<p><strong>ಮಾಗಡಿ:</strong> ತಾಲ್ಲೂಕಿನ ತಟವಾಳು ಗ್ರಾಮದ ರೈತ ಶೇಖರ್ ಅವರ ಜಮೀನಿನಲ್ಲಿ ಚಂದೂರಾಯನಹಳ್ಳಿ ಕೃಷಿ ವಿಜ್ಞಾನ ಕೇಂದ್ರ ರಾಗಿ ತಳಿ ಕ್ಷೇತ್ರೊತ್ಸವ ಹಮ್ಮಿಕೊಂಡಿತ್ತು.</p>.<p>ತಡವಾದ ಮುಂಗಾರಿಗೆ ಮತ್ತು ಖುಷ್ಕಿ ಬೇಸಾಯಕ್ಕೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಬಿಡುಗಡೆ ಮಾಡಿದ ಅಲ್ಪಾವಧಿ ಕೆಎಂಆರ್ 316 ರಾಗಿ ತಳಿ ಸೂಕ್ತ ಎಂದು ಕೆವಿಕೆ ಬೇಸಾಯ ಶಾಸ್ತ್ರ ವಿಜ್ಞಾನಿ ಡಾ.ಪ್ರಮೋದ್ ಜಿ. ಹೇಳಿದರು.</p>.<p>ಪೂರ್ವ ಮುಂಗಾರು ಅವಧಿಯಲ್ಲಿ (ಜೂನ್-ಜುಲೈ) ಬೆಳೆದ ಅಲಸಂದೆ, ಹೆಸರು, ಉದ್ದು ಅಥವಾ ಎಳ್ಳು ಕಟಾವು ಆದ ನಂತರ ಅಗಸ್ಟ್-ಸೆಪ್ಟಂಬರ್ ತಿಂಗಳಲ್ಲಿ ಬಿತ್ತನೆ ಮಾಡಲು ಈ ತಳಿ ಸೂಕ್ತ. 100 ರಿಂದ 105 ದಿನಕ್ಕೆ ಕಟಾವಿಗೆ ಬರುತ್ತದೆ. ಎಕರೆಗೆ 12-14 ಕ್ವಿಂಟಲ್ ಮತ್ತು ನೀರಾವರಿಯಲ್ಲಿ 18-20ಕ್ವಿಂಟಲ್ ಇಳುವರಿ ಪಡೆಯಬಹುದು ಎಂದು ತಿಳಿಸಿದರು.</p>.<p>ತಟವಾಳು ಮತ್ತು ಸುತ್ತಲಿನ ಗ್ರಾಮದ ರೈತರು ಮತ್ತು ಕೆ.ವಿಕೆ ವಿಜ್ಞಾನಿಗಳಾದ ಡಾ.ರಾಜೇಂದ್ರ ಪ್ರಸಾದ್ ಬಿ.ಎಸ್., ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ:</strong> ತಾಲ್ಲೂಕಿನ ತಟವಾಳು ಗ್ರಾಮದ ರೈತ ಶೇಖರ್ ಅವರ ಜಮೀನಿನಲ್ಲಿ ಚಂದೂರಾಯನಹಳ್ಳಿ ಕೃಷಿ ವಿಜ್ಞಾನ ಕೇಂದ್ರ ರಾಗಿ ತಳಿ ಕ್ಷೇತ್ರೊತ್ಸವ ಹಮ್ಮಿಕೊಂಡಿತ್ತು.</p>.<p>ತಡವಾದ ಮುಂಗಾರಿಗೆ ಮತ್ತು ಖುಷ್ಕಿ ಬೇಸಾಯಕ್ಕೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಬಿಡುಗಡೆ ಮಾಡಿದ ಅಲ್ಪಾವಧಿ ಕೆಎಂಆರ್ 316 ರಾಗಿ ತಳಿ ಸೂಕ್ತ ಎಂದು ಕೆವಿಕೆ ಬೇಸಾಯ ಶಾಸ್ತ್ರ ವಿಜ್ಞಾನಿ ಡಾ.ಪ್ರಮೋದ್ ಜಿ. ಹೇಳಿದರು.</p>.<p>ಪೂರ್ವ ಮುಂಗಾರು ಅವಧಿಯಲ್ಲಿ (ಜೂನ್-ಜುಲೈ) ಬೆಳೆದ ಅಲಸಂದೆ, ಹೆಸರು, ಉದ್ದು ಅಥವಾ ಎಳ್ಳು ಕಟಾವು ಆದ ನಂತರ ಅಗಸ್ಟ್-ಸೆಪ್ಟಂಬರ್ ತಿಂಗಳಲ್ಲಿ ಬಿತ್ತನೆ ಮಾಡಲು ಈ ತಳಿ ಸೂಕ್ತ. 100 ರಿಂದ 105 ದಿನಕ್ಕೆ ಕಟಾವಿಗೆ ಬರುತ್ತದೆ. ಎಕರೆಗೆ 12-14 ಕ್ವಿಂಟಲ್ ಮತ್ತು ನೀರಾವರಿಯಲ್ಲಿ 18-20ಕ್ವಿಂಟಲ್ ಇಳುವರಿ ಪಡೆಯಬಹುದು ಎಂದು ತಿಳಿಸಿದರು.</p>.<p>ತಟವಾಳು ಮತ್ತು ಸುತ್ತಲಿನ ಗ್ರಾಮದ ರೈತರು ಮತ್ತು ಕೆ.ವಿಕೆ ವಿಜ್ಞಾನಿಗಳಾದ ಡಾ.ರಾಜೇಂದ್ರ ಪ್ರಸಾದ್ ಬಿ.ಎಸ್., ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>