<p>ಕನಕಪುರ: ‘ಮಹರ್ಷಿ ವಾಲ್ಮೀಕಿ ಜಯಂತಿಯನ್ನು ತಾಲ್ಲೂಕು ಆಡಳಿತ ಕಾಟಾಚಾರಕ್ಕಾಗಿ ಆಚರಣೆ ಮಾಡುತ್ತಿದೆ. ಕಾರ್ಯಕ್ರಮದಲ್ಲಿ ಹಲವು ಇಲಾಖೆಯ ಅಧಿಕಾರಿಗಳೇ ಗೈರುಹಾಜರಾಗಿದ್ದಾರೆ’ ಎಂದು ವಾಲ್ಮೀಕಿ ಸಮುದಾಯದ ಮುಖಂಡ ಡಿ. ಶ್ರೀನಿವಾಸ್ ವಿಷಾದಿಸಿದರು.</p>.<p>ಮಿನಿ ವಿಧಾನಸೌಧದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶನಿವಾರ ನಡೆದ ವಾಲ್ಮೀಕಿ ಜಯಂತಿಯಲ್ಲಿ ಮಾತನಾಡಿದರು.</p>.<p>ಸರ್ಕಾರವು ಮಹನೀಯರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಕ್ರಮವಹಿಸಿದೆ. ಅವರ ವಿಚಾರಧಾರೆಗಳನ್ನು ಜನತೆಗೆ ತಿಳಿಸಲು ಮುಂದಾಗಿದೆ. ಮಹನೀಯರ ತತ್ವ, ಆದರ್ಶಗಳನ್ನು ಪಾಲಿಸಿ ಸರಿದಾರಿಯಲ್ಲಿ ಸಾಗಲು ಜಯಂತಿಗಳಿಗೆ ಸರ್ಕಾರ ರಜೆ ನೀಡುತ್ತಿದೆ.ಬೆರಳೆಣಿಕೆಯಷ್ಟು ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ ಎಂದರು.</p>.<p>‘ಕೊರೊನಾ ಕಾರಣದಿಂದ ಹೆಚ್ಚಿನ ಜನರು ಗುಂಪು ಸೇರಿದಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ. ಇದರಿಂದ ಕೆಲವರು ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ’ ಎಂದು ತಾಲ್ಲೂಕು ಕಚೇರಿಯ ಶಿರಸ್ತೇದಾರ್ ರಘು ತಿಳಿಸಿದರು.</p>.<p>ಇದರಿಂದ ಬೇಸರಗೊಂಡ ಶ್ರೀನಿವಾಸ್, ‘ಸರ್ಕಾರ ಜನರನ್ನು ಗುಂಪು ಸೇರಿಸಬಾರದೆಂದು ತಿಳಿಸಿದೆ. ಮಾಸ್ಕ್ ಧರಿಸಿ ಪಾಲ್ಗೊಳ್ಳಬೇಕಿತ್ತು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷರಾಗಿರುವ ತಹಶೀಲ್ದಾರ್ ಅವರೇ ಕಾರ್ಯಕ್ರಮಕ್ಕೆ ಬಂದಿಲ್ಲ’ ಎಂದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಜೆ.ಎಂ. ಜಯಲಕ್ಷ್ಮಿ ಅಧ್ಯಕ್ಷತೆವಹಿಸಿದ್ದರು. ಜಿಲ್ಲಾ ಲೇಖಕರ ವೇದಿಕೆಯ ಅಧ್ಯಕ್ಷ ಕೂ.ಗಿ. ಗಿರಿಯಪ್ಪ ವಾಲ್ಮೀಕಿ ಬಗ್ಗೆ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಪುರ: ‘ಮಹರ್ಷಿ ವಾಲ್ಮೀಕಿ ಜಯಂತಿಯನ್ನು ತಾಲ್ಲೂಕು ಆಡಳಿತ ಕಾಟಾಚಾರಕ್ಕಾಗಿ ಆಚರಣೆ ಮಾಡುತ್ತಿದೆ. ಕಾರ್ಯಕ್ರಮದಲ್ಲಿ ಹಲವು ಇಲಾಖೆಯ ಅಧಿಕಾರಿಗಳೇ ಗೈರುಹಾಜರಾಗಿದ್ದಾರೆ’ ಎಂದು ವಾಲ್ಮೀಕಿ ಸಮುದಾಯದ ಮುಖಂಡ ಡಿ. ಶ್ರೀನಿವಾಸ್ ವಿಷಾದಿಸಿದರು.</p>.<p>ಮಿನಿ ವಿಧಾನಸೌಧದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶನಿವಾರ ನಡೆದ ವಾಲ್ಮೀಕಿ ಜಯಂತಿಯಲ್ಲಿ ಮಾತನಾಡಿದರು.</p>.<p>ಸರ್ಕಾರವು ಮಹನೀಯರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಕ್ರಮವಹಿಸಿದೆ. ಅವರ ವಿಚಾರಧಾರೆಗಳನ್ನು ಜನತೆಗೆ ತಿಳಿಸಲು ಮುಂದಾಗಿದೆ. ಮಹನೀಯರ ತತ್ವ, ಆದರ್ಶಗಳನ್ನು ಪಾಲಿಸಿ ಸರಿದಾರಿಯಲ್ಲಿ ಸಾಗಲು ಜಯಂತಿಗಳಿಗೆ ಸರ್ಕಾರ ರಜೆ ನೀಡುತ್ತಿದೆ.ಬೆರಳೆಣಿಕೆಯಷ್ಟು ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ ಎಂದರು.</p>.<p>‘ಕೊರೊನಾ ಕಾರಣದಿಂದ ಹೆಚ್ಚಿನ ಜನರು ಗುಂಪು ಸೇರಿದಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ. ಇದರಿಂದ ಕೆಲವರು ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ’ ಎಂದು ತಾಲ್ಲೂಕು ಕಚೇರಿಯ ಶಿರಸ್ತೇದಾರ್ ರಘು ತಿಳಿಸಿದರು.</p>.<p>ಇದರಿಂದ ಬೇಸರಗೊಂಡ ಶ್ರೀನಿವಾಸ್, ‘ಸರ್ಕಾರ ಜನರನ್ನು ಗುಂಪು ಸೇರಿಸಬಾರದೆಂದು ತಿಳಿಸಿದೆ. ಮಾಸ್ಕ್ ಧರಿಸಿ ಪಾಲ್ಗೊಳ್ಳಬೇಕಿತ್ತು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷರಾಗಿರುವ ತಹಶೀಲ್ದಾರ್ ಅವರೇ ಕಾರ್ಯಕ್ರಮಕ್ಕೆ ಬಂದಿಲ್ಲ’ ಎಂದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಜೆ.ಎಂ. ಜಯಲಕ್ಷ್ಮಿ ಅಧ್ಯಕ್ಷತೆವಹಿಸಿದ್ದರು. ಜಿಲ್ಲಾ ಲೇಖಕರ ವೇದಿಕೆಯ ಅಧ್ಯಕ್ಷ ಕೂ.ಗಿ. ಗಿರಿಯಪ್ಪ ವಾಲ್ಮೀಕಿ ಬಗ್ಗೆ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>