ಬೆಂಗಳೂರಿನ ಆರ್.ಟಿ. ನಗರದ ವೆಲ್ಟಿಂಗ್ ಕಾರ್ಮಿಕ ಸಯ್ಯದ್ ಮಸೂದ್ (36) ಮೃತರು. ಪ್ರಕರಣಕ್ಕೆ ಸಂಬಂಧಿಸಿ ಸೋಲೂರಿನವರಾದ ರಾಘವೇಂದ್ರ, ಬಾಬು ಮತ್ತು ಪ್ರದೀಪ ಎಂಬುವರನ್ನು ಕುದೂರು ಪೊಲೀಸರು ಬಂಧಿಸಿದ್ದಾರೆ. ರಾತ್ರಿ ಬೆಂಗಳೂರು–ಮಂಗಳೂರು ಹೆದ್ದಾರಿಯಲ್ಲಿ ಆರೋಪಿಗಳು ಪ್ರಯಾಣಿಸುತ್ತಿದ್ದ ಕಾರಿಗೆ ಸಯ್ಯದ್ ಬೈಕ್ ತಗುಲಿದೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿ ಮಾತಿಗೆ ಮಾತು ಬೆಳೆದು ಪರಸ್ಪರ ಕೈಕೈ ಮಿಲಾಯಿಸಿದ್ದಾರೆ. ಇದರಿಂದ ಸಯ್ಯದ್ ತೀವ್ರವಾಗಿ ಗಾಯಗೊಂಡಿದ್ದು, ಸೋಲೂರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬೆಂಗಳೂರಿನ ನಿಮ್ಹಾನ್ಸ್ಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆ. ಕುದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.