<p><strong>ಮಾಗಡಿ</strong>: ಕಳೆದ ಹತ್ತು ವರ್ಷಗಳಿಂದ ಜನರಿಗೆ ನೀರಿನ ಬಿಲ್ ನೀಡದೆ ಬಾಕಿ ಉಳಿಸಿಕೊಂಡಿದ್ದ ಪುರಸಭೆ ಈಗ ಏಕಾಏಕಿ ₹10 ರಿಂದ ₹13 ಸಾವಿರದವರೆಗೆ ನೀರಿನ ಕರ ವಿಧಿಸುವ ಮೂಲಕ ಸಾರ್ವಜನಿಕರಿಗೆ ಆಘಾತ ನೀಡಿದೆ ಎಂದು ಬಿಜೆಪಿ ತಾಲ್ಲೂಕು ಅಧ್ಯಕ್ಷ ಪ್ರಸಾದ್ ಗೌಡ ಆರೋಪಿಸಿದ್ದಾರೆ.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ನೀರಿನ ಕರದ ಬಿಲ್ ಪ್ರತಿಗಳನ್ನು ಪ್ರದರ್ಶಿಸಿ ಮಾತನಾಡಿದ ಅವರು, ಹತ್ತು ವರ್ಷದಿಂದ ಪುರಸಭೆ ಸಿಬ್ಬಂದಿ ಏನು ಮಾಡುತ್ತಿದ್ದರು? ನೀರಿನ ಕರ ಏಕೆ ವಸೂಲಿ ಮಾಡಲಿಲ್ಲ ಎಂದು ಪ್ರಶ್ನಿಸಿದರು.</p>.<p>ಬಾಕಿ ನೀರಿನ ಕರ ಪಾವತಿಸದಿದ್ದರೆ ನೀರಿನ ಸಂಪರ್ಕ ಕಡಿತಗೊಳಿಸುವುದಾಗಿ ಪುರಸಭೆ ಸಿಬ್ಬಂದಿ ಜನರನ್ನು ಹೆದರಿಸುತ್ತಿದ್ದಾರೆ. ಇಷ್ಟು ದೊಡ್ಡ ಮೊತ್ತದ ಹಣವನ್ನು ಬಡವರು ಒಂದೇ ಬಾರಿಗೆ ಪಾವತಿಸಲು ಸಾಧ್ಯವೇ ಎಂದು ಕೇಳಿದರು.</p>.<p>ಶಾಸಕ ಎಚ್.ಸಿ. ಬಾಲಕೃಷ್ಣ ಮತ್ತು ಪುರಸಭೆ ಮುಖ್ಯಧಿಕಾರಿ ಮಧ್ಯಪ್ರವೇಶಿಸಿ ಬಾಕಿ ಕರ ಮನ್ನಾ ಮಾಡಬೇಕು. ಇಲ್ಲದಿದ್ದರೆ ಪುರಸಭೆ ಮುಂದೆ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.</p>.<p>ಬಿಜೆಪಿಯ ರಾಜೇಶ್, ರಾಘವೇಂದ್ರ, ಶಶಿ, ನಿಜಗುಣ, ಶ್ರೀಧರ್, ನಾರಾಯಣ್ ಸ್ವಾಮಿ, ಜಯರಾಂ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-14-1837065484</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ</strong>: ಕಳೆದ ಹತ್ತು ವರ್ಷಗಳಿಂದ ಜನರಿಗೆ ನೀರಿನ ಬಿಲ್ ನೀಡದೆ ಬಾಕಿ ಉಳಿಸಿಕೊಂಡಿದ್ದ ಪುರಸಭೆ ಈಗ ಏಕಾಏಕಿ ₹10 ರಿಂದ ₹13 ಸಾವಿರದವರೆಗೆ ನೀರಿನ ಕರ ವಿಧಿಸುವ ಮೂಲಕ ಸಾರ್ವಜನಿಕರಿಗೆ ಆಘಾತ ನೀಡಿದೆ ಎಂದು ಬಿಜೆಪಿ ತಾಲ್ಲೂಕು ಅಧ್ಯಕ್ಷ ಪ್ರಸಾದ್ ಗೌಡ ಆರೋಪಿಸಿದ್ದಾರೆ.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ನೀರಿನ ಕರದ ಬಿಲ್ ಪ್ರತಿಗಳನ್ನು ಪ್ರದರ್ಶಿಸಿ ಮಾತನಾಡಿದ ಅವರು, ಹತ್ತು ವರ್ಷದಿಂದ ಪುರಸಭೆ ಸಿಬ್ಬಂದಿ ಏನು ಮಾಡುತ್ತಿದ್ದರು? ನೀರಿನ ಕರ ಏಕೆ ವಸೂಲಿ ಮಾಡಲಿಲ್ಲ ಎಂದು ಪ್ರಶ್ನಿಸಿದರು.</p>.<p>ಬಾಕಿ ನೀರಿನ ಕರ ಪಾವತಿಸದಿದ್ದರೆ ನೀರಿನ ಸಂಪರ್ಕ ಕಡಿತಗೊಳಿಸುವುದಾಗಿ ಪುರಸಭೆ ಸಿಬ್ಬಂದಿ ಜನರನ್ನು ಹೆದರಿಸುತ್ತಿದ್ದಾರೆ. ಇಷ್ಟು ದೊಡ್ಡ ಮೊತ್ತದ ಹಣವನ್ನು ಬಡವರು ಒಂದೇ ಬಾರಿಗೆ ಪಾವತಿಸಲು ಸಾಧ್ಯವೇ ಎಂದು ಕೇಳಿದರು.</p>.<p>ಶಾಸಕ ಎಚ್.ಸಿ. ಬಾಲಕೃಷ್ಣ ಮತ್ತು ಪುರಸಭೆ ಮುಖ್ಯಧಿಕಾರಿ ಮಧ್ಯಪ್ರವೇಶಿಸಿ ಬಾಕಿ ಕರ ಮನ್ನಾ ಮಾಡಬೇಕು. ಇಲ್ಲದಿದ್ದರೆ ಪುರಸಭೆ ಮುಂದೆ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.</p>.<p>ಬಿಜೆಪಿಯ ರಾಜೇಶ್, ರಾಘವೇಂದ್ರ, ಶಶಿ, ನಿಜಗುಣ, ಶ್ರೀಧರ್, ನಾರಾಯಣ್ ಸ್ವಾಮಿ, ಜಯರಾಂ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-14-1837065484</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>