<p><strong>ರಾಮನಗರ</strong>: ನನಗೆ ಮುಖ್ಯಮಂತ್ರಿ ಸ್ಥಾನ ಕೊಟ್ಟರೆ ರಾಜ್ಯದಲ್ಲಿ ಪಾರದರ್ಶಕ, ಆದರ್ಶ ಆಡಳಿತ ನೀಡುತ್ತೇನೆ. ಹಾಗೊಂದು ವೇಳೆ ಅದರಲ್ಲಿ ವಿಫಲವಾದರೆ 6 ತಿಂಗಳ ಬಳಿಕನಾನೇ ಅಧಿಕಾರದಿಂದ ಕೆಳಗೆ ಇಳಿಯುತ್ತೇನೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜು ಹೇಳಿದರು.</p>.<p>ಇಲ್ಲಿನ ಜಿಲ್ಲಾ ಸಂಕೀರ್ಣದ ಮುಂಭಾಗ ಬೆಂಬಲಿಗರೊಂದಿಗೆ ಬಸವ ಜಯಂತಿ ಆಚರಿಸಿ ಅವರು ಮಾತನಾಡಿದರು. ನಾನು 5 ಬಾರಿ ಶಾಸಕ, ವಿಧಾನ ಪರಿಷತ್ ಸದಸ್ಯನಾಗಿ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಂಡಿಲ್ಲ. ಹೀಗಾಗಿ ಅಧಿಕಾರ ಸಿಗಲಿಲ್ಲ. ಇಂದು ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಮುಖ್ಯಮಂತ್ರಿ, ಸಚಿವರು ಯಾರೊಬ್ಬರೂ ಪ್ರಾಮಾಣಿಕರಾಗಿಲ್ಲ. ಹೀಗಾಗಿ 6 ತಿಂಗಳು ನನಗೆ ಅಧಿಕಾರ ಕೊಡಿ ಎಂದು ಆಗ್ರಹಿಸಿದರು.</p>.<p>ಚಾಮರಾಜನಗರ ಸೇರಿದಂತೆ ರಾಜ್ಯದೆಲ್ಲೆಡೆ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಪರಿಹಾರ ವಿತರಿಸಬೇಕು. 3 ತಿಂಗಳ ಕಾಲ ಎಲ್ಲಾ ನಾಗರಿಕರ ವಿದ್ಯುತ್ ಮತ್ತು ನೀರಿನ ಬಿಲ್ ರದ್ದು ಮಾಡಬೇಕು. ಸಾಲ ಮರುಪಾವತಿ ಮತ್ತು ಬಡ್ಡಿಯನ್ನು ಮನ್ನಾ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ನನಗೆ ಮುಖ್ಯಮಂತ್ರಿ ಸ್ಥಾನ ಕೊಟ್ಟರೆ ರಾಜ್ಯದಲ್ಲಿ ಪಾರದರ್ಶಕ, ಆದರ್ಶ ಆಡಳಿತ ನೀಡುತ್ತೇನೆ. ಹಾಗೊಂದು ವೇಳೆ ಅದರಲ್ಲಿ ವಿಫಲವಾದರೆ 6 ತಿಂಗಳ ಬಳಿಕನಾನೇ ಅಧಿಕಾರದಿಂದ ಕೆಳಗೆ ಇಳಿಯುತ್ತೇನೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜು ಹೇಳಿದರು.</p>.<p>ಇಲ್ಲಿನ ಜಿಲ್ಲಾ ಸಂಕೀರ್ಣದ ಮುಂಭಾಗ ಬೆಂಬಲಿಗರೊಂದಿಗೆ ಬಸವ ಜಯಂತಿ ಆಚರಿಸಿ ಅವರು ಮಾತನಾಡಿದರು. ನಾನು 5 ಬಾರಿ ಶಾಸಕ, ವಿಧಾನ ಪರಿಷತ್ ಸದಸ್ಯನಾಗಿ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಂಡಿಲ್ಲ. ಹೀಗಾಗಿ ಅಧಿಕಾರ ಸಿಗಲಿಲ್ಲ. ಇಂದು ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಮುಖ್ಯಮಂತ್ರಿ, ಸಚಿವರು ಯಾರೊಬ್ಬರೂ ಪ್ರಾಮಾಣಿಕರಾಗಿಲ್ಲ. ಹೀಗಾಗಿ 6 ತಿಂಗಳು ನನಗೆ ಅಧಿಕಾರ ಕೊಡಿ ಎಂದು ಆಗ್ರಹಿಸಿದರು.</p>.<p>ಚಾಮರಾಜನಗರ ಸೇರಿದಂತೆ ರಾಜ್ಯದೆಲ್ಲೆಡೆ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಪರಿಹಾರ ವಿತರಿಸಬೇಕು. 3 ತಿಂಗಳ ಕಾಲ ಎಲ್ಲಾ ನಾಗರಿಕರ ವಿದ್ಯುತ್ ಮತ್ತು ನೀರಿನ ಬಿಲ್ ರದ್ದು ಮಾಡಬೇಕು. ಸಾಲ ಮರುಪಾವತಿ ಮತ್ತು ಬಡ್ಡಿಯನ್ನು ಮನ್ನಾ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>