<p>ಮಾಗಡಿ: ಪಟ್ಟಣದಲ್ಲಿ ಕುಂಟುತ್ತಾ ಸಾಗುತ್ತಿರುವ ಕೆ-ಶಿಪ್ ಚತುಷ್ಪಥ ಕಾಮಗಾರಿಯಿಂದಾಗಿ ಸಾರ್ವಜನಿಕರು ಮತ್ತು ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ.</p>.<p>ಅವೈಜ್ಞಾನಿಕ ಚರಂಡಿ ವ್ಯವಸ್ಥೆ ಹಾಗೂ ವಿಪರೀತ ದೂಳಿನಿಂದಾಗಿ ಜನರು, ವಾಹನ ಸವಾರರು ಪರದಾಡುತ್ತಿದ್ದಾರೆ.</p>.<p>ಜೆಡಿಎಸ್ ಕಚೇರಿಯ ಮುಂಭಾಗ ಹಾಗೂ ಮಾರುತಿ ಮೋಹನ್ ಚಿತ್ರಮಂದಿರ ಮುಂಭಾಗ ಸರಿಯಾಗಿ ಚರಂಡಿ ಸಂಪರ್ಕ ಇಲ್ಲದೆ ಕೊಳಚೆ ನೀರು ರಸ್ತೆ ತುಂಬಾ ಹರಿಯುತ್ತಿದೆ. ಇದರಿಂದ ಹೊರಹೊಮ್ಮುವ ಅಸಾಧ್ಯ ದುರ್ವಾಸನೆಯಿಂದ ಮಾಗಡಿ-ಬೆಂಗಳೂರು ಮುಖ್ಯರಸ್ತೆ ಸಂಚಾರ ಎಂದರೆ ಬೆದರುವಂತಾಗಿದೆ.</p>.<p>ಮಾಗಡಿ ಮಾರ್ಗವಾಗಿ ಬೆಂಗಳೂರಿನಿಂದ ಕುಣಿಗಲ್, ಹಾಸನ, ಮಂಗಳೂರು, ಹುಲಿಯೂರುದುರ್ಗ, ಮದ್ದೂರು ಹಾಗೂ ಮೈಸೂರಿಗೆ ಸಾವಿರಾರು ವಾಹನ ಸಂಚರಿಸುತ್ತವೆ. ಅದರಲ್ಲೂ ವಾರಾಂತ್ಯ, ರಜಾ ದಿನಗಳಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿರುತ್ತದೆ. ರಸ್ತೆ ಕಾಮಗಾರಿ ಪೂರ್ಣಗೊಳ್ಳದ ಕಾರಣ ತಾಸುಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ.</p>.<p>ಶೀಘ್ರ ಕಾಮಗಾರಿ ಮುಗಿಸಿ ಚರಂಡಿ ವ್ಯವಸ್ಥೆ ಸರಿಪಡಿಸಬೇಕು. ಇಲ್ಲವಾದರೆ ಕೆ-ಶಿಪ್ ವಿರುದ್ಧ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ವಿಜಯ ಕುಮಾರ್ ಎಚ್ಚರಿಸಿದ್ದಾರೆ.</p>.<h2><strong>ಸಾರ್ವಜನಿಕರಿಗೆ ತೊಂದರೆ</strong></h2><p>ಕಳೆದ ಎಂಟು ವರ್ಷಗಳಿಂದಲೂ ಕೂಡ ರಸ್ತೆ ಕಾಮಗಾರಿ ಪೂರ್ಣ ಮಾಡದೇ ಚರಂಡಿ ಸಂಪರ್ಕ ಜೊತೆಗೆ ನೀರಿನ ಸಂಪರ್ಕದ ಪೈಪ್ ಕಡಿತ ಮಾಡಿರುವ ಕೆ-ಶೀಪ್ ಅಧಿಕಾರಿಗಳು ಸಾಕಷ್ಟು ನಿರ್ಲಕ್ಷ ಮಾಡುತ್ತಿದ್ದಾರೆ. ಈ ಬಗ್ಗೆ ಹಲವು ಬಾರಿ ಅಧಿಕಾರಿಗಳ ಜೊತೆ ಚರ್ಚೆ ಮಾಡಿದರು ಕೂಡ ಚರಂಡಿ ಸಂಪರ್ಕ ಪೂರ್ಣ ಮಾಡಿಲ್ಲ ಮತ್ತು ಟಿಸಿಯನ್ನು ಕೂಡ ತೆರವು ಮಾಡದೆ ನಿರ್ಲಕ್ಷ ಮಾಡಿದ್ದಾರೆ ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ.</p><p><strong>ಎಂ.ಎನ್.