<p><strong>ಚನ್ನಪಟ್ಟಣ</strong>: ‘ರಾಮಾಯಣ ಮಹಾಕಾವ್ಯ ಬರೆದು ಸಮಾಜಕ್ಕೆ ಮಹತ್ವವಾದ ಸಂದೇಶ ನೀಡಿದ ಮಹಾಕವಿ ವಾಲ್ಮೀಕಿ ಅವರು ಸಾರ್ವಕಾಲಿಕ ಶ್ರೇಷ್ಠ ಕವಿ’ ಎಂದು ತಹಶೀಲ್ದಾರ್ ನಾಗೇಶ್ ಬಣ್ಣಿಸಿದರು.</p>.<p>ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ತಾಲ್ಲೂಕು ಆಡಳಿತದಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಸಮಾರಂಭದಲ್ಲಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.</p>.<p>‘ಎಂತಹ ಕಟುಕ ಕೂಡ ಉತ್ತಮ ಮಾರ್ಗದರ್ಶನ ಲಭಿಸಿದರೆ ಮನಪರಿವರ್ತನೆಯಾಗಿ ಸಮಾಜಕ್ಕೆ ಕೊಡುಗೆ ನೀಡುತ್ತಾನೆ ಎಂಬುದಕ್ಕೆ ವಾಲ್ಮೀಕಿ ಅವರೇ ಸಾಕ್ಷಿಯಾಗಿದ್ದಾರೆ. ಬೇಟೆಗಾರನಾಗಿ ಪ್ರಯಾಣಿಕರನ್ನು ದರೋಡೆ ಮಾಡಿಕೊಂಡು ಸಮಾಜ ಕಂಟಕರಾಗಿದ್ದ ವಾಲ್ಮೀಕಿ ಅವರ ಜೀವನವನ್ನು ನಾರದ ಮುನಿಗಳು ಬದಲಾಯಿಸಿದರು. ಆ ಮೂಲಕ ಪ್ರಪಂಚದ ಶ್ರೇಷ್ಠ ಕಾವ್ಯ ರಚಿಸಲು ಕಾರಣರಾದರು’ ಎಂದರು.</p>.<p>ದಲಿತ ಮುಖಂಡ ಕೋಟೆ ಸಿದ್ದರಾಮಯ್ಯ ಮಾತನಾಡಿ, ಮಹಾನ್ ಪುರುಷರ ಜಯಂತಿ ಕಾರ್ಯಕ್ರಮಕ್ಕೆ ಎಲ್ಲ ಇಲಾಖೆಯ ಅಧಿಕಾರಿಗಳು ಹಾಜರಿರಬೇಕು. ಆಗ ಮಾತ್ರ ಕಾರ್ಯಕ್ರಮಗಳಿಗೆ ಶೋಭೆ ಬರುತ್ತದೆ. ಕೆಲವೇ ಮಂದಿ ಹಾಜರಾಗುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣಾಧಿಕಾರಿ ಸರೋಜಮ್ಮ, ಶಿಕ್ಷಣ ಇಲಾಖೆಯ ಶಿವಣ್ಣ, ಶಿಕ್ಷಣ ಸಂಯೋಜಕರಾದ ಗಂಗಾಧರ್, ಪ್ರಶಾಂತ್, ಮುಖಂಡರಾದ ವಂದಾರಗುಪ್ಪೆ ರಾಜೇಶ್, ನೀಲಸಂದ್ರ ಸದಾನಂದ, ಅಪ್ಪಗೆರೆ ಶ್ರೀನಿವಾಸ್, ವೆಂಕಟೇಶ್, ಚಕ್ಕಲೂರು ಚೌಡಯ್ಯ, ಕೆಂಚೇಗೌಡ, ಜಯರಾಮು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ‘ರಾಮಾಯಣ ಮಹಾಕಾವ್ಯ ಬರೆದು ಸಮಾಜಕ್ಕೆ ಮಹತ್ವವಾದ ಸಂದೇಶ ನೀಡಿದ ಮಹಾಕವಿ ವಾಲ್ಮೀಕಿ ಅವರು ಸಾರ್ವಕಾಲಿಕ ಶ್ರೇಷ್ಠ ಕವಿ’ ಎಂದು ತಹಶೀಲ್ದಾರ್ ನಾಗೇಶ್ ಬಣ್ಣಿಸಿದರು.</p>.<p>ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ತಾಲ್ಲೂಕು ಆಡಳಿತದಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಸಮಾರಂಭದಲ್ಲಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.</p>.<p>‘ಎಂತಹ ಕಟುಕ ಕೂಡ ಉತ್ತಮ ಮಾರ್ಗದರ್ಶನ ಲಭಿಸಿದರೆ ಮನಪರಿವರ್ತನೆಯಾಗಿ ಸಮಾಜಕ್ಕೆ ಕೊಡುಗೆ ನೀಡುತ್ತಾನೆ ಎಂಬುದಕ್ಕೆ ವಾಲ್ಮೀಕಿ ಅವರೇ ಸಾಕ್ಷಿಯಾಗಿದ್ದಾರೆ. ಬೇಟೆಗಾರನಾಗಿ ಪ್ರಯಾಣಿಕರನ್ನು ದರೋಡೆ ಮಾಡಿಕೊಂಡು ಸಮಾಜ ಕಂಟಕರಾಗಿದ್ದ ವಾಲ್ಮೀಕಿ ಅವರ ಜೀವನವನ್ನು ನಾರದ ಮುನಿಗಳು ಬದಲಾಯಿಸಿದರು. ಆ ಮೂಲಕ ಪ್ರಪಂಚದ ಶ್ರೇಷ್ಠ ಕಾವ್ಯ ರಚಿಸಲು ಕಾರಣರಾದರು’ ಎಂದರು.</p>.<p>ದಲಿತ ಮುಖಂಡ ಕೋಟೆ ಸಿದ್ದರಾಮಯ್ಯ ಮಾತನಾಡಿ, ಮಹಾನ್ ಪುರುಷರ ಜಯಂತಿ ಕಾರ್ಯಕ್ರಮಕ್ಕೆ ಎಲ್ಲ ಇಲಾಖೆಯ ಅಧಿಕಾರಿಗಳು ಹಾಜರಿರಬೇಕು. ಆಗ ಮಾತ್ರ ಕಾರ್ಯಕ್ರಮಗಳಿಗೆ ಶೋಭೆ ಬರುತ್ತದೆ. ಕೆಲವೇ ಮಂದಿ ಹಾಜರಾಗುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣಾಧಿಕಾರಿ ಸರೋಜಮ್ಮ, ಶಿಕ್ಷಣ ಇಲಾಖೆಯ ಶಿವಣ್ಣ, ಶಿಕ್ಷಣ ಸಂಯೋಜಕರಾದ ಗಂಗಾಧರ್, ಪ್ರಶಾಂತ್, ಮುಖಂಡರಾದ ವಂದಾರಗುಪ್ಪೆ ರಾಜೇಶ್, ನೀಲಸಂದ್ರ ಸದಾನಂದ, ಅಪ್ಪಗೆರೆ ಶ್ರೀನಿವಾಸ್, ವೆಂಕಟೇಶ್, ಚಕ್ಕಲೂರು ಚೌಡಯ್ಯ, ಕೆಂಚೇಗೌಡ, ಜಯರಾಮು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>