ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಜ್ಞಾನಪ್ರಕಾಶ್ ಮಾತನಾಡಿ, ಆಸ್ಪತ್ರೆಯಲ್ಲಿ ಸರ್ಜನ್ ಮತ್ತು ಮಕ್ಕಳ ತಜ್ಞ ವೈದ್ಯರಿಲ್ಲದೆ ತೊಂದರೆಯಾಗಿದೆ. 27 ‘ಡಿ’ ಗ್ರೂಪ್ ನೌಕರರ ಹುದ್ದೆಗಳು ಖಾಲಿ ಇವೆ. ‘ಸಿ’ ಗ್ರೂಪ್ 6 ಹುದ್ದೆಗಳು ಖಾಲಿ ಇವೆ ಎಂದರು.</p>.<p>ಆಸ್ಪತ್ರೆಯಲ್ಲಿ ಒಳಚರಂಡಿ ಸಮಸ್ಯೆ ತಲೆನೋವಾಗಿದೆ. ಶುದ್ಧ ಕುಡಿಯುವ ನೀರಿನ ಘಟಕವಿಲ್ಲದೆ ರೋಗಿಗಳು ಮತ್ತು ಆಸ್ಪತ್ರೆ ಸಿಬ್ಬಂದಿಗೆ ಕುಡಿಯುವ ನೀರನ ಸಮಸ್ಯೆ ಹೇಳತೀರದಾಗಿದೆ. ಆಸ್ಪತ್ರೆ ಎಕ್ಸರೇ ಘಟಕದಲ್ಲಿ ವಿದ್ಯುತ್ ಸಂಪರ್ಕ ಸರಿಪಡಿಸಬೇಕು ಎಂದು ಮನವಿ ಮಾಡಿದರು.</p>.<p>ಆಢಳಿತಾಧಿಕಾರಿ ಮನವಿ ಆಲಿಸಿದ ಶಾಸಕ ಎಚ್.ಸಿ.ಬಾಲಕೃಷ್ಣ, ಶೀಘ್ರದಲ್ಲಿಯೇ ಶುದ್ಧ ಕುಡಿಯುವ ನೀರು ಒದಗಿಸಿ, ಒಳಚರಂಡಿ ವ್ಯವಸ್ಥೆ ಸರಿಪಡಿಸಿಕೊಡಲಾಗುವುದು. ಖಾಲಿ ಇರುವ ವೈದ್ಯರು ಮತ್ತು ಸಿಬ್ಬಂದಿ ಹುದ್ದೆ ಭರ್ತಿಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು. </p>.<p>ತಾಲ್ಲೂಕು ಪಂಚಾಯಿತಿ ಇಒ ಚಂದ್ರ, ವೈದ್ಯರಾದ ಡಾ.ಆಶಾದೇವಿ, ಡಾ.ಯಶವಂತ್ಕುಮಾರ್, ಡಾ.ಮಂಜುಳಾ, ಡಾ.ನಾಗನಾಥ್, ಡಾ.ಫಾರೂಕ್ ಅಹಮದ್, ಡಾ.ಮುದಾಳೆ, ಡಾ.ಚಂದ್ರಿಕಾ, ಡಾ.ವಿಶ್ವನಾಥ್, ಆಂಜಿನಮ್ಮ, ಫಾರ್ಮಾಸಿಸ್ಟ್ ಗುಣಶೇಖರ್, ನರ್ಸಿಂಗ್ ಸೂಪರಿಂಟೆಂಡೆಟ್ ಪದ್ಮಾ ಹಾಗೂ ಆಸ್ಪತ್ರೆ ಸಿಬ್ಬಂದಿ, ಶುಶ್ರೂಷಕಿಯರು, ಪರೀಕ್ಷಕರು ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>