ಮಂಜುನಾಥ್, ಪುರಸಭೆ ಮಾಜಿ ಸದಸ್ಯರು ಮಾಗಡಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾಗಡಿ: ಪಟ್ಟಣದಲ್ಲಿ ಕುಂಟುತ್ತಾ ಸಾಗುತ್ತಿರುವ ಕೆ-ಶಿಪ್ ಚತುಷ್ಪಥ ಕಾಮಗಾರಿಯಿಂದಾಗಿ ಸಾರ್ವಜನಿಕರು ಮತ್ತು ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ.</p>.<p>ಅವೈಜ್ಞಾನಿಕ ಚರಂಡಿ ವ್ಯವಸ್ಥೆ ಹಾಗೂ ವಿಪರೀತ ದೂಳಿನಿಂದಾಗಿ ಜನರು, ವಾಹನ ಸವಾರರು ಪರದಾಡುತ್ತಿದ್ದಾರೆ.</p>.<p>ಜೆಡಿಎಸ್ ಕಚೇರಿಯ ಮುಂಭಾಗ ಹಾಗೂ ಮಾರುತಿ ಮೋಹನ್ ಚಿತ್ರಮಂದಿರ ಮುಂಭಾಗ ಸರಿಯಾಗಿ ಚರಂಡಿ ಸಂಪರ್ಕ ಇಲ್ಲದೆ ಕೊಳಚೆ ನೀರು ರಸ್ತೆ ತುಂಬಾ ಹರಿಯುತ್ತಿದೆ. ಇದರಿಂದ ಹೊರಹೊಮ್ಮುವ ಅಸಾಧ್ಯ ದುರ್ವಾಸನೆಯಿಂದ ಮಾಗಡಿ-ಬೆಂಗಳೂರು ಮುಖ್ಯರಸ್ತೆ ಸಂಚಾರ ಎಂದರೆ ಬೆದರುವಂತಾಗಿದೆ.</p>.<p>ಮಾಗಡಿ ಮಾರ್ಗವಾಗಿ ಬೆಂಗಳೂರಿನಿಂದ ಕುಣಿಗಲ್, ಹಾಸನ, ಮಂಗಳೂರು, ಹುಲಿಯೂರುದುರ್ಗ, ಮದ್ದೂರು ಹಾಗೂ ಮೈಸೂರಿಗೆ ಸಾವಿರಾರು ವಾಹನ ಸಂಚರಿಸುತ್ತವೆ. ಅದರಲ್ಲೂ ವಾರಾಂತ್ಯ, ರಜಾ ದಿನಗಳಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿರುತ್ತದೆ. ರಸ್ತೆ ಕಾಮಗಾರಿ ಪೂರ್ಣಗೊಳ್ಳದ ಕಾರಣ ತಾಸುಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ.</p>.<p>ಶೀಘ್ರ ಕಾಮಗಾರಿ ಮುಗಿಸಿ ಚರಂಡಿ ವ್ಯವಸ್ಥೆ ಸರಿಪಡಿಸಬೇಕು. ಇಲ್ಲವಾದರೆ ಕೆ-ಶಿಪ್ ವಿರುದ್ಧ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ವಿಜಯ ಕುಮಾರ್ ಎಚ್ಚರಿಸಿದ್ದಾರೆ.</p>.<h2><strong>ಸಾರ್ವಜನಿಕರಿಗೆ ತೊಂದರೆ</strong></h2><p>ಕಳೆದ ಎಂಟು ವರ್ಷಗಳಿಂದಲೂ ಕೂಡ ರಸ್ತೆ ಕಾಮಗಾರಿ ಪೂರ್ಣ ಮಾಡದೇ ಚರಂಡಿ ಸಂಪರ್ಕ ಜೊತೆಗೆ ನೀರಿನ ಸಂಪರ್ಕದ ಪೈಪ್ ಕಡಿತ ಮಾಡಿರುವ ಕೆ-ಶೀಪ್ ಅಧಿಕಾರಿಗಳು ಸಾಕಷ್ಟು ನಿರ್ಲಕ್ಷ ಮಾಡುತ್ತಿದ್ದಾರೆ. ಈ ಬಗ್ಗೆ ಹಲವು ಬಾರಿ ಅಧಿಕಾರಿಗಳ ಜೊತೆ ಚರ್ಚೆ ಮಾಡಿದರು ಕೂಡ ಚರಂಡಿ ಸಂಪರ್ಕ ಪೂರ್ಣ ಮಾಡಿಲ್ಲ ಮತ್ತು ಟಿಸಿಯನ್ನು ಕೂಡ ತೆರವು ಮಾಡದೆ ನಿರ್ಲಕ್ಷ ಮಾಡಿದ್ದಾರೆ ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ.</p><p><strong>ಎಂ.ಎನ್.ಮಂಜುನಾಥ್, ಪುರಸಭೆ ಮಾಜಿ ಸದಸ್ಯರು ಮಾಗಡಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>